ಕಳಸಾ ಬಂಡೂರಿಗಾಗಿ ಮತ್ತೆ ಕರ್ನಾಟಕ ಸ್ತಬ್ಧ
ಬೆಂಗಳೂರು, ಜುಲೈ, 27: ಮತ್ತೊಂದು ಕರ್ನಾಟಕ ಬಂದ್ ಗೆ ಸಿದ್ಧವವಾಗಬೇಕಿದೆ. ನಮ್ಮ ಹಕ್ಕಿಗಾಗಿ ನಡೆಸುತ್ತಿರುವ ಹೋರಾಟವನ್ನು ಮತ್ತೆ ಮುಂದುವರಿಸಬೇಕಾಗಿದೆ.
ಮಹದಾಯಿ ನೀರು ಹಂಚಿಕೆ ಕುರಿತಂತೆ ನ್ಯಾಯಮಂಡಳಿ ನೀಡಿರುವ ಮಧ್ಯಂತರ ತೀರ್ಪಿನ ಪರಿಣಾಮ ರಾಜ್ಯದಲ್ಲಿ ನಾಳೆ ಅಂದರೆ ಜುಲೈ 28 ರಂದು ಮತ್ತೊಂದು ಬಂದ್ ನಡೆಯಲಿದೆ. ರಾಜ್ಯ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಕಳಸಾ ಬಂಡೂರಿ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. [ಉತ್ತರ ಕರ್ನಾಟಕದಲ್ಲಿ ಭುಗಿಲೆದ್ದ ರೈತರ ಆಕ್ರೋಶ]
ಇನ್ನೊಂದೆಡೆ ಕನ್ನಡ ಸಂಘಟನೆಗಳ ಒಕ್ಕೂಟದ ವಾಟಾಳ್ ನಾಗರಾಜ್, ಸಾರಾ ಗೋವಿಂದು ಸೇರಿದಂತೆ ವಿವಿಧ ಹೋರಾಟಗಾರರು ಜುಲೈ 30 ರಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.[ಏನಿದು ಕಳಸಾ-ಬಂಡೂರಿ ಯೋಜನೆ?]
ಆದರೆ ಈಗಾಗಲೇ ಉತ್ತರ ಕರ್ನಾಟಕದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ. ಪರಿಣಾಮ ಹುಬ್ಬಳ್ಳಿ, ಧಾರವಾಡ, ಹಾವೇರಿ, ಬೆಳಗಾವಿ ಮತ್ತು ಗದಗ ಜಿಲ್ಲೆಗಳಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ನಾಳೆ ಸಹ ಉತ್ತರ ಕರ್ನಾಟಕಲ್ಲಿ ಬಂದ್ ಪರಿಸ್ಥಿತಿ ಮುಂದುವರಿಯುವುದರಲ್ಲಿ ಯಾವ ಅನುಮಾನ ಇಲ್ಲ.

ಬಸ್ ಇರುತ್ತಾ?
ಕೆಎಸ್ ಆರ್ ಟಿಸಿ ನೌಕರರು ನಡೆಸುತ್ತಿದ್ದ ಮುಷ್ಕರ ಈಗಷ್ಟೇ ಅಂತ್ಯವಾಗಿದೆ. ಆದರೆ ಉತ್ತರ ಕರ್ನಾಟಕ ಭಾಗದಲ್ಲಿ ಗುರುವಾರ ಬಂದ್ ಪರಿಸ್ಥಿತಿ ಎದುರಾದರೆ ಬಸ್ ಸೇವೆ ಕಷ್ಟ ಸಾಧ್ಯ.

ಚಂದ್ರಶೇಖರ್ ಕರೆ
ಮಹಾದಾಯಿ ತೀರ್ಪು ರಾಜ್ಯಕ್ಕೆ ದೊಡ್ಡ ಅನ್ಯಾಯ ಮಾಡಿದ್ದು ಗುರುವಾರ ರಾಜ್ಯದ ನಾಗರಿಕರು ಸ್ವಯಂ ಪ್ರೇರಿತವಾಗಿ ಬಂದ್ ಗೆ ಬೆಂಬಲ ಸೂಚಿಸಿ ಒತ್ತಡ ತರಬೇಕು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮನವಿ ಮಾಡಿದ್ದಾರೆ.

ಶಾಲಾ ಕಾಲೇಜುಗಳು
ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಶಿಕ್ಷಣ ಇಲಾಖೆಗೆ ಶಾಲೆಗೆ ರಜೆ ನೀಡುವ ಅಧಿಕಾರ ನೀಡಲಾಗಿದೆ. ಆದರೆ ಈಗಾಗಲೇ ಮೂರು ದಿನದ ರಜಾ ಮಜಾವನ್ನು ವಿದ್ಯಾರ್ಥಿಗಳು ಅನುಭವಿಸಿದ್ದು ನಾಳೆಯೂ ರಜೆ ಸಿಕ್ಕರೆ ಆಶ್ಚರ್ಯವಿಲ್ಲ.

ಚಿತ್ರೋದ್ಯಮ ಬಂದ್
ನ್ಯಾಯಾಧೀಕರಣದ ತೀರ್ಪು ವಿರೋಧಿಸಿ ಕನ್ನಡ ಚಿತ್ರೋದ್ಯಮವನ್ನು ಸಹ ಜುಲೈ 30 ರಂದು ಬಂದ್ ಮಾಡುತ್ತಿದ್ದೇವೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾರಾ ಗೋವಿಂದ ತಿಳಿಸಿದ್ದಾರೆ.

ಉತ್ತರ ಕರ್ನಾಟಕ ಸ್ಥಬ್ಧ
ಕಳಸಾ ಬಂಡೂರಿ ಹೋರಾಟ ಒಂದು ವರ್ಷದಿಂದ ನಡೆಯುತ್ತಿದ್ದು ಜುಲೈ 16 ಒಂದು ವರ್ಷ ತುಂಬಿತ್ತು, ಈ ಹಿನ್ನೆಲೆಯಲ್ಲಿ ರೈತರು ಧಾರವಾಡ, ಗದಗ, ಬೆಳಗಾವಿ ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಯನ್ನು ಬಂದ್ ಮಾಡಿದ್ದರು.

ವಾಟಾಳ್ ಕರೆ
ಕನ್ನಡ ಸಂಘಟನೆಗಳ ಒಕ್ಕೂಟದ ವಾಟಾಳ್ ನಾಗರಾಜ್, ಸಾರಾ ಗೋವಿಂದು ಸೇರಿದಂತೆ ವಿವಿಧ ಹೋರಾಟಗಾರರು ಜುಲೈ 30 ರಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications