ಜುಲೈ 27ರಂದು ಮಹಾದಾಯಿ ನ್ಯಾಯಾಧೀಕರಣದ ತೀರ್ಪು

ಬೆಂಗಳೂರು, ಜುಲೈ 25 : ಮಹಾದಾಯಿ ನ್ಯಾಯಮಂಡಳಿ 7 ಟಿಎಂಸಿ ನೀರು ಹಂಚಿಕೆ ವಿವಾದದ ಕುರಿತ ವಿಚಾರಣೆ ಪೂರ್ಣಗೊಳಿಸಿದ್ದು, ತೀರ್ಪನ್ನು ಜುಲೈ 27ಕ್ಕೆ ಕಾಯ್ದಿರಿಸಿದೆ. ಏಳು ಟಿಎಂಸಿ ನೀರು ಬಳಕೆಗೆ ಅವಕಾಶ ನೀಡುವಂತೆ ಕರ್ನಾಟಕ ಸರ್ಕಾರ ಮಹಾದಾಯಿ ನ್ಯಾಯಮಂಡಳಿ ಮುಂದೆ ಅರ್ಜಿ ಸಲ್ಲಿಸಿದೆ.

ಸೋಮವಾರ ನ್ಯಾಯಾಧೀಶರಾದ ಜೆ.ಎಂ.ಪಾಂಚಾಳ ಅವರ ನೇತೃತ್ವದ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯಿತು. ಕರ್ನಾಟಕ ಸರ್ಕಾರ ರಾಜ್ಯದಲ್ಲಿನ ಬರಗಾಲ, ನೀರಿನ ಬಳಕೆಯ ಯೋಜನೆ ಕುರಿತು ವಾದ ಮಂಡನೆ ಮಾಡಿತು.[ಏನಿದು ಕಳಸಾ-ಬಂಡೂರಿ ಯೋಜನೆ]

kalasa banduri

ಕಳಸಾ-ಬಂಡೂರಿ ನಾಲೆಯಿಂದ ಮಲಪ್ರಭಾ ಜಲಾಶಯಕ್ಕೆ 7 ಟಿಎಂಸಿ ನೀರು ತಿರುಗಿಸಲು ಅನುಮತಿ ನೀಡುವಂತೆ ಕರ್ನಾಟಕ ಸರ್ಕಾರ ಮಹಾದಾಯಿ ನ್ಯಾಯಮಂಡಳಿ ಮುಂದೆ ಅರ್ಜಿ ಸಲ್ಲಿಸಿದೆ. ವಾದ ಮಂಡನೆ ಬಳಿಕ ತೀರ್ಪನ್ನು ಜುಲೈ 27ಕ್ಕೆ ಕಾಯ್ದಿರಿಸಲಾಯಿತು.[ಮಹದಾಯಿ ನ್ಯಾಯಾಧೀಕರಣಕ್ಕೆ ಅರ್ಜಿ ಸಲ್ಲಿಸಿದ ಕರ್ನಾಟಕ]

ಹುಬ್ಬಳ್ಳಿ, ಗದಗ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಒಂದು ವರ್ಷದಿಂದ ಹೋರಾಟ ನಡೆಯುತ್ತಿದೆ. ನ್ಯಾಯಾಧೀಕರಣದ ತೀರ್ಪು ತಮ್ಮ ಪರವಾಗಿ ಬರಲಿದೆ ಅನ್ನುವ ವಿಶ್ವಾದಲ್ಲಿದ್ದಾರೆ ರೈತರು.[ನ್ಯಾಯಾಧೀಕರಣದತ್ತ ಹರಿದ ಮಹದಾಯಿ ವಿವಾದ]

ನ್ಯಾಯಾಧೀಕರಣದ ಮೊರೆ : 7.56 ಟಿಎಂಸಿ ನೀರನ್ನು ಮಲಪ್ರಭೆಗೆ ತಿರುಗಿಸಿಕೊಂಡು ಹುಬ್ಬಳ್ಳಿ-ಧಾರವಾಡ, ಗದಗ ಮುಂತಾದ ಜಿಲ್ಲೆಗಳ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಕಳಸಾ-ಬಂಡೂರಿ ಯೋಜನೆಗೆ ಗೋವಾ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಆದ್ದರಿಂದ, ಸರ್ಕಾರ ನ್ಯಾಯಾಧೀಕರಣದ ಮೊರೆ ಹೋಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+