Mahadayi Water Project: ಮಹದಾಯಿ ಯೋಜನೆ ಮತ್ತೆ ಕೇಂದ್ರದತ್ತ ಬೊಟ್ಟು ಮಾಡಿದ ಸಿ.ಎಂ
ಉತ್ತರ ಕರ್ನಾಟಕದ ಬಹು ನಿರೀಕ್ಷಿತ ಹಾಗೂ ಗಗನ ಕುಸುಮವಾಗಿರುವ ಮಹದಾಯಿ ಯೋಜನೆ ಜಾರಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿದ್ದಾರೆ. ಮಹದಾಯಿ ಯೋಜನೆ ಜಾರಿ ಮಾಡುವುದಕ್ಕೆ ಬೇಕಾದ ಎಲ್ಲ ಮಾದರಿಯ ಸಿದ್ಧತೆಗಳನ್ನು ರಾಜ್ಯ ಸರ್ಕಾರ ಮಾಡಿಕೊಂಡಿದೆ. ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಯ್ಯ ಹೇಳಿದ್ದಾರೆ. ಈ ಮೂಲಕ ಮತ್ತೊಮ್ಮೆ ಮಹದಾಯಿ ಯೋಜನೆ ರಾಜಕೀಯ ತಿರುವು ಪಡೆದುಕೊಂಡಿದೆ.
ದಶಕಗಳ ಕಾಲ ಉತ್ತರ ಕರ್ನಾಟಕದ ರೈತರು ಹಾಗೂ ಉತ್ತರ ಕರ್ನಾಟಕ ಭಾಗದ ಜನ ಆಸೆಗಣ್ಣುಗಳಿಂದ ನೋಡುತ್ತೀರುವ ಮಹದಾಯಿ ಯೋಜನೆ ಇನ್ನಷ್ಟು ವರ್ಷ ಕನಸಾಗಿಯೇ ಉಳಿಯುವಂತಿದೆ. ಹೌದು ಉತ್ತರ ಕರ್ನಾಟಕ ಭಾಗದ ಜನ ಹಲವು ದಶಕಗಳಿಂದ ಈ ವರ್ಷ ಇಲ್ಲ ಮುಂದಿನ ವರ್ಷ ಮಹದಾಯಿ ಯೋಜನೆ ಜಾರಿಯಾಗಿಯೇ ಬಿಡುತ್ತದೆ ಎಂದು ನಿರೀಕ್ಷಿಸುತ್ತಿದೆ. ಆದರೆ, ರಾಜಕೀಯ ನಾಯಕರು ಈ ಸಮಸ್ಯೆಯನ್ನು ಇನ್ನೂ ಜೀವಂತವಾಗಿಯೇ ಇರಿಸಿದ್ದಾರೆ.

ಮಹಾದಾಯಿ ಯೋಜನೆಗೆ ಚಾಲನೆ ನೀಡಲು ಕರ್ನಾಟಕ ರಾಜ್ಯ ಸರ್ಕಾರ ಸದಾ ಸಿದ್ಧವಿದೆ. ಆದರೆ, ಕೇಂದ್ರದಿಂದ ಪರಿಸರ ತಿರುವಳಿ ನೀಡುವುದು ಇನ್ನೂ ಬಾಕಿ ಉಳಿದಿದೆ. ತೀರುವಳಿ ಸಿಕ್ಕ ಕೂಡಲೇ ನಾವು ಕಾಮಗಾರಿಯನ್ನು ಪ್ರಾರಂಭಿಸಲು ಸಿದ್ಧರಿದ್ದೇವೆ ಎಂಧು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಕರ್ನಾಟಕಕ್ಕೆ 80,000 ಕೋಟಿ ರೂ. ನಷ್ಟ
ಅನುದಾನ ಹಂಚಿಕೆಯಲ್ಲಿ ಆಗಿರುವ ತಾರತಮ್ಯದಿಂದಾಗಿ ಕಳೆದ ಐದು ವರ್ಷದ ಅವಧಿಯಲ್ಲಿ ಕರ್ನಾಟಕಕ್ಕೆ 80,000 ಕೋಟಿ ರೂ. ನಷ್ಟ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಗುರುವಾರ 16ನೇ ಹಣಕಾಸು ಆಯೋಗದವರೊಂದಿಗೆ ಸಭೆ ನಡೆದಿದೆ. ಈ ಸಭೆಯಲ್ಲಿ ತೆರಿಗೆ ಹಂಚಿಕೆ ಹಾಗೂ ವಿಶೇಷ ಅನುದಾನಗಳ ಬಗ್ಗೆ ಕರ್ನಾಟಕದ ನಿಲುವನ್ನು ಸ್ಪಷ್ಟಪಡಿಸಲಾಗಿದೆ.
15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದರ ಕುರಿತು ನಾವು ಈಗಾಗಲೇ ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದೇವು. ಆಯೋಗ ಶಿಫಾರಸ್ಸು ಮಾಡಿದ್ದ 11,495 ಕೋಟಿ ರೂಪಾಯಿ ಕರ್ನಾಟಕಕ್ಕೆ ಬಿಡುಗಡೆ ಆಗಿರಲಿಲ್ಲ. ರಾಜ್ಯಕ್ಕೆ ಹಂಚಿಕೆಯಾಗುತ್ತಿದ್ದ ತೆರಿಗೆ ಪ್ರಮಾಣ 4.713 ರಿಂದ 3.647 ಗೆ ಇಳಿದಿದೆ., 1.66 ರಷ್ಟು ಕಡಿಮೆಯಾಗಿದೆ. ಈ ಎಲ್ಲ ಕಾರಣಗಳಿಂದ ಕಳೆದ ಐದು ವರ್ಷಗಳಿಂದ ರಾಜ್ಯಕ್ಕೆ ಅಂದಾಜು 80,000 ಕೋಟಿ ರೂಪಾಯಿಗೂ ಹೆಚ್ಚಿನ ಅನುದಾನ ನಷ್ಟವಾಗಿದೆ. ಈ ಕೊರತೆಯನ್ನು ಸರಿದೂಗಿಸುವಂತೆ ಗುರುವಾರ ನಡೆದ ಸಭೆಯಲ್ಲಿ ಆಯೋಗದ ಸದಸ್ಯರಿಗೆ ಕರ್ನಾಟಕದ ವತಿಯಿಂದ ವಿವರಿಸಲಾಗಿದೆ ಎಂದು ಹೇಳಿದ್ದಾರೆ.

16ನೇ ಹಣಕಾಸಿನ ಆಯೋಗದವರು ಸಹ ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿಂದೆ ಹಣಕಾಸಿನ ಆಯೋಗದಿಂದ ಕರ್ಣಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವ ಮತ್ತು ಅನುದಾನ ಕೊರತೆಯನ್ನು ಸರಿಪಡಿಸುವ ವಿಶ್ವಾಸವಿದೆ ಎಂದಿದ್ದಾರೆ.
ವಿಪಕ್ಷದವರಿಗೆ ಹೊಟ್ಟೆಕಿಚ್ಚು: ಸಿ.ಎಂ
ವಿಪಕ್ಷದವರಿಗೆ ನನ್ನನ್ನು ನೋಡಿದರೆ, ಹೊಟ್ಟೆಕಿಚ್ಚು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಜಾತಿ ವ್ಯವಸ್ಥೆಯ ಈ ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಅವಕಾಶ ಸಿಗಬೇಕು ಎಂದು ಮಹಾತ್ಮಗಾಂಧಿ ಹೇಳಿದ್ದರು. ಆ ಮಾತಿನಲ್ಲಿ ನಂಬಿಕೆ ಇರಿಸಿಕೊಂಡು ನಾನು ಕಾರ್ಯಕ್ರಮ ರೂಪಿಸುತ್ತಿದ್ದೇನೆ. ಇದೇ ವಿಪಕ್ಷದವರಿಗೆ ಹೊಟ್ಟೆಕಿಚ್ಚಿಗೆ ಕಾರಣವಾಗಿದೆ. ಈ ಹೊಟ್ಟೆಕಿಚ್ಚಿ ಪ್ರವೃತ್ತಿಯಿಂದ ಅವರೇ ನಾಶ ವಾಗುತ್ತಾರೆಯೇ ಹೊರತು ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಸಿ.ಎಂ ಎಚ್ಚರಿಸಿದ್ದಾರೆ.
ನಾನು ಯಾರಿಗೂ, ಯಾವುದೇ ಪಿತೂರಿ-ಷಡ್ಯಂತ್ರಗಳಿಗೆ ಭಯಪಡಲ್ಲ. ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ದ ಗೆರಿಲ್ಲಾ ಸೇನಾನಿ ರಾಯಣ್ಣನನ್ನು ಬ್ರಿಟೀಷರಿಗೆ ಮೋಸದಿಂದ ಹಿಡಿದುಕೊಟ್ಟಿದ್ದು ಸಹ ನಮ್ಮವರೇ. ಇಂಥಾ ದೇಶದ್ರೋಹಿಗಳು ಈಗಲೂ ನಮ್ಮೊಳಗೆ ಇದ್ದಾರೆ. ಇಂಥಾ ದೇಶದ್ರೋಹಿಗಳು ಎಲ್ಲಾ ಕಾಲದಲ್ಲೂ ಎಲ್ಲ ಕಡೆಗಳಲ್ಲೂ ಇರುತ್ತಾರೆ. ಇಂಥವರನ್ನು ನಾವು ಒಗ್ಗಟ್ಟಿನಿಂದ ಎದುರಿಸುವ ಮೂಲಕ ಸೋಲಿಸಬೇಕು ಎಂದು ಸಿ.ಎಂ ಹೇಳಿದ್ದಾರೆ.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ












Click it and Unblock the Notifications