ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Border Row : ಗಡಿ ವಿವಾದ, ಸಿಎಂ ಜೊತೆ ಏಕನಾಥ್ ಶಿಂಧೆ ಮಾತುಕತೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 06; ಕರ್ನಾಟಕ-ಮಹಾರಾಷ್ಟ್ರ ನಡುವಿನ ಗಡಿ ವಿವಾದ ಭಾರೀ ಚರ್ಚೆಗೆ ಕಾರಣವಾಗಿದೆ. ಕನ್ನಡ ಪರ ಸಂಘಟನೆಗಳು ಬೆಳಗಾವಿಯಲ್ಲಿ ಮಂಗಳವಾರ ಬೃಹತ್ ಹೋರಾಟ ನಡೆಸಿವೆ.

ಮಂಗಳವಾರ ಸಂಜೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.

ಬೆಳಗಾವಿ ಗಡಿ ಗಲಾಟೆ: ಕರ್ನಾಟಕಕ್ಕೆ ಬಸ್‌ ಸೇವೆ ನಿಲ್ಲಿಸಿದ ಮಹಾರಾಷ್ಟ್ರ ಬೆಳಗಾವಿ ಗಡಿ ಗಲಾಟೆ: ಕರ್ನಾಟಕಕ್ಕೆ ಬಸ್‌ ಸೇವೆ ನಿಲ್ಲಿಸಿದ ಮಹಾರಾಷ್ಟ್ರ

ಈ ಕುರಿತು ಬಸವರಾಜ ಬೊಮ್ಮಾಯಿ ಫೇಸ್‌ಬುಕ್ ಪೋಸ್ಟ್‌ ಮೂಲಕ ಮಾಹಿತಿ ನೀಡಿದ್ದಾರೆ. ಎರಡೂ ರಾಜ್ಯಗಳಲ್ಲಿ ಕಾನೂನು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಕುರಿತು ಚರ್ಚಿಸಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ, ಗಡಿ ವಿಚಾರದಲ್ಲಿ ರಾಜಕೀಯ ದೃಷ್ಟಿ ಇಲ್ಲ: ಸಿಎಂ ಸ್ಪಷ್ಟನೆಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ, ಗಡಿ ವಿಚಾರದಲ್ಲಿ ರಾಜಕೀಯ ದೃಷ್ಟಿ ಇಲ್ಲ: ಸಿಎಂ ಸ್ಪಷ್ಟನೆ

Maharashtra Karnataka Border Row Eknath Shinde Phone Call To Karnataka CM

ಎರಡೂ ರಾಜ್ಯಗಳ ಜನರು ನಡುವೆ ಉತ್ತಮ ಬಾಂಧವ್ಯವಿದೆ. ಗಡಿ ವಿಚಾರದಲ್ಲಿ ನಮ್ಮ ನಿಲುವು ಅಚಲ ಮತ್ತು ಸ್ಪಷ್ಟವಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ನಮ್ಮ ಕಾನೂನು ಹೋರಾಟ ಮುಂದುವರೆಯಲಿದೆ ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಮಹಾರಾಷ್ಟ್ರದ ಗಡಿ ಕ್ಯಾತೆ: ಎರಡೂ ರಾಜ್ಯಗಳ 'ಬಿಜೆಪಿ' ಸರ್ಕಾರಗಳು ಕನ್ನಡಿಗರನ್ನು ವಂಚಿಸುತ್ತಿವೆ ಎಂದ ಕಾಂಗ್ರೆಸ್‌ ಮಹಾರಾಷ್ಟ್ರದ ಗಡಿ ಕ್ಯಾತೆ: ಎರಡೂ ರಾಜ್ಯಗಳ 'ಬಿಜೆಪಿ' ಸರ್ಕಾರಗಳು ಕನ್ನಡಿಗರನ್ನು ವಂಚಿಸುತ್ತಿವೆ ಎಂದ ಕಾಂಗ್ರೆಸ್‌

ಸಚಿವರು ಭೇಟಿ ನೀಡಬೇಕಿತ್ತು; ಗಡಿ ವಿವಾದದ ನಡುವೆಯೇ ಮಂಗಳವಾರ ಮಹಾರಾಷ್ಟ್ರ ಗಡಿ ಸಮನ್ವಯ ಸಚಿವ ಚಂದ್ರಕಾಂತ ಪಾಟೀಲ್, ಶಂಭುರಾಜ ದೇಸಾಯಿ ಮತ್ತು ಮಹಾರಾಷ್ಟ್ರದ ಗಡಿತಜ್ಞ ಸಮಿತಿ ಅಧ್ಯಕ್ಷ, ಸಂಸದ ಧೈರ್ಯಶೀಲ ಬೆಳಗಾವಿಗೆ ಭೇಟಿ ನೀಡಬೇಕಿತ್ತು.

ಆದರೆ ಕನ್ನಡ ಪರ ಸಂಘಟನೆಗಳು ಈ ಭೇಟಿಗೆ ವಿರೋಧ ವ್ಯಕ್ತಪಡಿಸಿದ್ದವು. ಮಹಾರಾಷ್ಟ್ರದ ಸಚಿವರು, ಸಂಸದರು ಬೆಳಗಾವಿಗೆ ಬಂದು ಸಭೆ ನಡೆಸಲು ಅವಕಾಶ ನೀಡಬಾರದು ಎಂದು ಆಗ್ರಹಿಸಿದ್ದರು.

ಬೆಳಗಾವಿ ಜಿಲ್ಲಾಧಿಕಾರಿ ನಿತೀಶ್ ಪಟೇಲ್ ಸಚಿವರು, ಸಂಸದರು ಡಿಸೆಂಬರ್ 6ರಂದು ಬೆಳಗಾವಿಗೆ ಭೇಟಿ ನೀಡದಂತೆ ನಿಷೇಧಾಜ್ಞೆ ಜಾರಿಗೊಳಿಸಿದ್ದರು. 144 (3) ಸಿಆರ್‌ಪಿಸಿ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದರು.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿನ್ನಲೆ ಬೆಳಗಾವಿಯಲ್ಲಿ ಕಟ್ಟೆಚ್ಚರವಹಿಸಲಾಗಿದೆ. ಕನ್ನಡ ಪರ ಸಂಘಟನೆಗಳು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದ ಬಳಿಕ ಮಹಾರಾಷ್ಟ್ರ ಕರ್ನಾಟಕಕ್ಕೆ ಬಸ್ ಸೇವೆ ಸ್ಥಗಿತಗೊಳಿಸಿದೆ.

English summary
Border Row; Maharashtra chief minister Eknath Shinde phone call to Karnataka CM Basavaraj Bommai. Both agreed that there should be peace and law and order to be maintain in both the states.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X