ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶೀಘ್ರದಲ್ಲೇ ಮಹದಾಯಿ ಮೇಲುಸ್ತುವಾರಿ ಸಮಿತಿ ರಚನೆ

By Gururaj
|
Google Oneindia Kannada News

ಬೆಂಗಳೂರು, ಆಗಸ್ಟ್ 17 : ಕೇಂದ್ರ ಸರ್ಕಾರ ಶೀಘ್ರದಲ್ಲೇ ಮಹದಾಯಿ ನೀರು ಮೇಲುಸ್ತುವಾರಿ ಸಮಿತಿಯನ್ನು ರಚನೆ ಮಾಡುವ ಸಾಧ್ಯತೆ ಇದೆ. ಮಹದಾಯಿ ನ್ಯಾಯಾಧಿಕರಣ ಈಗಾಗಲೇ ವಿವಾದದ ಕುರಿತು ಅಂತಿಮ ತೀರ್ಪನ್ನು ಪ್ರಕಟಿಸಿದೆ.

ಮಹದಾಯಿ ನ್ಯಾಯಾಧಿಕರಣ ಆ.14ರಂದು ಅಂತಿಮ ತೀರ್ಪು ನೀಡುವಾಗ ಮಹದಾಯಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಮಹದಾಯಿ ನೀರು ಮೇಲುಸ್ತುವಾರಿ ಸಮಿತಿ ರಚನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ಮಹದಾಯಿ ತೀರ್ಪು: ಗೋವಾದಿಂದಲೂ ಮೇಲ್ಮನವಿ ಸಾಧ್ಯತೆಮಹದಾಯಿ ತೀರ್ಪು: ಗೋವಾದಿಂದಲೂ ಮೇಲ್ಮನವಿ ಸಾಧ್ಯತೆ

12 ಸಂಪುಟದ ತೀರ್ಪಿನಲ್ಲಿ ಮಹದಾಯಿ ನ್ಯಾಯಾಧಿಕರಣ ಮೇಲುಸ್ತುವಾರಿ ಸಮಿತಿ ರಚನೆಗೆ ಸೂಚನೆ ನೀಡಿತ್ತು. ಮಹದಾಯಿ ಯೋಜನೆಯ ಪ್ರತಿಯೊಂದು ಮಾಹಿತಿ ಉಸ್ತುವಾರಿ ಸಮಿತಿಗೆ ಇರಬೇಕು. ಸಮಿತಿಯ ಒಪ್ಪಿಗೆ ಪಡೆದು ಯೋಜನೆ ಜಾರಿಗೊಳಿಸಬೇಕು ಎಂದು ಹೇಳಿತ್ತು.

Mahadayi Water Management Authority may set up soon

ಮಹದಾಯಿ ಯೋಜನೆಯ ಕುರಿತು ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ನಡುವೆ ವಿವಾದವಿದೆ. ಆದರೆ, ಯೋಜನೆಯ ಕುರಿತು ಸ್ಪಷ್ಟವಾದ ನೀಲನಕ್ಷೆ ಇನ್ನೂ ಸಿದ್ದಗೊಂಡಿಲ್ಲ ಎಂದು ನ್ಯಾಯಾಧಿಕರಣ ತೀರ್ಪಿನಲ್ಲಿ ತಿಳಿಸಿತ್ತು.

ಮಹದಾಯಿ ಅಂತಿಮ ತೀರ್ಪು : ಏನಿದು ಮೂರು ರಾಜ್ಯಗಳ ನಡುವಿನ ವಿವಾದ?ಮಹದಾಯಿ ಅಂತಿಮ ತೀರ್ಪು : ಏನಿದು ಮೂರು ರಾಜ್ಯಗಳ ನಡುವಿನ ವಿವಾದ?

ಆಗಸ್ಟ್ 14ರಂದು ಅಂತಿಮ ತೀರ್ಪು ನೀಡಿದ್ದ ನ್ಯಾಯಾಧಿಕರಣ ಕರ್ನಾಟಕಕ್ಕೆ 13.5 ಟಿಎಂಸಿ ನೀರನ್ನು ಹಂಚಿಕೆ ಮಾಡಿತ್ತು. ಗೋವಾಕ್ಕೆ 24 ಮತ್ತು ಮಹಾರಾಷ್ಟ್ರಕ್ಕೆ 1.30 ಟಿಎಂಸಿ ನೀರನ್ನು ನೀಡಲಾಗಿತ್ತು.

English summary
Centre Government may set up Mahadayi Water Management Authority soon. Mahadayi Water Dispute Tribunal recommended to set up authority to effective implementation of the project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X