ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹದಾಯಿ ವಿವಾದ: ಸೆ.14ಕ್ಕೆ ಗೋವಾ, ಕರ್ನಾಟಕ ಸಿಎಂಗಳ ಸಭೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 11 : ಮಹದಾಯಿ ವಿವಾದದ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಗೋವಾ ಸಿಎಂ ಭೇಟಿಯಾಗಲಿದ್ದಾರೆ. ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕ ರಾಜ್ಯಗಳ ನಡುವೆ ಯೋಜನೆ ವಿಚಾರದಲ್ಲಿ ಭಿನ್ನಾಭಿಪ್ರಾಯವಿದೆ.

ಬೆಳಗಾವಿಯಲ್ಲಿ ಮಾತನಾಡಿದ ಬಿ. ಎಸ್. ಯಡಿಯೂರಪ್ಪ, "ಮಹದಾಯಿ ವಿವಾದದ ಕುರಿತು ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಸಭೆ ಮಾಡುತ್ತೇವೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರನ್ನು ಈಗಾಗಲೇ ಭೇಟಿ ಮಾಡಿರುವೆ" ಎಂದು ಹೇಳಿದರು.

ಮಹದಾಯಿ ಒಂದು ಹನಿ ನೀರು ವ್ಯರ್ಥವಾಗಲು ಬಿಡಲ್ಲ : ಡಿ.ಕೆ.ಶಿವಕುಮಾರ್ಮಹದಾಯಿ ಒಂದು ಹನಿ ನೀರು ವ್ಯರ್ಥವಾಗಲು ಬಿಡಲ್ಲ : ಡಿ.ಕೆ.ಶಿವಕುಮಾರ್

ಸೆಪ್ಟೆಂಬರ್ 14ರಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿಗೆ ಸೆಪ್ಟೆಂಬರ್ 14ರಂದು ದಿನಾಂಕ ನಿಗದಿಯಾಗಿದೆ. ಜಲಸಂಪನ್ಮೂಲ ಖಾತೆಯನ್ನು ತಮ್ಮ ಬಳಿ ಇಟ್ಟುಕೊಂಡಿರುವ ಯಡಿಯೂರಪ್ಪ ಪಣಜಿಯಲ್ಲಿ ಪ್ರಮೋದ್ ಜೊತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.

ಮಹದಾಯಿ : ಕರ್ನಾಟಕದ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ ಗೋವಾಮಹದಾಯಿ : ಕರ್ನಾಟಕದ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ ಗೋವಾ

ಮಹದಾಯಿ ನ್ಯಾಯಾಧೀಕರಣ ನೀಡಿದ ತೀರ್ಪನ್ನು ಕರ್ನಾಟಕ ಪಾಲಿಸುತ್ತಿಲ್ಲ ಎಂದು ಗೋವಾ ಆರೋಪ ಮಾಡುತ್ತಿದೆ. ನ್ಯಾಯಾಧೀಕರಣ ಅಂತಿಮ ತೀರ್ಪಿನಲ್ಲಿ ಗೋವಾಕ್ಕೆ 24 ಟಿಎಂಸಿ ನೀರನ್ನು ಹಂಚಿಕೆ ಮಾಡಿದೆ. ಕರ್ನಾಟಕಕ್ಕೆ 13.24 ಟಿಎಂಸಿ ಅಡಿ ನೀರು ಸಿಕ್ಕಿದೆ.

ಮಹದಾಯಿ ಅಂತಿಮ ತೀರ್ಪು : ಏನಿದು ಮೂರು ರಾಜ್ಯಗಳ ನಡುವಿನ ವಿವಾದ?ಮಹದಾಯಿ ಅಂತಿಮ ತೀರ್ಪು : ಏನಿದು ಮೂರು ರಾಜ್ಯಗಳ ನಡುವಿನ ವಿವಾದ?

ಅಂತಿಮ ತೀರ್ಪು ಪ್ರಕಟವಾಗಿದೆ

ಅಂತಿಮ ತೀರ್ಪು ಪ್ರಕಟವಾಗಿದೆ

2018ರ ಆಗಸ್ಟ್‌ನಲ್ಲಿ ಮಹದಾಯಿ ನ್ಯಾಯಾಧೀಕರಣ ಅಂತಿಮ ತೀರ್ಪನ್ನು ಪ್ರಕಟಿಸಿದೆ. ನ್ಯಾಯಮೂರ್ತಿ ಜೆ. ಎಂ. ಪಾಂಚಾಲ್ ನೇತೃತ್ವದ ನ್ಯಾಯಾಧೀಕರಣ ಕರ್ನಾಟಕಕ್ಕೆ 13.42, ಗೋವಾಕ್ಕೆ 24 ಮತ್ತು ಮಹಾರಾಷ್ಟ್ರಕ್ಕೆ 1.30 ಟಿಎಂಸಿ ಅಡಿ ನೀರನ್ನು ಹಂಚಿಕೆ ಮಾಡಿದೆ. ಕರ್ನಾಟಕ ಕುಡಿಯುವ ನೀರಿನ ಉದ್ದೇಶಕ್ಕೆ 5.5 ಟಿಎಂಸಿ ನೀರನ್ನು ಬಳಸಿಕೊಳ್ಳಬಹುದಾಗಿದೆ.

ಕರ್ನಾಟಕದ ವಾದವೇನು?

ಕರ್ನಾಟಕದ ವಾದವೇನು?

ಮಹದಾಯಿ ನ್ಯಾಯಾಧೀಕರಣದ ಮುಂದೆ ಕರ್ನಾಟಕ ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ಗದಗ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು 7.5 ಟಿಎಂಸಿ ನೀರನ್ನು ಬಳಸಿಕೊಳ್ಳಲು ಮಧ್ಯಂತರ ಅನುಮತಿ ನೀಡಬೇಕು ಎಂದು ಮನವಿ ಸಲ್ಲಿಸಿತ್ತು. ಈ ಮನವಿಯನ್ನು ನ್ಯಾಯಾಧೀಕರಣ ತಿರಸ್ಕರಿಸಿತ್ತು.

ಗೋವಾ ಸರ್ಕಾರದ ವಿರೋಧ

ಗೋವಾ ಸರ್ಕಾರದ ವಿರೋಧ

ಮಹದಾಯಿ ಯೋಜನೆಗೆ ಗೋವಾ ರಾಜ್ಯ ವಿರೋಧ ವ್ಯಕ್ತಪಡಿಸುತ್ತದೆ. ಕರ್ನಾಟಕದ ಬೆಳಗಾವಿಯ ಭೀಮಘಢ್‌ನಲ್ಲಿ ಮಹದಾಯಿ ನದಿ ಹುಟ್ಟುತ್ತದೆ. ಮೊದಲು ರಾಜ್ಯದಲ್ಲಿ 35 ಕಿ.ಮೀ. ಹರಿಯುವ ನದಿ ಉಳಿದ 52 ಕಿ. ಮೀ. ಗೋವಾದಲ್ಲಿ ಹರಿಯುತ್ತದೆ. ಯೋಜನೆ ಜಾರಿಯಾದರೆ ಗೋವಾಕ್ಕೆ ಹರಿಯುವ ನೀರಿನ ಪ್ರಮಾಣ ಕಡಿಮೆಯಾಗಲಿದೆ ಎಂಬುದು ನೆರೆಯ ರಾಜ್ಯದ ವಾದವಾಗಿದೆ.

ಕರ್ನಾಟಕ ಬೇಡಿಕೆ ಏನು?

ಕರ್ನಾಟಕ ಬೇಡಿಕೆ ಏನು?

ಮಹದಾಯಿ ನದಿಯಲ್ಲಿ 188 ಟಿಎಂಸಿ ಅಡಿ ನೀರು ಲಭ್ಯವಿದೆ ಎಂಬುದನ್ನು ನ್ಯಾಯಮಂಡಳಿ ಒಪ್ಪಿಕೊಂಡಿದೆ. ರಾಜ್ಯಕ್ಕೆ ಈಗ 13.24 ಟಿಎಂಸಿ ಅಡಿ ನೀರು ನೀಡಲಾಗಿದೆ. ಉಳಿದ ಎರಡೂ ರಾಜ್ಯಗಳಿಗೆ ಹಂಚಿಕೆಯಾಗಿ ಸಮುದ್ರಕ್ಕೆ ಹರಿದು ಹೋಗುವ ನೀರನ್ನು ನಮಗೆ ಕೊಡಿ ಕುಡಿಯುವ ನೀರಿನ ಉದ್ದೇಶಕ್ಕೆ ನಾವು ಬಳಸಿಕೊಳ್ಳುತ್ತೇವೆ ಎಂಬುದು ಕರ್ನಾಟಕದ ವಾದವಾಗಿದೆ.

English summary
Karnataka Chief Minister B.S.Yediyurapp will meet Goa CM Pramod Sawant on September 14 to discuss about Mahadayi drinking water Row.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X