ಗ್ಯಾರಂಟಿ ಬಗ್ಗೆ ಸುಳ್ಳು ಜಾಹೀರಾತು: ಬಿಜೆಪಿ ನಾಯಕರಿಗೆ ಈ ಆಫರ್ ಕೊಟ್ಟ ಡಿ.ಕೆ ಶಿವಕುಮಾರ್

ಮುಂಬೈ, ನವೆಂಬರ್‌ 09: ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಯಶಸ್ಸಿನ ಬಗ್ಗೆ ಖುದ್ದು ಜನರಿಂದ ಮಾಹಿತಿ ಪಡೆಯಲು ಮಹಾರಾಷ್ಟ್ರದ ಮಹಾಯುತಿ (ಬಿಜೆಪಿ ಮಿತ್ರ ಪಕ್ಷಗಳು) ನಾಯಕರು ಭೇಟಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ವಿಶೇಷ ಬಸ್ ಹಾಗೂ ವಿಮಾನದ ವ್ಯವಸ್ಥೆ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಹಿರಂಗ ಸವಾಲು ಹಾಕಿದರು.

ಮುಂಬೈನ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಂಟಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಅವರು, ಬಿಜೆಪಿಯು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ವಿಚಾರವಾಗಿ ಪತ್ರಿಕೆಗಳಿಗೆ ಸುಳ್ಳು ಜಾಹೀರಾತು ನೀಡಿತ್ತು. ಈ ಸುಳ್ಳನ್ನು ಬಯಲು ಮಾಡಲು ನಾವು ಮಹಾರಾಷ್ಟ್ರಕ್ಕೆ ಬಂದಿದ್ದೇವೆ. ಯಾವುದೇ ಸಮಯದಲ್ಲಿ ಮಹಾಯುತಿ ನಾಯಕರು ರಾಜ್ಯಕ್ಕೆ ಭೇಟಿ ನೀಡಬಹುದು. ನೇರವಾಗಿ ಜನರ ಬಳಿಗೆ ಬಂದು ಚರ್ಚೆ ಮಾಡಬಹುದು. ನಾನೇ ಖುದ್ದಾಗಿ ನಿಂತು ಈ ವ್ಯವಸ್ಥೆ ಮಾಡಿಕೊಡುತ್ತೇನೆ ಎಂದು ಸವಾಲು ಹಾಕಿದರು.

Maharashtra BJP leaders should study Implementation Of Guarantee In Karnataka DK Shivakumar

ಗ್ಯಾರಂಟಿ ಯೋಜನೆಗಳು ಜಾರಿಗೂ ಮುನ್ನ ಕರ್ನಾಟಕದ ಜಿಡಿಪಿ ಶೇ 8.2 ರಷ್ಟಿತ್ತು. ಈಗ ಶೇ 10.2 ರಷ್ಟಿದೆ. ಇದು ನನ್ನ ಲೆಕ್ಕಾಚಾರವಲ್ಲ, ಭಾರತ ಸರ್ಕಾರದ ವಿವಿಧ ಸಂಸ್ಥೆಗಳ ಲೆಕ್ಕಾಚಾರ. ಗ್ಯಾರಂಟಿ ವಿಚಾರವಾಗಿ ಸುಳ್ಳು ಹಬ್ಬಿಸಿದ ಪಕ್ಷಗಳ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುವ ಕುರಿತು ನಾವು ಯೋಚನೆ ಮಾಡುತ್ತಿದ್ದೇವೆ. ನುಡಿದಂತೆ ನಡಿದ ನಮ್ಮ ವಿರುದ್ಧ ಸುಳ್ಳು ಹೇಳುತ್ತಿದ್ದಾರೆ. ಇವರೆಲ್ಲ ದೇಶದ ಮಹಾನ್ ಸುಳ್ಳುಗಾರರು ಎಂದು ಕಿಡಿಕಾರಿದರು.

ನಮ್ಮ ಯೋಜನೆಗಳ ಬಗ್ಗೆ ಆರೋಪ ಮಾಡಿ, ಮಹಾರಾಷ್ಟ್ರದ ಜನತೆಗೆ ಕಾಂಗ್ರೆಸ್ ಪಕ್ಷದ ಬದ್ಧತೆ ಹಾಗೂ ಕೆಲಸಗಳ ಬಗ್ಗೆ ಸತ್ಯವನ್ನು ತಿಳಿಸಲು ಅವಕಾಶ ಮಾಡಿಕೊಟ್ಟ ಮಹಾರಾಷ್ಟ್ರದ ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳಿಗೆ ಧನ್ಯವಾದಗಳು. ಪ್ರಧಾನಿ ಮೋದಿ ಅವರಿಂದ ಹಿಡಿದು ಬಿಜೆಪಿಯ ಎಲ್ಲಾ ನಾಯಕರು ಹಾಗೂ ಅನೇಕ ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳನ್ನು ಲೇವಡಿ ಮಾಡುತ್ತಿದ್ದರು. ಆದರೆ ಈಗ ಅವರೇ ಅನೇಕ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳ ಜಾರಿಗೆ ಭರವಸೆ ಕೊಟ್ಟಿದ್ದಾರೆ. ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ಹೆಮ್ಮೆ. ಬಿಜೆಪಿ ನಮ್ಮಿಂದ ಗ್ಯಾರಂಟಿ ಯೋಜನೆಯನ್ನು ನಕಲು ಮಾಡಿದೆ ಎಂದು ತಿರುಗೇಟು ನೀಡಿದರು.

ಗ್ಯಾರಂಟಿ ಯೋಜನೆಗಳನ್ನು ಕುರುಡು, ಕುರುಡಾಗಿ ಜಾರಿಗೆ ತಂದಿಲ್ಲ. ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯ ಮೂಲಕ ಈ ದೇಶದ ಲಕ್ಷಾಂತರ ಜನರನ್ನು ಭೇಟಿ ಮಾಡಿ ಅವರ ಬಳಿ ಚರ್ಚೆ ನಡೆಸಿ ಜಾರಿಗೆ ತರಲಾಗಿದೆ ಎಂದು ಡಿ ಕೆ ಶಿವಕುಮಾರ್‌ ಹೇಳಿದರು.

ಕನ್ಯಾಕುಮಾರಿಯಿಂದ ಪ್ರಾರಂಭವಾದ ಭಾರತ ಜೋಡೋ ಯಾತ್ರೆ ಕೇರಳ ನಂತರ ಕರ್ನಾಟಕದಲ್ಲಿ 22 ದಿನಗಳ ಸುದೀರ್ಘ ಕಾಲ್ನಡಿಗೆ ಮೂಲಕ ಹಾದು ಹೋಯಿತು. ನಡಿಗೆ ವೇಳೆ ಸಮಾಜದ ವಿವಿಧ ವರ್ಗಗಳ ಜನರ ಜೊತೆ ರಾಹುಲ್ ಗಾಂಧಿ ಚರ್ಚೆ ನಡೆಸಿದರು. ಬೆಲೆ ಏರಿಕೆ, ನಿರುದ್ಯೋಗ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಜನರು ಗಮನ ಸೆಳೆಯುತ್ತಾ ಇದ್ದರು. ಈ ಕಾರಣಕ್ಕೆ ಐದು ಗ್ಯಾರಂಟಿಗಳನ್ನು ಜಾರಿಗೆ ತರಲಾಯಿತು ಎಂದು ಹೇಳಿದರು.

ನಾವು ಮೊದಲು ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಘೋಷಣೆ ಮಾಡಲಾಯಿತು, ಯುಪಿಎ ಸರ್ಕಾರದ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರಿಗೆ 7 ಕೆ.ಜಿ. ಅಕ್ಕಿ ಕೊಡುತ್ತಿತ್ತು. ನಂತರ ಬಂದ ಬಿಜೆಪಿ ಸರ್ಕಾರ ಅದನ್ನು 5 ಕೆ.ಜಿಗೆ ಇಳಿಸಿತ್ತು. ಅದಕ್ಕಾಗಿ ಎರಡನೇ ಗ್ಯಾರಂಟಿಯಾಗಿ 10 ಕೆ.ಜಿ ಅಕ್ಕಿ ನೀಡುವ 'ಅನ್ನಭಾಗ್ಯ' ಯೋಜನೆ ಘೋಷಣೆ ಮಾಡಿದೆವು.

ನಂತರ ಪ್ರಿಯಾಂಕಾ ಗಾಂಧಿ ಅವರ ಸಮ್ಮುಖದಲ್ಲಿ ಒಂದು ಕುಟುಂಬದ ಒಬ್ಬ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆ ಘೋಷಣೆ ಮಾಡಿದೆವು. ಅವರ ಮುಂದೆಯೇ ಗ್ಯಾರಂಟಿ ಚೆಕ್ ಗೆ ಸಹಿ ಹಾಕಿದೆವು. ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡುವ 'ಶಕ್ತಿ' ಯೋಜನೆ ಹಾಗೂ ನಿರುದ್ಯೋಗದಿಂದ ತತ್ತರಿಸುತ್ತಿದ್ದ ಯುವಕರಿಗೆ ನೇರವಾಗಲು ಡಿಪ್ಲೋಮ ಪದವೀದರರಿಗೆ ₹ 1,500 ಹಾಗೂ ಪದವಿ ಪಡೆದವರಿಗೆ ₹ 3,000 ಸಹಾಯಧನ ನೀಡುವ ಯುವನಿಧಿ ಘೋಷಣೆ ಮಾಡಿ, ಈಗ ಅವುಗಳನ್ನು ಜಾರಿಗೆ ತಂದಿದ್ದೇವೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+