ಮಂಗಳವಾರದಿಂದ ಮಹಾದಾಯಿ ವಿಚಾರಣೆ, ಎಲ್ಲರ ಕಣ್ಣು ನ್ಯಾಯಾಧಿಕರಣದತ್ತ
ನವದೆಹಲಿ, ಫೆಬ್ರವರಿ 5: ರಾಜಕೀಯ ಕೆಸರೆರೆಚಾಟದ ಮಧ್ಯೆ ಮಂಗಳವಾರ (ಫೆಬ್ರವರಿ 6)ರಿಂದ ಮಹಾದಾಯಿ ನದಿ ನೀರು ಹಂಚಿಕೆಯ ಅಂತಿಮ ವಿಚಾರಣೆ ನ್ಯಾಯಾಧಿಕರಣದಲ್ಲಿ ಆರಂಭವಾಗಲಿದೆ. ಈ ವೇಳೆ ಕರ್ನಾಟಕ ತನ್ನ ಅಂತಿಮ ವಾದ ಮಂಡಿಸಲಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಪರ ವಕೀಲ ಮೋಹನ್ ಕಾತರಕಿ, ಕರ್ನಾಟಕ ಮೊದಲಿಗೆ ಗೋವಾ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ಉತ್ತರ ನೀಡಲಿದೆ ಎಂದು ಹೇಳಿದ್ದಾರೆ.
ಇನ್ನು ವಿವಾದದ ಪ್ರಸ್ತುತ ಸ್ಥಿತಿಗತಿ ಬಗ್ಗೆ ವಿವರಣೆ ನೀಡಿದ ಕಾತರಕಿ, 'ಕೋರ್ಟ್ ಹೊರಗೆ ಸಮಸ್ಯೆ ಬಗೆಹರಿಸಲು ಇರುವ ಅವಕಾಶಗಳ ಬಗ್ಗೆ ಹಮನ ಹರಿಸುವಂತೆ ರಾಜ್ಯಗಳಿಗೆ ನ್ಯಾಯಾಲಯ ಸೂಚಿಸಿತ್ತು' ಎಂದು ತಿಳಿಸಿದ್ದಾರೆ.

ಈ ಬಗ್ಗೆ ಯಾವುದೇ ಮಾತುಕತೆಗಳು ಯಾಕೆ ನಡೆದಿಲ್ಲ ಎಂಬ ಬಗ್ಗೆ ವಿವರಣೆ ನೀಡಿದ ಕಾತರಕಿ, "ಸಾಮಾನ್ಯವಾಗಿ ಇಂಥ ವಿಷಯಗಳು ನ್ಯಾಯಾಲಯದಲ್ಲಿರುವಾಗ ಮಾತುಕತೆಯ ಯತ್ನಗಳು ನಡೆಯುವುದಿಲ್ಲ," ಎಂದಿದ್ದಾರೆ.
"ಈ ರೀತಿಯ ವಿವಾದದ ಸಂದರ್ಭದಲ್ಲಿ ಕೇಂದ್ರ ಸರಕಾರ ಕೇವಲ ಮಧ್ಯವರ್ತಿಯಾಗಿ ವರ್ತಿಸಬಹುದಷ್ಟೆ. ಕೇಂದ್ರ ಮಧ್ಯಸ್ಥಿಕೆ ವಹಿಸುವ ಜವಾಬ್ದಾರಿಯನ್ನು ಹೊಂದಿರಬೇಕು ಮತ್ತು ಎಲ್ಲಾ ರಾಜ್ಯಗಳು ಸಹಕರಿಸುವ ಜವಾಬ್ದಾರಿ ಹೊಂದುತ್ತವೆ," ಅವರು ಹೇಳಿದ್ದಾರೆ.
ಕಾವೇರಿ ನೀರು ಹಂಚಿಕೆ ತೀರ್ಪಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಕಾತರಕಿ, ಈ ತಿಂಗಳಲ್ಲಿ ತೀರ್ಪನ್ನು ನಿರೀಕ್ಷಿಸುತ್ತಿರುವುದಾಗಿ ಹೇಳಿದ್ದಾರೆ. ಫೆಬ್ರವರಿ 23 ರಂದು ಅಥವಾ ಅದಕ್ಕಿಂತ ಮುಂಚಿತವಾಗಿ ತೀರ್ಪು ಹೊರಬೀಳಲಿದೆ ಎಂದು ಅವರು ತಿಳಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications