'ಡಿಸಿಎಂ ಮಾಡಿ, ಜೊತೆಗೆ ಜಲಸಂಪನ್ಮೂಲ ಖಾತೆ ಕೊಡಿ'
ಬೆಂಗಳೂರು. ಫೆ. 05: ಮೊದಲು ನಮಗೆ ಅಧಿಕಾರ ಬೇಡ ನೀವು ಬಿಜೆಪಿಗೆ ಬನ್ನಿ ಎಂದವರೆ ಈಗ ಮಂತ್ರಿ ಬೇಕು ಎನ್ನುತ್ತಿದ್ದಾರೆಂದು ಬಿಜೆಪಿ ನಾಯಕರ ಮೇಲೆ ಅಥಣಿ ಕ್ಷೇತ್ರದ ಬಿಜೆಪಿ ಶಾಸಕ ಮಹೇಶ್ ಕುಮಟಳ್ಳಿ ಅಸಮಧಾನ ವ್ಯಕ್ತಪಡಿಸಿದ್ದಾರೆ. ಶಾಸಕರ ಭವನದಲ್ಲಿ ಮಾತನಾಡಿರುವ ಕುಮಟಳ್ಳಿ, ಮೊದಲು ಬಿಜೆಪಿ ಬನ್ನಿ ನಮಗೆ ಅಧಿಕಾರ ಬೇಡ. ನೀವೇ ಮಂತ್ರಿ ಆಗಿ ಎಂದವರು ಈಗ ನಮಗೇ ಮಂತ್ರಿಸ್ಥಾನ ಬೇಕು ಎನ್ನುತತಿರುವುದು ಸರಿಯಲ್ಲ ಎಂದು ಮಹೇಶ್ ಕುಮಟಳ್ಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜೊತೆಗೆ ಮಾಜಿ ಶಾಸಕ ಸಿ.ಪಿ. ಯೋಗೇಶ್ವರ್ ಅವರನ್ನು ಮಂತ್ರಿ ಮಾಡಲೇ ಬೇಕು ಎನ್ನುವ ಮೂಲಕ ಅಥಣಿ ಕ್ಷೇತ್ರದ ಬಿಜೆಪಿ ಶಾಸಕ ಮಹೇಶ್ ಕುಮಟಳ್ಳಿ ಹೊಸ ಬೇಡಿಕೆಯನ್ನು ಸಿಎಂ ಯಡಿಯೂರಪ್ಪ ಮುಂದೆ ಇಡುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಇಡೀ ಸರ್ಕಾರ ರಚನೆ ಸಂದರ್ಭದಲ್ಲಿ ಯೋಗೇಶ್ವರ್ ನಮ್ಮೊಂದಿಗೆ ಇದ್ದರು, ಅವರೇ ಎಲ್ಲ ಓಡಾಡಿ ಮಾಡಿದ್ದಾರೆ. ಹಾಗಾಗಿ ಯೋಗೇಶ್ವರ್ ಅವರಿಗೆ ಮಂತ್ರಿಸ್ಥಾನ ಕೊಡಲೇ ಬೇಕು ಎಂದು ಆಗ್ರಹಸಿದ್ದಾರೆ.
ಕೊಟ್ಟ ಮಾತು ತಪ್ಪಿಲ್ಲ ಸಿಎಂ ಬಿ.ಎಸ್. ಯಡಿಯೂರಪ್ಪ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಯಾವತ್ತೂ ಕೊಟ್ಟ ಮಾತು ತಪ್ಪಿಲ್ಲ. ನಾನು 11 ಜನರಲ್ಲಿ ಮಂತ್ರಿ ಆಗಲ್ಲ ಎಂದಾಗ ಬೇಸರ ಆಗುತ್ತಿದೆ. ಕಳೆದ ಒಂದೂವರೆ ವರ್ಷಗಳಿಂದ ರಮೇಶ್ ಜಾರಕಿಹೊಳಿ ಅವರ ಹೆಸರೇ ಮುಂಚೂಣಿಯಲ್ಲಿತ್ತು. ಅವರನ್ನು ಬಿಟ್ಟರೆ ಎರಡನೇ ಸ್ಥಾನದಲ್ಲಿ ನಾನಿದ್ದೆ, ನಾನು ಒಂಥರಾ ರನ್ನರ್ ಅಪ್ ಇದ್ದಂಗೆ. ನಂಗೆ ಸಚಿವ ಸ್ಥಾನ ಕೊಡಬೇಕು, ಇಲ್ಲದಿದ್ದರೆ ಮಾಜಿ ಸಚಿವ ಎಚ್. ವಿಶ್ವನಾಥ್ ಅವರನ್ನು ಮಂತ್ರಿ ಮಾಡಬೇಕು ಎಂದು ಕುಮಟಳ್ಳಿ ಆಗ್ರಹಿಸಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಡಿಸಿಎಂ ಮಾಡಿ ಜಲಸಂಪನ್ಮೂಲ ಖಾತೆ ಕೊಡಬೇಕು. ಅದರಿಂದ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಹಾಯವಾಗುತ್ತದೆ ಎಂದು ಕುಮಟಳ್ಳಿ ಆಗ್ರಹಿಸಿದ್ದಾರೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications