Get Updates
Get notified of breaking news, exclusive insights, and must-see stories!

ಜಿಬಿಎ ಚುನಾವಣೆಯಿಂದ ದೂರ ಹೋಗಲು ಡಿ ಕೆ ಶಿವಕುಮಾರ್‌ ಪ್ರಯತ್ನ: ಬಿ ವೈ ವಿಜಯೇಂದ್ರ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮಹಾರಾಷ್ಟ್ರ ಮಾದರಿ ಫಲಿತಾಂಶ ನಿಶ್ಚಿತವಾಗಿ ಪರಿಣಾಮ ಆಗಲಿದೆ. ರಾಜ್ಯದ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಅವ್ಯವಹಾರ, ಭ್ರಷ್ಟಾಚಾರ, ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ಮಹಾನಗರದ ಕೆಲವು ಸಂಘಟನೆಗಳಿಗೆ ಧಮ್ಕಿ ಹಾಕಿರುವುದು- ಇವೆಲ್ಲ ಗಮನಿಸಿದಾಗ ಕಾಂಗ್ರೆಸ್ಸಿನವರು ಆತ್ಮವಿಶ್ವಾಸ ಕಳಕೊಂಡಂತೆ ಕಾಣುತ್ತಿದೆ ಎಂದು ಬಿ ವೈ ವಿಜಯೇಂದ್ರ ಅವರು ಹೇಳಿದರು.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಬಿಎ ಚುನಾವಣೆಯಿಂದ ದೂರ ಹೋಗುವ ಪ್ರಯತ್ನವನ್ನೇ ಅವರು ಮಾಡುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಬಂದಂಥ ಫಲಿತಾಂಶವು ಬೆಂಗಳೂರಿನ ಜಿಬಿಎ ಚುನಾವಣೆಯಲ್ಲೂ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Maharashtra model results to come in GBA elections BY Vijayendra

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯತೆ ಇಡೀ ದೇಶದಲ್ಲಿ ದಿನೇದಿನೇ ಹೆಚ್ಚಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಅದು ಭಾರತಕ್ಕೆ ಶಕ್ತಿಯನ್ನು ಕೊಟ್ಟಿದೆ; ಅಲ್ಲದೇ ಬಿಜೆಪಿಗೂ ಬಲವನ್ನು ನೀಡಿದೆ. ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಕುರಿತ ಪ್ರಶ್ನೆಗೆ ಉತ್ತರಿಸಿದರು. ಮಹಾರಾಷ್ಟ್ರ ಮುಖ್ಯಮಂತ್ರಿ ಫಡ್ನವೀಸ್ ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು. ಅಲ್ಲದೇ ಬಿಜೆಪಿ ಕಾರ್ಯಕರ್ತರು ಹಗಲಿರುಳೆನ್ನದೇ ಶ್ರಮ ವಹಿಸಿದ್ದು, ಅವರಿಗೂ ಅಭಿನಂದನೆಗಳು ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ನಿರೀಕ್ಷಿತ ಫಲಿತಾಂಶವೇ ಬಂದಿದೆ. ಮಹಾರಾಷ್ಟ್ರ ಮಾತ್ರವಲ್ಲ. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲೂ ತಾವು ನೋಡಿದ್ದೀರಿ. ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳ ಅಬ್ಬರದ ನಡುವೆಯೂ ನಾವು ಕರ್ನಾಟಕದಲ್ಲಿ 19 ಸ್ಥಾನಗಳನ್ನು ಗೆದ್ದಿದ್ದೆವು ಎಂದು ತಿಳಿಸಿದರು. ಇದೊಂದು ಐತಿಹಾಸಿಕ ಗೆಲುವು. ಮಹಾರಾಷ್ಟ್ರದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡಬೇಕಾದ ಫಲಿತಾಂಶವನ್ನು ಅಲ್ಲಿನ ಮತದಾರರು ನೀಡಿದ್ದಾರೆ ಎಂದು ಹೇಳಿದರು.

ಬಿಜೆಪಿಯ ಗೆಲುವು ಮಹಾರಾಷ್ಟ್ರಕ್ಕೆ ಸೀಮಿತವಾಗದೇ ನಮ್ಮ ರಾಜ್ಯವೂ ಒಳಗೊಂಡಂತೆ ದೇಶದ ಎಲ್ಲ ರಾಜ್ಯಗಳಲ್ಲಿ ಇವತ್ತು ಸಂಭ್ರಮಾಚರಣೆ ಮಾಡಿದ್ದಾರೆ ಎಂದರು. ಮತಗಳ್ಳತನ ಕುರಿತ ರಾಹುಲ್ ಗಾಂಧಿಯವರ ಟ್ವೀಟ್ ಕುರಿತ ಪ್ರಶ್ನೆಗೆ ನಗುತ್ತ ಉತ್ತರಿಸಿದ ಅವರು, ಪಾಪ ರಾಹುಲ್ ಗಾಂಧಿಯವರಿಗೆ ಏನು ಮಾಡಬೇಕೆಂದು ತೋಚುತ್ತಿಲ್ಲ ಎಂದು ತಿಳಿಸಿದರು.

ರಾಹುಲ್ ಗಾಂಧಿಯವರು ಮತಗಳ್ಳತನ, ಮತಗಳ್ಳತನ ಎಂದು ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆ ಮಾಡುವುದನ್ನು ಬಿಡಲಿ; ಮತದಾರರಿಗೆ ಅಪಮಾನ ಮಾಡುವುದನ್ನು ಬಿಡಲಿ; ಕಾಂಗ್ರೆಸ್ ಪಕ್ಷ ಯಾಕೆ ದೇಶದ ಜನರಿಂದ ದೂರ ಹೋಗುತ್ತಿದೆ? ಯಾಕೆ ದೇಶದ ಜನರ ಮನಸ್ಸಿನಲ್ಲಿ ಕಾಂಗ್ರೆಸ್ಸಿನ ಬಗ್ಗೆ ಅಸಡ್ಡೆ ಬಂದಿದೆ? ಎಂಬುದರ ಬಗ್ಗೆ ಅವಲೋಕನ ಮಾಡಿದರೆ ಮತ್ತೆ ಸೀಟು 100ರ ಗಡಿಗೆ ಬರಬಹುದೆಂದು ಮಾಧ್ಯಮಗಳ ಮೂಲಕ ಕಿವಿಮಾತು ಹೇಳಲು ಬಯಸುವುದಾಗಿ ತಿಳಿಸಿದರು. ವಿಪಕ್ಷದಲ್ಲಿ ಕೂರಲು ಲಾಯಕ್ ಎಂದು ಜನರು ತೀರ್ಮಾನಿಸಬಹುದು ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+