ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹದಾಯಿ ವಿವಾದ : ಸುಪ್ರೀಂಕೋರ್ಟ್‌ಗೆ ಸೋಮವಾರ ಕರ್ನಾಟಕ ಅರ್ಜಿ

|
Google Oneindia Kannada News

ಬೆಂಗಳೂರು, ನವೆಂಬರ್ 11 : ಮಹದಾಯಿ ನ್ಯಾಯಾಧೀಕರಣದ ಅಂತಿಮ ತೀರ್ಪನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕರ್ನಾಟಕ ಸರ್ಕಾರ 36.5 ಟಿಎಂಸಿ ನೀರನ್ನು ನೀಡಬೇಕು ಎಂದು ಮನವಿ ಮಾಡಲಿದೆ.

ಆಗಸ್ಟ್ 14ರಂದು ಮಹದಾಯಿ ನ್ಯಾಯಾಧೀಕರಣದ ಅಂತಿಮ ತೀರ್ಪು ಪ್ರಕಟವಾಗಿತ್ತು. ಕರ್ನಾಟಕಕ್ಕೆ 13.42 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿತ್ತು. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವಿನ ಜಲವಿವಾದ ಇದಾಗಿದೆ.

ಮಹದಾಯಿ ಅಂತಿಮ ತೀರ್ಪು : ಏನಿದು ಮೂರು ರಾಜ್ಯಗಳ ನಡುವಿನ ವಿವಾದ?ಮಹದಾಯಿ ಅಂತಿಮ ತೀರ್ಪು : ಏನಿದು ಮೂರು ರಾಜ್ಯಗಳ ನಡುವಿನ ವಿವಾದ?

ಜಲನಂಪನ್ಮೂಲ ಇಲಾಖೆ ಅಧಿಕಾರಿಗಳ ಮಾಹಿತಿಯಂತೆ ನವೆಂಬರ್ 12ರ ಸೋಮವಾರ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಿದೆ. ಕರ್ನಾಟಕಕ್ಕೆ 36.5 ಟಿಎಂಸಿ ನೀರು ಸಿಗಬೇಕು ಎಂಬುದು ರಾಜ್ಯ ವಾದವಾಗಿದೆ.

ಮಹದಾಯಿ ಒಂದು ಹನಿ ನೀರು ವ್ಯರ್ಥವಾಗಲು ಬಿಡಲ್ಲ : ಡಿ.ಕೆ.ಶಿವಕುಮಾರ್ಮಹದಾಯಿ ಒಂದು ಹನಿ ನೀರು ವ್ಯರ್ಥವಾಗಲು ಬಿಡಲ್ಲ : ಡಿ.ಕೆ.ಶಿವಕುಮಾರ್

Mahadayi dispute : Karnataka to approach Supreme Court

ಕರ್ನಾಟಕ ಸರ್ಕಾರ ಕುಡಿಯುವ ನೀರಿನ ಉದ್ದೇಶಕ್ಕೆ 7.86 ಟಿಎಂಸಿ ನೀರನ್ನು ನೀಡಬೇಕು ಎಂದು ಬೇಡಿಕೆ ಇಡಲಿದೆ. ಮಹದಾಯಿ ನ್ಯಾಯಾಧೀಕರಣ 5.5 ಟಿಎಂಸಿ ನೀರನ್ನು ಹಂಚಿಕೆ ಮಾಡಿದೆ.

ಮಹದಾಯಿ ವಿಚಾರದಲ್ಲಿ ರಾಜಕೀಯ ಆಟ ಬೇಡ: ಡಿಕೆಶಿ ಮನವಿಮಹದಾಯಿ ವಿಚಾರದಲ್ಲಿ ರಾಜಕೀಯ ಆಟ ಬೇಡ: ಡಿಕೆಶಿ ಮನವಿ

ಮಹದಾಯಿ ನೀರು ಹಂಚಿಕೆ ವಿಚಾರದಲ್ಲಿ ಗೋವಾ ರಾಜ್ಯದ ಜೊತೆ ಕರ್ನಾಟಕ ಸರ್ಕಾರ ದಶಕಗಳ ಕಾಲ ಹೋರಾಟ ನಡೆಸಿದೆ. ಮುಂಬೈ-ಕರ್ನಾಟಕ ಭಾಗದ 13 ತಾಲೂಕುಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು ಕರ್ನಾಟಕ ಹೆಚ್ಚಿನ ನೀರನ್ನು ಕೇಳುತ್ತಿದೆ.

English summary
Karnataka government will approach the Supreme Court in Mahadayi inter-state river water tribunal verdict. Karnataka had sought for 36.5 tmcft of water, but got only 13.5 tmcft in final verdict.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X