Get Updates
Get notified of breaking news, exclusive insights, and must-see stories!

ಮಹಾರಾಷ್ಟ್ರ: ಕನ್ನಡಿಗ ಬಸ್‌ ಡ್ರೈವರಿಗೆ ಕೇಸರಿ ಬಳಿದ MES ಪುಂಡರು, ವಿಡಿಯೋ ವೈರಲ್!

ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ಭಾಗದಲ್ಲಿ ದಿನದಿಂದ ದಿನಕ್ಕೆ ಕನ್ನಡಿಗರ ಮೇಲೆ ದೌರ್ಜನ್ಯ ಹೆಚ್ಚಳವಾಗುತ್ತಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರವು ಮಧ್ಯಪ್ರವೇಶ ಮಾಡದೆ ಇರುವುದಕ್ಕೆ ಕನ್ನಡಿಗರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದರ ನಡುವೆ ಮಹಾರಾಷ್ಟ್ರದಲ್ಲಿ ಸರ್ಕಾರಿ ಬಸ್‌ಗಳ ಡ್ರೈವರ್‌ಗಳ ಮೇಲೆ ದೌರ್ಜನ್ಯ ನಡೆಸುವುದು ಮುಂದುವರಿದಿದ್ದು ಭಾರೀ ವಿರೋಧ ವ್ಯಕ್ತವಾಗಿದೆ. ಇದರ ನಡುವೆ ಕರ್ನಾಟಕದ ಬಸ್‌ ಡ್ರೈವರ್‌ಗಳ ಮೇಲೆ ದೌರ್ಜನ್ಯ ಮುಂದುವರಿದಿರುವುದು ಭಾರೀ ವಿರೋಧಕ್ಕೆ ಕಾರಣವಾಗಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರವು ಈ ವಿಚಾರದಲ್ಲಿ ಯಾವುದೇ ಮುಂದಡಿಯನ್ನು ಇರಿಸದೆ ಇರುವುದು ಸಹ ಭಾರೀ ಆಕ್ರೋಶಕ್ಕೆ ಕಾರಣವಾಗುತ್ತಿದೆ.

ಕರ್ನಾಟಕದ ಬೆಳಗಾವಿಯಲ್ಲಿ ಮತ್ತೊಮ್ಮೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ನಡುವೆ ಗಡಿವಿವಾದ ಮೊದಲಿನಿಂದಲೂ ಇದೆ. ಆದರೆ, ಇದೀಗ ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಭಾಷಾ ವಿವಾದ ಸೃಷ್ಟಿಯಾಗಿದೆ. ಕರ್ನಾಟಕದ ಬಸ್‌ ಕಂಡಕ್ಟರ್‌ನ ಮೇಲೆ ಮರಾಠಿ ಪುಂಡರು ಹಲ್ಲೆ ಮಾಡಿರುವ ವಿಷಯ ತಣ್ಣಗಾಗುತ್ತಿಲ್ಲ. ಅಲ್ಲದೆ ಈ ಬೆಳವಣಿಗೆ ಬೆನ್ನಲ್ಲೇ ಕನ್ನಡಿಗರು ಮಹಾರಾಷ್ಟ್ರದ ಬಸ್‌ಗಳಿಗೆ ಮಸಿ ಬಳಿಯುವುದು ಹಾಗೂ ಕಂಡಕ್ಟರ್‌ಗೆ ಮಸಿ ಬಳಿದಿದ್ದಾರೆ ಎನ್ನಲಾದ ವಿಡಿಯೋಗಳು ಸಹ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಇದರ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಕನ್ನಡಿಗ ಬಸ್‌ ಡ್ರೈವರ್‌ಗಳಿಗೆ ಸಂಕಷ್ಟ ಎದುರಾಗಿದೆ.

Maharashtra MES Goons Smear Saffron on Kannadiga Bus Driver Video Goes Viral

ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವೆ ಸೃಷ್ಟಿಯಾಗಿರುವ ಸಮಸ್ಯೆ ಸದ್ಯಕ್ಕೆ ಕಡಿಮೆಯಾಗುವ ಯಾವುದೇ ಲಕ್ಷಣಗಳು ಸಹ ಕಾಣಿಸುತ್ತಿಲ್ಲ. ಮಹಾರಾಷ್ಟ್ರ ಸರ್ಕಾರವು ಮುಂಜಾಗ್ರತಾ ಕ್ರಮವಾಗಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಸರ್ಕಾರಿ ಬಸ್‌ಗಳ ಸಂಚಾರವನ್ನು ಸ್ಥಗಿತ ಮಾಡಿದೆ. ಆದರೆ, ಕರ್ನಾಟಕದ ಬಸ್‌ ಸಂಚಾರ ಮುಂದುವರಿದಿದೆ. ಇದರಿಂದ ಮಹಾರಾಷ್ಟ್ರದಲ್ಲಿ ಕನ್ನಡಿಗರಿಗೆ ಸಂಕಷ್ಟ ಎದುರಾಗಿದೆ.

ಸೋಮವಾರ ಕರ್ನಾಟಕದ ಬಸ್‌ಗಳ ಕಂಡಕ್ಟರ್ ಹಾಗೂ ಬಸ್‌ ಡ್ರೈವರ್‌ಗಳನ್ನು ನಡೆಸಿಕೊಂಡಿರುವ ವಿಧಾನಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಸೋಮವಾರ ನಡೆದಿದೆ ಎನ್ನಲಾದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ವೈರಲ್‌ ವಿಡಿಯೋದಲ್ಲಿ ಏನಿದೆ ?

ಕರ್ನಾಟಕದ ವಾಯುವ್ಯ ಕರ್ನಾಟಕ ಸಾರಿಗೆ ಬಸ್‌ ಅನ್ನು ನಿಲ್ಲಿಸಿರುವ ಎಂಇಎಸ್‌ ಪುಂಡರು ಹಾಗೂ ಕೆಲವು ಮಾರಾಠಿಗರು, ಜೈ ಭವಾನಿ ಜೈ ಶಿವಾಜಿ ಎನ್ನುವ ಘೋಷಣೆಗಳನ್ನು ಕೂಗಿದ್ದಾರೆ. ಬಸ್‌ ನಿಲ್ಲಿಸಿ ಬಸ್‌ ಡ್ರೈವರ್‌ ಕೆಳಗೆ ಇಳಿಯುವಂತೆ ಮಾಡಿದ್ದಾರೆ. ಆ ಮೇಲೆ ಬಸ್‌ ಡ್ರೈವರ್‌ ಮುಖ ಹಾಗೂ ತಲೆಗೆ ಕೇಸರಿ ಬಳೆದಿದ್ದಾರೆ. ಅಲ್ಲದೆ ಜೈ ಮಹಾರಾಷ್ಟ್ರ ಎಂದು ಕರ್ನಾಟಕದ ಬಸ್‌ಗಳ ಮೇಲೆ ಬರೆಯಲಾಗಿದೆ. ಜೈ ಮಹಾರಾಷ್ಟ್ರ ಎನ್ನುವ ಘೋಷಣೆಗಳನ್ನು ಕೂಗಲಾಗಿದೆ. ಇದೀಗ ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು. ಕನ್ನಡಿಗರಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಮಸಿ - ಕೇಸರಿ: ಎರಡೂ ರಾಜ್ಯಗಳ ಬಸ್‌ಗಳ ಹಾಗೂ ಕಂಡಕ್ಟರ್‌ ಮತ್ತು ಡ್ರೈವರ್‌ಗಳ ಮೇಲೆ ಮಸಿ ಹಾಗೂ ಕೇಸರಿ ಬಳಿಯುವುದು ಮುಂದುವರಿದಿದೆ. ಈ ನಡುವೆ ಕರ್ನಾಟಕ ಸರ್ಕಾರವೇ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಮಹಾರಾಷ್ಟ್ರ ಸರ್ಕಾರ ಆಗ್ರಹಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+