Mahadayi; ಸಿಎಂ ಜೊತೆ ಚರ್ಚಿಸಲು ರೈತರಿಗೆ ಸಮಯ ನಿಗದಿ
ಬೆಂಗಳೂರು, ಫೆಬ್ರವರಿ 22; ಮಹದಾಯಿ ಯೋಜನೆ ಅನುಷ್ಠಾನ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಹೋರಾಟ ನಡೆಸುತ್ತಿರುವ ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಲಿದ್ದಾರೆ. ಈ ಯೋಜನೆಗೆ ಗೋವಾ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ.
ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಬೆಳೆವಿಮೆ ಪರಿಹಾರ, ಬೆಳೆ ಪರಿಹಾರ, ಮಹದಾಯಿ ಯೋಜನೆ ಅನುಷ್ಠಾನ ಕುರಿತು ಮಹದಾಯಿ ಹೋರಾಟಗಾರರ ಹಾಗೂ ಜಿಲ್ಲೆಯ ರೈತ ಮುಖಂಡರ ಸಭೆ ನಡೆಯಿತು.

ಸಭೆಯಲ್ಲಿ ರೈತ ಮುಖಂಡರು ಮಹದಾಯಿ ನೀರಾವರಿ ಯೋಜನೆ ಅನಷ್ಠಾನ, ಹೆಸ್ಕಾಂದಿಂದ ನಿರಂತರ ವಿದ್ಯುತ್ ಪೂರೈಕೆ, ಕುಂದುಗೋಳ ಭಾಗದ ರೈತರ ಜಮೀನುಗಳಲ್ಲಿ ಚಿಗರಿ ಹಾವಳಿ, ಬೆಳೆವಿಮೆ ಪರಿಹಾರ, ಮಧ್ಯಂತರ ಬೆಳೆವಿಮೆ ಪರಿಹಾರ, ಅತಿವೃಷ್ಟಿಯಲ್ಲಿನ ಮನೆಹಾನಿ ಪರಿಹಾರ ಬಿಡುಗಡೆ, ಬ್ಯಾಂಕ್ಗಳಿಂದ ಓಟಿಎಸ್ ತೊಂದರೆ, ಅಣ್ಣಿಗೇರಿಯ ಗ್ರಾಮ ಚಾವಡಿ, ಜಿಲ್ಲೆಯ ಕೆರೆಗಳಿಗೆ ಕಾಳಿನದಿ ನೀರು ಪೂರೈಕೆ, ನಮ್ಮ ಹೊಲ-ನಮ್ಮ ದಾರಿ ಯೋಜನೆ ಜಾರಿ ಮತ್ತು ಮಹದಾಯಿ ಹಾಗೂ ಉತ್ತರ ಕರ್ನಾಟಕದ ಕೃಷಿ, ನೀರಾವರಿ, ರೈತರ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲು ರೈತ ಮುಖಂಡರಿಗೆ ಸಮಯಾವಕಾಶ ನೀಡಲು ಮನವಿ ಮಾಡಲಾಯಿತು.
ಬರ ಪರಿಸ್ಥಿತಿ ಬಗ್ಗೆ ಚರ್ಚೆ: ಸಭೆಯಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ದನಗಳಿಗೆ ಮೇವು ಪೂರೈಕೆ, ಕುಡಿಯುವ ನೀರು, ಉದ್ಯೋಗ ನೀಡುವ ಬಗ್ಗೆ ಕಾಳಜಿ ವಹಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ರೈತರು ವಿನಂತಿಸಿದರು.
ಸಭೆಯಲ್ಲಿ ಮಾತನಾಡಿದ ನವಲಗುಂದ ಶಾಸಕ ಎನ್. ಎಚ್. ಕೋನರಡ್ಡಿ, "ಮಹದಾಯಿ ಯೋಜನೆ ಜಾರಿಗೆ ನಾನು ಒಬ್ಬ ರೈತನಾಗಿ, ಹೋರಾಟಗಾರನಾಗಿ ಬದ್ಧನಾಗಿದ್ದೇನೆ. ಪ್ರಸಕ್ತ ರಾಜ್ಯ ಬಜೆಟದಲ್ಲಿ ಮುಖ್ಯಮಂತ್ರಿಗಳು ಅನುದಾನ ನೀಡಿದ್ದಾರೆ. ಕೇಂದ್ರ ಸಚಿವರು ಆಗಿರುವ ನಮ್ಮ ಸಂಸದರೊಂದಿಗೆ ರೈತರ ಸಭೆ ನಡೆಸಿ, ಕೇಂದ್ರದ ಸಹಕಾರದಲ್ಲಿ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕ್ರಮವಹಿಸೋಣ" ಎಂದರು.
"ಧಾರವಾಡ ಜಿಲ್ಲೆಯ ರೈತರಿಗೆ ಮಧ್ಯಂತರ ಬೆಳೆ ಪರಿಹಾರವಾಗಿ ಈಗಾಗಲೇ ಸುಮಾರು 70 ಕೋಟಿ ಬಿಡುಗಡೆ ಆಗಿದೆ. ಶೀಘ್ರದಲ್ಲಿ ಪೂರ್ಣ ಪ್ರಮಾಣದ ಬೆಳೆವಿಮೆ ಬಿಡುಗಡೆ ಆಗುತ್ತದೆ. ರಾಜ್ಯ ಸರ್ಕಾರ ಆರಂಭಿಕವಾಗಿ ರೂ. 2 ಸಾವಿರ ಬೆಳೆ ಪರಿಹಾರ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಿದೆ. ಇನ್ನು ಇದು ಪ್ರಗತಿಯಲ್ಲಿದೆ. ಕೇಂದ್ರದಿಂದ ಸುಮಾರು 17 ಸಾವಿರ ಕೋಟಿ ಪರಿಹಾರ ಬಿಡುಗಡೆ ಆಗುವ ನಿರೀಕ್ಷೆ ಇದೆ. ಇದಕ್ಕೆ ರಾಜ್ಯದ ಪಾಲು ಸೇರಿಸಿ, ರೈತರಿಗೆ ಪರಿಹಾರ ಹಣ ನೀಡಲಾಗುವುದು" ಎಂದು ಶಾಸಕರು ಹೇಳಿದರು.
"ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಕ್ರಮವಹಿಸಿ, ಈಗಾಗಲೇ 50ಕ್ಕೂ ಹೆಚ್ಚು ವಿವಿಧ ರೈತ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಎಲ್ಲಾ ಪ್ರಕರಣಗಳನ್ನು ಪರಿಶೀಲಿಸಿ, ಕ್ರಮವಹಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಮಹದಾಯಿ ಹಾಗೂ ಉತ್ತರ ಕರ್ನಾಟಕದ ರೈತರ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ರೈತರ ಸಭೆ ನಡೆಸಲು ಚುನಾವಣಾ ಪೂರ್ವದಲ್ಲಿ ಅಥವಾ ಚುನಾವಣೆ ನಂತರ ಸಮಯ ನಿಗದಿಪಡಿಸಲು ಪ್ರಯತ್ನಿಸುತ್ತೇನೆ ಮತ್ತು ಮುಖ್ಯಮಂತ್ರಿಗಳ ಸಮಯಾವಕಾಶ ನೋಡಿಕೊಂಡು ನವಲಗುಂದ ಕಾರ್ಯಕ್ರಮದಲ್ಲಿ ರೈತ ಮುಖಂಡರನ್ನು ಭೇಟಿ ಮಾಡಿಸಲು ಪ್ರಯತ್ನಿಸಲಾಗುವುದು" ಎಂದು ಶಾಸಕರು ಭರವಸೆ ನೀಡಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, "ಧಾರವಾಡ ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಧಾರವಾಡ ಮಾದರಿ ಜಿಲ್ಲೆ ಆಗಬೇಕು. ಇದಕ್ಕೆ ಧಾರವಾಡ ಜಿಲ್ಲೆಯ ಪ್ರತಿಯೊಬ್ಬರ ಸಹಕಾರ ಬೇಕು. ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರು, ಜನ ಜಾನುವಾರು ಮೇವು, ನೀರಿನ ಕೊರತೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಗೋಶಾಲೆ ಪ್ರಾರಂಭವಾಗಿದೆ. ಜಿಲ್ಲೆಯ 14 ಸ್ಥಳಗಳಲ್ಲಿ ಮೇವು ಬ್ಯಾಂಕ್ ಆರಂಭಿಸಲು ಸ್ಥಳ ಗುರುತಿಸಲಾಗಿದೆ. ರೈತರಿಗೆ ಬ್ಯಾಂಕ್ಗಳಲ್ಲಿ ಆಗುತ್ತಿರುವ ಓಟಿಎಸ್ ಸಮಸ್ಯೆ ಪರಿಹರಿಸಲು ಲೀಡ್ ಬ್ಯಾಂಕ್ ಮ್ಯಾನೇಜರ್ ಮೂಲಕ ಎಲ್ಲಾ ಬ್ಯಾಂಕ್ಗಳಿಗೆ ನಿರ್ದೇಶನ ನೀಡಲಾಗುವುದು. ರೈತರಿಗೆ ಯಾವುದೇ ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತಂದರೆ, ಸಮಸ್ಯೆ ಪರಿಹರಿಸಲು ಕ್ರಮ ವಹಿಸಲಾಗುವುದು" ಎಂದರು.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications