ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ಬಿಟ್ಟು ಉಳಿದ ರಾಜ್ಯಗಳಲ್ಲಿದೆ ನೀರು!
ನವದೆಹಲಿ, ಜೂನ್ 17:ದೇಶದಲ್ಲಿ ಎಲ್ಲೆಡೆ ಮುಂಗಾರು ಪೂರ್ವ ಮಳೆಯೂ ಇಲ್ಲದೆ ಮುಂಗಾರು ಕೂಡ ಸಕಾಲಕ್ಕೆ ಆಗಮಿಸದೆ ಬರ ಪರಿಸ್ಥಿತಿ ಎದುರಿಸುವಂತಾಗಿದೆ.
ರೈತರು ಪ್ರಾಣ ಕಳೆದುಕೊಳ್ಳುವ ಹಂತಕ್ಕೆ ತಲುಪಿದ್ದಾರೆ, ಅಡಿಕೆ ಮರಗಳು ಕೆಂಪಾಗಿ ಸೊರಗಿದೆ, ಉಳಿದ ಬೆಳಗಳೂ ಬಿಸಿಲಿಗೆ ಬಾಡಿವೆ.
ಸಾಕಷ್ಟು ಜಲಾಶಯಗಳು ಸೊರಗಿ ಹೋಗಿವೆ. ಕಿಲೋಮೀಟರ್ಗಳಷ್ಟು ನಡೆದರೂ ಎಲ್ಲಿಯೂ ನೀರು ಸಿಗದಿರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಕೇಂದ್ರ ಜಲ ಆಯೋಗ ನೀಡಿರುವ ಮಾಹಿತಿ ಪ್ರಕಾರ ಕಳೆದ ವರ್ಷಕ್ಕಿಂತಲೂ ಜಲಾಶಯಗಳಲ್ಲಿ ಈ ಬಾರಿ ಹೆಚ್ಚು ನೀರಿದೆ ಎಂದು ಹೇಳಿರುವುದು ಆಶ್ಚರ್ಯಚಕಿತರನ್ನಾಗಿಸಿದೆ.

ಕೇಂದ್ರ ಜಲ ಆಯೋಗವು 91 ಪ್ರಮುಖ ಜಲಾಶಯಗಳ ಮಟ್ಟವನ್ನು ಗುರುತಿಸಿದೆ. ಕಳೆದ ಹತ್ತು ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜಲಾಶಯಗಳಲ್ಲಿ ನೀರಿದೆ ಎಂದು ಹೇಳಿದೆ.
ಆದರೆ ಮಹಾರಾಷ್ಟ್ರ, ಗುಜರಾತ್, ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಕೊರತೆ ಇದೆ ಎಂದೂ ಕೂಡ ಹೇಳಿದೆ. ಕಳೆದ ಹತ್ತು ವರ್ಷಕ್ಕೆ ಹೋಲಿಸಿದರೆ ಜಲಾಶಯಗಳ ನೀರಿನ ಮಟ್ಟ ಕಡಿಮೆ ಇದ್ದರೂ ಕೂಡ ಸಾಮಾನ್ಯ ಮಟ್ಟದಲ್ಲಿದೆ.
ನೈಋತ್ಯ ಜೂನ್ 1ಕ್ಕೆ ಕೇರಳ ಪ್ರವೇಶಿಸಬೇಕಿದ್ದ ಮುಂಗಾರು ಒಂದು ವಾರ ತಡವಾಗಿ ಅಂದರೆ ಜೂನ್ 8ಕ್ಕೆ ಆಗಮಿಸಿದೆ. ಪ್ರತಿ ವರ್ಷವೂ ಜೂನ್ ನಿಂದ ಮುಂಗಾರು ಆರಂಭಗೊಂಡು ಸೆಪ್ಟೆಂಬರ್ ವರೆಗೆ ಮಳೆ ಸುರಿಯುತ್ತಲೇ ಇರುತ್ತಿತ್ತು. ಆದರೆ ಈಗಾಘಲೇ ಜೂನ್ ಕಳೆಯುತ್ತಾ ಬಂದಿದೆ. ಇನ್ನೂ ಕೆಲವೇ ಕೆಲವು ಕಡೆಗಳಲ್ಲಿ ಮಾತ್ರ ಮಳೆಯಾಗಿದೆ. ಹಾಗಾಗಿ ಈ ಬಾರಿ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೇರಳಕ್ಕೆ ಒಂದು ವಾರ ತಡವಾಗಿ ಮುಂಗಾರು ಪ್ರವೇಶಿಸಿದೆ ಎಂದರೆ ಇಡೀ ದೇಶದೆಲ್ಲಡೆ ಅದೇ ರೀತಿಯಾಗುತ್ತದೆ ಎಂದು ಅರ್ಥವಲ್ಲ. ಒಡಿಶಾ ಸೇರಿದಂತೆ ಹಲವೆಡೆ ಮಳೆ ಚೆನ್ನಾಗಿ ಸುರಿಯುತ್ತಿದೆ.ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಮಟ್ಟ ಶೇ.8ರಷ್ಟು ಕಡಿಮೆ ಇದೆ. ಲಿಂಗನಮಕ್ಕಿ ಅಣೆಕಟ್ಟಿನಲ್ಲಿ 151.75 ಟಿಎಂಸಿಯಷ್ಟು ನೀರು ಶೇಖರಿಸುವ ಸಾಮರ್ಥ್ಯವಿದೆ, ಪ್ರಸ್ತುತ 16.06ನಷ್ಟು ಮಾತ್ರ ನೀರಿದೆ.
-
Summer Alert: ಬೇಸಿಗೆಯಲ್ಲಿ ಫ್ರಿಜ್ ನೀರು ಕುಡಿಯುತ್ತಿದ್ದೀರಾ? ಮೊದಲು ಈ ವಿಷಯ ತಿಳಿದುಕೊಳ್ಳಿ -
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications