Get Updates
Get notified of breaking news, exclusive insights, and must-see stories!

Cabinet Reshuffle: ನವೆಂಬರ್‌ನಲ್ಲಿ ಸಂಪುಟ ಸರ್ಜರಿ; 15 ಹಾಲಿ ಸಚಿವರಿಗೆ ಗೇಟ್‌ ಪಾಸ್‌? ಯಾರಿಗೆ ಚಾನ್ಸ್‌? ಇಲ್ಲಿದೆ ಪಟ್ಟಿ!

ಬೆಂಗಳೂರು, ಅಕ್ಟೋಬರ್‌ 14: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ನವೆಂಬರ್‌ಗೆ ಎರಡೂವರೆ ವರ್ಷ ಪೂರೈಸಲಿದೆ. ನವೆಂಬರ್‌ ವೇಳೆಗೆ ರಾಜ್ಯ ರಾಜಕೀಯದಲ್ಲಿ ಮಹಾಕ್ರಾಂತಿಯಾಗಲಿದೆ ಎನ್ನುವ ಚರ್ಚೆ ಕೈ ಪಾಳಯದಲ್ಲಿ ಕೇಳಿ ಬರುತ್ತಿದ್ದು, ಈ ನಡುವೆ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್‌ರಚನೆ ಕುರಿತು ಗುಸು ಗುಸು ಕೇಳಿ ಬರುತ್ತಿದೆ. ಬಹುದಿನಗಳಿಂದ ಸಚಿವ ಸಂಪುಟ ಸರ್ಜರಿ ಯಾವಾಗ ಎಂದು ಶಾಸಕರು ಕಾದು ಕುಳಿತಿದ್ದು, ಕೊನೆಗೂ ಸಿದ್ದರಾಮಯ್ಯ ಸಂಪುಟಕ್ಕೆ ಸರ್ಜರಿಯ ಯೋಗ ಕೂಡಿ ಬಂದಿದೆ.

ದೀಪಾವಳಿ ಹತ್ತಿರವಾಗುತ್ತಿದ್ದಂತೆ ಸಿದ್ದರಾಮಯ್ಯನವರ ಸಂಪುಟದ ಹಲವು ಸಚಿವರಿಗೆ ರಾಜಕೀಯ ಗ್ರಹಣ ಹಿಡಿಯುವ ಸಾಧ್ಯತೆ ಇದೆ. ಅಂದರೆ, ನವೆಂಬರ್‌ ಗೆ ಸಚಿವ ಸಂಪುಟ ಪುನರ್‌ರಚನೆಯಾಗಲಿದ್ದು, ಸಿದ್ದರಾಮಯ್ಯ ಸಂಪುಟದ ಬರೋಬ್ಬರಿ 15 ಮಂತ್ರಿಗಳಿಗೆ ಸಂಪುಟದಿಂದ ಕೊಕ್‌ ಸಿಗಲಿದೆ. ಇನ್ನೂ 15 ಜನ ಹಿರಿಯ ಶಾಸಕರು ಹಾಗೂ ಹೊಸ ಮುಖಗಳಿಗೆ ಮಣೆ ಹಾಕಲು ಹೈಕಮಾಂಡ್‌ ಮುಂದಾಗಿದೆ. ಏಕೆಂದರೆ ಮುಂದಿನ 2028 ರ ವಿಧಾನಸಭಾ ಚುನಾವಣೆಯನ್ನ ಗಮನದಲ್ಲಿಟ್ಟುಕೊಂಡು ಅಸಮಾಧಾನಿತ ನಾಯಕರಿಗೆ ಮಂತ್ರಿ ಪಟ್ಟ ಕಟ್ಟಲು ಕೈ ಪಡೆ ತಯಾರಿ ನಡೆಸಿದೆ.

Major Karnataka cabinet reshuffle likely after November

ಇನ್ನೂ ಬಿಹಾರದ ಚುನಾವಣೆ ಮುಗಿಯುತ್ತಿದ್ದಂತೆಯೇ ಕರ್ನಾಟಕದ ರಾಜಕೀಯದಲ್ಲಿ ಮಹತ್ವದ ಬದಲಾವಣೆಯೊಂದು ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟಕ್ಕೆ ದೊಡ್ಡ ಮಟ್ಟದ ಸರ್ಜರಿ ನಡೆಸಲು ವೇದಿಕೆ ಸಿದ್ಧಗೊಂಡಿದೆ. ಬಿಹಾರ ಚುನಾವಣೆ ಮುಗಿದ ಬಳಿಕ, ಅಂದರೆ ನವೆಂಬರ್ ಎರಡನೇ ವಾರದಲ್ಲಿ, ರಾಜ್ಯದ ನಾಯಕರು ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಅಂತಿಮ ಸುತ್ತಿನ ಮಾತುಕತೆ ನಡೆಸಲಿದ್ದಾರೆ. ಹೈಕಮಾಂಡ್‌ನಿಂದ ಹಸಿರು ನಿಶಾನೆ ಸಿಗುತ್ತಿದ್ದಂತೆಯೇ ಸಂಪುಟ ಪುನಾರಚನೆಯ ಕಸರತ್ತು ಅಧಿಕೃತವಾಗಿ ಆರಂಭವಾಗಲಿದೆ. ನವೆಂಬರ್ ತಿಂಗಳಾಂತ್ಯದ ವೇಳೆಗೆ ಸುಮಾರು 15ಕ್ಕೂ ಹೆಚ್ಚು ಹಾಲಿ ಸಚಿವರು ತಮ್ಮ ಸ್ಥಾನವನ್ನು ಕಳೆದುಕೊಂಡು ಮಾಜಿಗಳಾಗಲಿದ್ದಾರೆ.

ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ 15 ಜನ ಸಚಿವರಿಗೆ ಕೊಕ್‌ ಸಿಗಲಿದ್ದು, ಈ ಕೊಕ್ ಪಡೆಯುವವರ ಪಟ್ಟಿಯಲ್ಲಿ ಘಟಾನುಘಟಿ ನಾಯಕರ ಹೆಸರುಗಳೇ ಕೇಳಿಬರುತ್ತಿವೆ. ತಮ್ಮ ಪ್ರಭಾವ, ಹಿರಿತನ ಮತ್ತು ಅನುಭವದಿಂದ ಗುರುತಿಸಿಕೊಂಡಿರುವ ಹಲವು ಸಚಿವರ ಕುರ್ಚಿಗೆ ಕಂಟಕ ಎದುರಾಗಿದೆ. ಇನ್ನೂ ಸಚಿವ ಸ್ಥಾನದಿಂದ ಕೊಕ್‌ ಕೊಟ್ಟು ಪಕ್ಷ ಸಂಘಟನೆಯಂತಹ ಮಹತ್ವದ ಜವಾಬ್ದಾರಿಗಳನ್ನು ನೀಡಿ, ಅವರ ಅನುಭವವನ್ನು ಪಕ್ಷಕ್ಕಾಗಿ ಬಳಸಿಕೊಳ್ಳುವ ಯೋಜನೆಯನ್ನ ಹೈಕಮಾಂಡ್ ಹಾಕಿಕೊಂಡಿದೆ.

ಸಂಪುಟದಲ್ಲಿರುವ ಕೆಲವು ಸಚಿವರ ಕಾರ್ಯವೈಖರಿ ಬಗ್ಗೆ ಸ್ವತಃ ಆಡಳಿತ ಪಕ್ಷದ ಶಾಸಕರೇ ತೀವ್ರ ಅಸಮಾಧಾನ ಮತ್ತು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತಮ್ಮ ಕ್ಷೇತ್ರಗಳ ಕೆಲಸಗಳಿಗೆ ಸ್ಪಂದಿಸುತ್ತಿಲ್ಲ, ಕಡತಗಳು ವಿಲೇವಾರಿಯಾಗುತ್ತಿಲ್ಲ ಎಂಬ ದೂರುಗಳು ವ್ಯಾಪಕವಾಗಿವೆ. ಅಲ್ಲದೇ ರಾಜ್ಯ ಸರ್ಕಾರಕ್ಕೆ ನವೆಂಬರ್ 21ಕ್ಕೆ ಎರಡೂವರೆ ವರ್ಷ ತುಂಬಲಿರುವ ಸಂದರ್ಭವನ್ನು ಬಳಸಿಕೊಂಡು ಹೊಸಬರಿಗೆ ಅವಕಾಶ' ಮತ್ತು 'ಅಧಿಕಾರ ಹಂಚಿಕೆ' ಎಂಬ ನೆಪವನ್ನು ಮುಂದಿಟ್ಟು, ಅಸಮರ್ಥ ಹಾಗೂ ಆರೋಪ ಎದುರಿಸುತ್ತಿರುವ ಸಚಿವರಿಗೆ ಸೌಜನ್ಯಯುತವಾಗಿ ಗೇಟ್‌ಪಾಸ್ ನೀಡುವ ತಂತ್ರವನ್ನು ಹೈಕಮಾಂಡ್‌ ರೂಪಿಸಿದೆ ಎನ್ನಲಾಗಿದೆ.

ಸಚಿವ ಸಂಪುಟದಲ್ಲಿ ಯಾರಿಗೆ ಚಾನ್ಸ್‌?

* ಬಿ.ಕೆ.ಹರಿಪ್ರಸಾದ್
* ಆರ್‌.ವಿ.ದೇಶಪಾಂಡೆ
* ಸಲೀಂ ಅಹಮದ್
* ನಾಗೇಂದ್ರ
* ಬಸವರಾಜ ರಾಯರೆಡ್ಡಿ
* ಅಪ್ಪಾಜಿ ನಾಡಗೌಡ
* ಲಕ್ಷ್ಮಣ ಸವದಿ
* ರೂಪ ಶಶಿಧರ್
* ತರೀಕೆರೆ ಶ್ರೀನಿವಾಸ್
* ಲೇಔಟ್ ಕೃಷ್ಣಪ್ಪ
* ಟಿ.ಬಿ. ಜಯಚಂದ್ರ
* ರಿಜ್ವಾನ್ ಅರ್ಷದ್ /ಯು.ಟಿ.ಖಾದರ್
* ಕೆ.ಎನ್. ರಾಜಣ್ಣ/ರಘುಮೂರ್ತಿ
* ಶಿವಲಿಂಗೇಗೌಡ/ಎಚ್.ಸಿ. ಬಾಲಕೃಷ್ಣ
* ಪಿ.ಎಂ.ನರೇಂದ್ರ ಸ್ವಾಮಿ/ಶಿವಣ್ಣ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+