ಅ.21 ರಂದು ನಡೆಯಬೇಕಿದ್ದ ಮಹದಾಯಿ ಸಭೆ ನ.3ಕ್ಕೆ ಫಿಕ್ಸ್!
ಅ.21 ರಂದು ನಡೆಯಬೇಕಿದ್ದ 3 ರಾಜ್ಯಗಳ ಮುಖ್ಯಮಂತ್ರಿಗಳ ಮಹದಾಯಿ ಸಭೆಯಲ್ಲಿ ಗೋವಾ ಸಿಎಂ ಪಾಲ್ಗೊಳ್ಳಲು ಆಗುವುದಿಲ್ಲ ಎಂದಿದ್ದರು. ಇದರಿಂದ ಸಭೆಯನ್ನು ಇದೇ ನವೆಂಬರ್ 3 ರಂದು ಮುಂಬೈನಲ್ಲಿ ನಿಗದಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು, ಅಕ್ಟೋಬರ್. 21 : ಮಹದಾಯಿ ನದಿ ನೀರು ವಿವಾದದ ಸಂಧಾನ ಸಭೆಗೆ ಕೊನೆಗೂ ಗೋವಾ ಸಿಎಂ ಲಕ್ಷ್ಮಿಕಾಂತ್ ಪರ್ಸೇಕರ್ ಒಪ್ಪಿಗೆ ನೀಡಿದ್ದಾರೆ. ಅಕ್ಟೋಬರ್ 21 ರಂದು ನಡೆಯಬೇಕಿದ್ದ ಸಭೆ ನವೆಂಬರ್ 3ರಂದು ಮುಂಬೈನಲ್ಲಿ ನಡೆಸಲು ಮೂಹೂರ್ತ ನಿಗದಿ ಮಾಡಲಾಗಿದೆ.
ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಮುಂಬೈನಲ್ಲಿ ಅಕ್ಟೋಬರ್ 21 ರಂದು ನಿಗದಿ ಮಾಡಿದ್ದರು. ಆದರೆ ಗೋವಾ ಮುಖ್ಯಮಂತ್ರಿ ಲಕ್ಷ್ಮಿಕಾಂತ್ ಪರ್ಸೇಕರ್ ಅವರು ಕೆಲಸ ಒತ್ತಡದಿಂದ ಇನ್ನು 15 ದಿನಗಳ ವರೆಗೆ ಸಭೆಯಲ್ಲಿ ಭಾಗವಹಿಸಲು ಆಗುವುದಿಲ್ಲ ಎಂದು ಹೇಳಿದ್ದರು. [ಮಹದಾಯಿ ಬಿಕ್ಕಟ್ಟು : ಮಹಾ ಸಿಎಂ ಫಡ್ನವಿಸ್ ಮಧ್ಯಸ್ಥಿಕೆ!]

ಈ ಹಿನ್ನೆಲೆಯಲ್ಲಿ ಮಹದಾಯಿ ನದಿ ನೀರು ವಿವಾದದ ಸಭೆಯನ್ನು ನವೆಂಬರ್ 3ಕ್ಕೆ ನಿಗದಿ ಮಾಡಲಾಗಿದೆ. ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ಈ ಸಭೆಯ ನೇತೃತ್ವ ವಹಿಸಲಿದ್ದಾರೆ. [ಕ್ಯಾತೆ ತೆಗೆದ ಗೋವಾ ಸಿಎಂ, ಮಹಾದಾಯಿ ಸಭೆ ಮುಂದೂಡಿಕೆ!]
ಅಕ್ಟೋಬರ್ 21ಕ್ಕೆ ನಿಗದಿಯಾಗಿದ್ದ ಸಭೆಯಲ್ಲಿ ಪಾಲ್ಗೊಳ್ಳಲು ಆಗುವುದಿಲ್ಲವೆಂದು ಹೇಳಿದ್ದ ಗೋವಾ ಮುಖ್ಯಮಂತ್ರಿ ಲಕ್ಷ್ಮಿಕಾಂತ್ ಪರ್ಸೇಕರ್ ಅವರು ನವೆಂಬರ್ 3 ರಂದು ನಡೆಯುವ ಸಭೆಯಲ್ಲಿ ಬಾಗವಹಿಸುತ್ತಾರೋ ಇಲ್ಲವೋ ಎಂಬುವುದನ್ನು ಕಾದು ನೋಡಬೇಕಿದೆ.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications