ಬೆಳಗಾವಿ, ಕಾರವಾರ, ನಿಪ್ಪಾಣಿ ಮಹಾರಾಷ್ಟ್ರಕ್ಕೆ: ಕಿಡಿ ಹಚ್ಚಿಸಿದ ಅಜಿತ್ ಪವಾರ್ಗೆ ಬಿಎಸ್ವೈ ತಿರುಗೇಟು
ಮುಂಬೈ, ನವೆಂಬರ್ 18: ಕರ್ನಾಟಕದಲ್ಲಿ ಮರಾಠಾ ಅಭಿವೃದ್ಧಿ ನಿಗಮದ ರಚನೆ ಘೋಷಣೆ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಮೂಲಕ ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ ಕನಸನ್ನು ಸಾಕಾರಗೊಳಿಸಬೇಕು ಎಂದು ಅಜಿತ್ ಪವಾರ್ ಹೇಳಿದ್ದಾರೆ.
ಬಾಳ ಠಾಕ್ರೆ ಅವರ ಎಂಟನೇ ಪುಣ್ಯತಿಥಿಯ ಸಂದರ್ಭದಲ್ಲಿ ಶಿವಸೇನಾ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಮುಂತಾದವರು ದಾದರ್ನ ಶಿವಾಜಿ ಪಾರ್ಕ್ನಲ್ಲಿನ ಸ್ಮೃತಿಸ್ಥಳದಲ್ಲಿ ಬಾಳ ಠಾಕ್ರೆ ಅವರ ಸಮಾಧಿಗೆ ವಂದನೆ ಸಲ್ಲಿಸಿದ ಸಂದರ್ಭದಲ್ಲಿ ಅಜಿತ್ ಪವಾರ್ ಈ ಹೇಳಿಕೆ ನೀಡಿದ್ದಾರೆ.
ಬಾಳ ಠಾಕ್ರೆ ಅವರು ಮಹಾರಾಷ್ಟ್ರದ ಗೌರವ, ಮರಾಠಿಗರ ಘನತೆ ಮತ್ತು ಜನಸಾಮಾನ್ಯರ ನ್ಯಾಯಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟು ಹೋರಾಡಿದರು ಎಂದು ಅಜಿತ್ ಪವಾರ್ ಶ್ಲಾಘಿಸಿದ್ದರು.

'ಮಹಾರಾಷ್ಟ್ರದ ಸಂಪೂರ್ಣ ಬೆಳವಣಿಗೆ ಮತ್ತು ಕರ್ನಾಟಕದಲ್ಲಿರುವ ಅಧಿಕ ಮರಾಠಿ ಭಾಷಿಕ ಜನಸಂಖ್ಯೆಯುಳ್ಳ ಪ್ರದೇಶಗಳಾದ ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎನ್ನುವುದು ಬಾಳ ಠಾಕ್ರೆ ಅವರ ಕನಸಾಗಿತ್ತು. ಆ ಕನಸನ್ನು ನನಸು ಮಾಡಲು ನಾವು ಪ್ರಯತ್ನ ಮಾಡೋಣ' ಎಂದು ಅಜಿತ್ ಪವಾರ್ ಹೇಳಿದ್ದಾರೆ.
ಯಡಿಯೂರಪ್ಪ ಕಿಡಿ:
ಅಜಿತ್ ಪವಾರ್ ಹೇಳಿಕೆಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಖಂಡಿಸಿದ್ದಾರೆ. 'ಅಜಿತ್ ಪವಾರ್ ಅವರು ಕ್ಯಾತೆ ತೆಗೆಯುವ ಮೂಲಕ ಜನರಲ್ಲಿ ಗೊಂದಲ ಉಂಟುಮಾಡುವ ಪ್ರಯತ್ನ ಮಾಡುತ್ತಿದ್ದು, ಅದನ್ನು ಖಂಡಿಸುತ್ತೇನೆ. ಮಹಾಜನ್ ಆಯೋಗದ ತೀರ್ಪು ಇಲ್ಲಿ ಅಂತಿಮ. ಇದು ಇಡೀ ಜಗತ್ತಿಗೆ ಗೊತ್ತಿದೆ' ಎಂದು ಅವರು ಕಿಡಿಕಾರಿದ್ದಾರೆ.
Recommended Video
ಅಜಿತ್ ಪವಾರ್ ಉದ್ದಟತನದಿಂದ ಮಾತನಾಡಿದ್ದಾರೆ. ಅವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಮರಾಠಿಗರೂ ನಮ್ಮ ರಾಜ್ಯದ ಕನ್ನಡಿಗರು. ಕನ್ನಡಿಗ ಮರಾಠರ ಅಭಿವೃದ್ಧಿಗಾಗಿ ಪ್ರಾಧಿಕಾರ ರಚಿಸಿದ್ದೇವೆ. ಇದರಲ್ಲಿ ಗೊಂದಲ ಬೇಡ ಎಂದು ಯಡಿಯೂರಪ್ಪ ಹೇಳಿದ್ದಾರೆ.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications