ಮಹದಾಯಿ ಹೋರಾಟ, ಬಿಜೆಪಿ ಹೈಕಮಾಂಡ್ ಗರಂ!

ಬೆಂಗಳೂರು, ಡಿಸೆಂಬರ್ 26 : ಮಹದಾಯಿ ಹೋರಾಟ ಕರ್ನಾಟಕ ಬಿಜೆಪಿ ಪಾಲಿಗೆ ಬಿಸಿ ತುಪ್ಪವಾಗಿದೆ. ವಿವಾದ ಇತ್ಯರ್ಥ ಮಾಡುತ್ತೇವೆ ಎಂದು ಘೋಷಿಸಿದ ನಾಯಕರು ಈಗ ಪೇಚಿಗೆ ಸಿಲುಕಿದ್ದಾರೆ. ಪಕ್ಷದ ಹೈಕಮಾಂಡ್‌ ಸಹ ರಾಜ್ಯ ನಾಯಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಕರ್ನಾಟಕ ಬಿಜೆಪಿ ಕಚೇರಿ ಮುಂದೆ ನೂರಾರು ರೈತರು ನಾಲ್ಕು ದಿನದಿಂದ ಧರಣಿ ನಡೆಸುತ್ತಿದ್ದಾರೆ. ಬಿ.ಎಸ್.ಯಡಿಯೂರಪ್ಪ ಸ್ಥಳಕ್ಕೆ ಆಗಮಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದರ ವರದಿ ಹೈಕಮಾಂಡ್‌ ನಾಯಕರಿಗೆ ತಲುಪಿದ್ದು, ರಾಜ್ಯ ನಾಯಕರಿಂದ ವಿವರಣೆ ಕೇಳಿದ್ದಾರೆ.

Mahadayi issue : BJP high command to seek explanation from state leaders

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್, ಪಿಯೂಷ್ ಘೋಯಲ್ ಅವರಿಗೆ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದ್ದಾರೆ. ಇಂದು ಪಕ್ಷದ ಕೋರ್ ಕಮಿಟಿ ಸಭೆ ನಡೆಯುತ್ತಿದ್ದು, ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ಸಭೆ ಸ್ಥಳ ಬದಲು : ಪಕ್ಷದ ಕೋರ್ ಕಮಿಟಿ ಸಭೆ ಪಕ್ಷದ ಕಚೇರಿಯಲ್ಲಿ ನಡೆಯುವುದು ವಾಡಿದೆ. ಆದರೆ, ಮಹದಾಯಿ ಹೋರಾಟಗಾರರು ಮಲ್ಲೇಶ್ವರಂ ಬಿಜೆಪಿ ಕಚೇರಿ ಮುಂದೆ ಧರಣಿ ನಡೆಸುತ್ತಿದ್ದಾರೆ. ಆದ್ದರಿಂದ, ಯಡಿಯೂರಪ್ಪ್ರ ನಿವಾಸಕ್ಕೆ ಸಭೆಯ ಸ್ಥಳ ಬದಲಾವಣೆಯಾಗಿದೆ.

ಪಕ್ಷದ ನವ ಕರ್ನಾಟಕ ಪರಿವರ್ತನಾ ಯಾತ್ರೆಗೆ ಇಂದು ಬಿಡುವು. ಬಿ.ಎಸ್.ಯಡಿಯೂರಪ್ಪ ಬೆಂಗಳೂರಿಗೆ ಆಗಮಿಸಿದ್ದಾರೆ. ಕೋರ್ ಕಮಿಟಿ ಸಭೆಯ ಬಳಿಕ ಅವರು ರೈತರು ಧರಣಿ ನಡೆಸುತ್ತಿರುವ ಸ್ಥಳಕ್ಕೆ ಭೇಟಿ ನೀಡುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+