ಮಹದಾಯಿ ಹೋರಾಟ 2ನೇ ದಿನ : ಬಿಎಸ್ವೈ ಆಗಮನಕ್ಕೆ ಪಟ್ಟು
ಬೆಂಗಳೂರು, ಡಿಸೆಂಬರ್ 24 : 'ಯಡಿಯೂರಪ್ಪ ಅವರು ಬರಬೇಕು ಅಲ್ಲಿಯ ತನಕ ಜಾಗ ಬಿಟ್ಟು ಕದಲುವುದಿಲ್ಲ' ಎಂದು ಕರ್ನಾಟಕ ಬಿಜೆಪಿ ಕಚೇರಿ ಮುಂದೆ ನೂರಾರು ರೈತರು ಧರಣಿ ಕುಳಿತಿದ್ದಾರೆ.
ಎರಡು ದಿನಗಳಿಂದ ಮಹದಾಯಿ ಹೋರಾಟಗಾರರು ಮಲ್ಲೇಶ್ವರಂನಲ್ಲಿರುವ ಕಚೇರಿ ಮುಂದೆ ಧರಣಿ ಕುಳಿತಿದ್ದಾರೆ. ಆದರೆ, ಯಡಿಯೂರಪ್ಪ ಅವರು ಮಾತ್ರ ಸ್ಥಳಕ್ಕೆ ಆಗಮಿಸಿಲ್ಲ. ಹಾವೇರಿಯಲ್ಲಿ ಪರಿವರ್ತನಾ ಯಾತ್ರೆ ನಡೆಯುತ್ತಿದ್ದು, ಯಡಿಯೂರಪ್ಪ ಅದರಲ್ಲಿ ಬ್ಯುಸಿಯಾಗಿದ್ದಾರೆ.

ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ನವಲಗುಂದ, ಗದಗ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಸುಮಾರು 400ಕ್ಕೂ ಅಧಿಕ ರೈತರು ಬೆಂಗಳೂರಿಗೆ ಆಗಮಿಸಿದ ಧರಣಿ ಕುಳಿತಿದ್ದಾರೆ.
ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಧರಣಿ ವಾಪಸ್ ಪಡೆಯುವಂತೆ ಮಾಡಿದ ಮನವಿಗೆ ರೈತರು ಸ್ಪಂದಿಸಿಲ್ಲ. ಯಡಿಯೂರಪ್ಪ ಅವರು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದು ಕುಳಿತಿದ್ದಾರೆ.
ಪ್ರತಿಭಟನಾ ನಿರತ ರೈತರು ಬಿಜೆಪಿ ಕಚೇರಿ ಮುಂದೆಯೇ ಅಡುಗೆ ಮಾಡಿ, ಊಟ ಮಾಡುತ್ತಿದ್ದಾರೆ. ಹಲವಾರು ಸಂಘಟನೆಗಳ ಸದಸ್ಯರು ರೈತರಿಗೆ ಬೆಂಬಲ ನೀಡಿದ್ದು, ಕುಡಿಯುವ ನೀರು ಸೇರಿದಂತೆ ಇತರ ವ್ಯವಸ್ಥೆಗಳನ್ನು ಮಾಡಿದ್ದಾರೆ.
ಮಹದಾಯಿ ವಿವಾದ ಬಗೆಹರಿಸುವಂತೆ 891 ದಿನಗಳಿಂದ ಹೋರಾಟ ಮಾಡುತ್ತಿದ್ದೇವೆ. ಯಾವ ರಾಜಕೀಯ ಪಕ್ಷಗಳು ನಮ್ಮ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿಲ್ಲ. ನೀರು ಸಿಗುವ ತನಕ ಹೋರಾಟ ಮಾಡುತ್ತೇವೆ ಎಂದು ರೈತರು ಹೇಳಿದ್ದಾರೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications