ರಾಜ್ಯ ಕಾಂಗ್ರೆಸ್ನಲ್ಲಿ ಭಾರಿ ಬದಲಾವಣೆ: ಸಿದ್ದರಾಮಯ್ಯಗೆ ಹಿಂಬಡ್ತಿ?
Recommended Video
ಬೆಂಗಳೂರು, ಜೂನ್ 13: ಸಂಪುಟ ವಿಸ್ತರಣೆ ಬಳಿಕ ರಾಜ್ಯ ಕಾಂಗ್ರೆಸ್ನಲ್ಲಿ ಭಾರಿ ಮಹತ್ವದ ಬದಲಾವಣೆ ಮಾಡುವ ಸಾಧ್ಯತೆ ದಟ್ಟವಾಗಿದೆ.
ಸಿದ್ದರಾಮಯ್ಯ ಸುತ್ತಲೇ ಸುತ್ತುತ್ತಿರುವ ರಾಜ್ಯ ಕಾಂಗ್ರೆಸ್ ರಾಜಕೀಯವನ್ನು ಅಂತ್ಯಗೊಳಿಸಿ ಒಗ್ಗಟ್ಟಿನ ಮುಖಂಡತ್ವಕ್ಕೆ ಮಹತ್ವ ನೀಡಲು ಎಐಸಿಸಿ ಚಿಂತಿಸಿದೆ.
ಸಂಪುಟ ವಿಸ್ತರಣೆ ಬಳಿಕ ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನವನ್ನು ಸಿದ್ದರಾಮಯ್ಯ ಅವರಿಂದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವರ್ಗಾಯಿಸಲಾಗುತ್ತದೆ. ಖರ್ಗೆ ಅವರು ಕಳೆದ ಚುನಾವಣೆ ಸೋತಿದ್ದು, ಅವರು ರಾಜ್ಯ ರಾಜಕರಾಣದಲ್ಲಿ ಇನ್ನು ಮುಂದೆ ಸಕ್ರಿಯರಾಗಲಿದ್ದಾರೆ.
ಇನ್ನು ಸಿದ್ದರಾಮಯ್ಯ ಅವರೇ ಅಧ್ಯಕ್ಷರಾಗಿರುವ ಕಾಂಗ್ರೆಸ್ ಶಾಸಕಾಂಗಕ್ಕೆ ಡಿ.ಕೆ.ಶಿವಕುಮಾರ್ ಅವರನ್ನು ಅಧ್ಯಕ್ಷರನ್ನಾಗಿಸುವ ಸಾಧ್ಯತೆ ಇದೆ. ಕೆಪಿಸಿಸಿ ಅಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಅವರೂ ಸಹ ತಮ್ಮ ಸ್ಥಾನವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿಸ್ತರಣೆ ಬಳಿಕ ಅಸಮಾಧಾನ ಬುಗಿಲೇಳಬಹುದು
ಸಂಪುಟ ವಿಸ್ತರಣೆ ಬಳಿಕ ಮತ್ತೆ ಪಕ್ಷದಲ್ಲಿ ಅಸಮಾಧಾನಗಳು ಹೊರ ಬೀಳಬಹುದು ಹಾಗಾಗಿ, ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಸಿದ್ದರಾಮಯ್ಯ ಅವರಿಗೆ ನೀಡಬೇಕು ಎಂಬ ಕೂಗುಗಳು ಕೇಳಿಬರುತ್ತಿವೆ. ಆದರೆ ಇದಕ್ಕೆ ಕೆಲವು ಹಿರಿಯರ ವಿರೋಧವಿದೆ ಎನ್ನಲಾಗಿದೆ.

ಸಿದ್ದರಾಮಯ್ಯ ಸುತ್ತ ರಾಜ್ಯ ರಾಜಕಾರಣ ಸುತ್ತುತ್ತಿದೆ?
ಸಿದ್ದರಾಮಯ್ಯ ಅವರ ಸುತ್ತಲೇ ರಾಜ್ಯ ರಾಜಕಾರಣ ಸುತ್ತುತ್ತಿದ್ದು, ಈ ರೀತಿಯ ಏಕ ವ್ಯಕ್ತಿ ಪ್ರದರ್ಶನ ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯದಲ್ಲ ಎಂದು ಮನಗಂಡಿರುವ ಎಐಸಿಸಿ ಈ ನಿರ್ಣಯ ತಳೆಯುತ್ತಿದೆ.

ಸಿದ್ದರಾಮಯ್ಯ ಪ್ರಭಾವ ಮೊಟಕುಗೊಳಿಸುವ ಯತ್ನ?
ಪ್ರಸ್ತುತ ಸರ್ಕಾರದ ವಿರುದ್ಧ ತಿರುಗಿ ಬಿದ್ದಿರುವ ಬಹುತೇಕರು ಸಿದ್ದರಾಮಯ್ಯ ಅವರ ಬೆಂಬಲಿಗರೇ ಹಾಗಾಗಿ ಸಿದ್ದರಾಮಯ್ಯ ಅವರ ಅಧಿಕಾರವನ್ನೇ ಮೊಟಕುಗೊಳಿಸಿದರೆ ಅವರ ಪ್ರಭಾವ ಕಡಿಮೆಯಾಗಿ ಶಾಸಕರು ಹಿಡಿತಕ್ಕೆ ಸಿಗುತ್ತಾರೆ ಎಂಬ ಲೆಕ್ಕಾಚಾರ ಎಐಸಿಸಿಯದ್ದು.

ಜೂನ್ 14 ರಂದು ಸಂಪುಟ ವಿಸ್ತರಣೆ
ಸಂಪುಟ ವಿಸ್ತರಣೆಯು ನಾಳೆ (ಜೂನ್ 14) ರಂದು ನಡೆಯಲಿದ್ದು, ಒಟ್ಟು ನಾಲ್ಕು ಮಂದಿ ಸಂಪುಟ ಸೇರಲಿದ್ದಾರೆ ಎನ್ನಲಾಗಿದೆ. ಸಂಪುಟ ಸೇರಲಿರುವವರ ಪಟ್ಟಿ ಇನ್ನೂ ಗೌಪ್ಯವಾಗಿದೆ. ಕಾಂಗ್ರೆಸ್ನಿಂದ ರಾಮಲಿಂಗಾ ರೆಡ್ಡಿ, ಪಕ್ಷೇತರರಾದ ಆರ್.ಶಂಕರ್, ಎಚ್.ನಾಗೇಶ್ಗೆ ಅವಕಾಶ ನೀಡಲಾಗುತ್ತಿದೆ ಎನ್ನಲಾಗುತ್ತಿದೆ.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications