Transfer: ಲೋಕಸಭಾ ಚುಣಾವಣೆ ಏಫೆಕ್ಟ್; ಮತ್ತೆ ಡಿವೈಎಸ್ಪಿ, ಇನ್ಸ್ಪೆಕ್ಟರ್ಗಳ ವರ್ಗಾವಣೆ
ಬೆಂಗಳೂರು, ಫೆಬ್ರವರಿ 01: ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡುತ್ತಿದೆ. ಕೆಲ ದಿನಗಳ ಹಿಂದೆಯಷ್ಟೇ 33 ಡಿವೈಎಸ್ಪಿಗಳು ಹಾಗೂ 132 ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಲಾಗಿತ್ತು. ಇದೀಗ ಮತ್ತೆ 13 ಡಿವೈಎಸ್ಪಿಗಳು ಹಾಗೂ 30 ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಹೊರಡಿಸಲಾಗಿದೆ.
ಬೆಂಗಳೂರು ನಗರ ವ್ಯಾಪ್ತಿಯ ವಿವಿಧ ಠಾಣೆಗಳಿಗೆ ಸಬ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದ್ದು, ಬರೋಬ್ಬರಿ 218 ಪಿಎಸ್ಐಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐವರು ಇನ್ಸ್ಪೆಕ್ಟರ್ಗಳ ವರ್ಗಾವಣೆಯನ್ನು ರದ್ದು ಮಾಡಲಾಗಿದೆ. ಕೆಲವು ಇನ್ಸ್ಪೆಕ್ಟರ್ಗಳ ಸ್ಥಳ ಬದಲಾವಣೆ ಆಗಿದೆ.

ವರ್ಗಾವಣೆಯಾದವರ ಪಟ್ಟಿ ಇಲ್ಲಿದೆ
1.ಶೇಖರ್ ಜಿ. - ಜಾಲಹಳ್ಳಿ ಸಂಚಾರ ಪೊಲೀಸ್ ಠಾಣೆ, ಬೆಂಗಳೂರು
2.ಶಿವಕುಮಾರ್ ಪಿ, - ಬೈಯಪ್ಪನಹಳ್ಳಿ ಪೊಲೀಸ್ ಠಾಣೆ, ಬೆಂಗಳೂರು
3.ಸತೀಶ್ ಕುಮಾರ್, ಗಿರಿನಗರ ಪೊಲೀಸ್ ಠಾಣೆ, ಬೆಂಗಳೂರು
4.ಯೇರಿಸ್ವಾಮಿ ಈ, ಕಾಟನ್ ಪೇಟೆ ಪೊಲೀಸ್ ಠಾಣೆ, ಬೆಂಗಳೂರು
5.ತಿಪ್ಪೇಸ್ವಾಮಿ ಬಿ.ಎಂ, ಆನೇಕಲ್ ಪೊಲೀಸ್ ಠಾಣೆ
6.ಸತೀಶ್ ಬಿ.ಎಸ್, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ
7.ಗೋವಿಂದರಾಜು, ಪುಲಕೇಶಿ ನಗರ ಪೊಲೀಸ್ ಠಾಣೆ, ಬೆಂಗಳೂರು
ಈ ಏಳು ಜನ ಅಧಿಕಾರಿಗಳು ಸೇರಿದಂತೆ 25 ಇನ್ಸ್ಪೆಕ್ಟರ್ಗಳ ವರ್ಗಾವಣೆ ಮಾಡಲಾಗಿದೆ.
ಈ ಐವರು ಇನ್ಸ್ಪೆಕ್ಟರ್ಗಳ ವರ್ಗಾವಣೆ ರದ್ದು
1.ನರೇಂದ್ರ ಬಾಬು, ಸಿಐಡಿಯಿಂದ ಕಾಟನ್ಪೇಟೆಗೆ ವರ್ಗಾವಣೆ ಆಗಿದ್ದ ಇನ್ಸ್ಪೆಕ್ಟರ್
2.ಐಯಣ್ಣ ರೆಡ್ಡಿ ಬಿ. ಹೆಬ್ಬಗೋಡಿಯಿಂದ ವರ್ಗಾವಣೆ ಆಗಿದ್ದ ಇನ್ಸ್ಪೆಕ್ಟರ್
3.ಮುನಿರೆಡ್ಡಿ ವಿ, ಪರಪ್ಪನ ಅಗ್ರಹಾರಕ್ಕೆ ವರ್ಗಾವಣೆ ಆಗಿದ್ದ ಇನ್ಸ್ಪೆಕ್ಟರ್
4.ಸುಬ್ರಮಣ್ಯ ಸ್ವಾಮಿ ಎಂ.ಎಲ್, ವಿವಿ ಪುರಂ ಸಂಚಾರ ಠಾಣೆಯಿಂದ ವರ್ಗಾವಣೆಯಾಗಿದ್ದ ಇನ್ಸ್ಪೆಕ್ಟರ್
5.ಮುನಿಕೃಷ್ಣ ಡಿ.ಎಚ್, ಮಾಸ್ತಿ ಪೊ.ಠಾಣೆಗೆ ವರ್ಗಾವಣೆ ಆಗಿದ್ದ ಇನ್ಸ್ಪೆಕ್ಟರ್

ಬೆಂಗಳೂರು ನಗರ ವ್ಯಾಪ್ತಿಯ ವಿವಿಧ ಠಾಣೆಗಳಿಗೆ ಬರೋಬ್ಬರಿ 218 ಪಿಎಸ್ಐಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯದ ವಿವಿಧೆಡೆ 33 ಡಿವೈಎಸ್ಪಿಗಳು ಹಾಗೂ 132 ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿದೆ. ಇದರ ಬೆನ್ನಲ್ಲೇ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ವ್ಯಾಪ್ತಿಯಲ್ಲಿ ಮೇಜರ್ ಸರ್ಜರಿ ಮಾಡಿದೆ.
ಮೂರ್ತಿ- ಮಲ್ಲೇಶ್ವರಂ ಠಾಣೆ, ಪ್ರಭುಗೌಡ ಎಸ್. ಪಾಟೀಲ್-ಆಡುಗೋಡಿ ಸಂಚಾರ ಠಾಣೆ, ಶಿವಪ್ಪ ಎಂ.ನಾಯ್ಕರ್-ರಾಮಮೂರ್ತಿನಗರ ಠಾಣೆ, ಶಿವಪ್ಪ -ವೈಟ್ಫೀಲ್ಡ್ ಠಾಣೆ, ರಮಾದೇವಿ ಬಿ.ಎಸ್.ಮಹದೇವಪುರ ಠಾಣೆ, ವಿನೂತ್ ಎಚ್.ಎಂ.-ಬಸವನಗುಡಿ ಠಾಣೆ, ಶ್ರೀನಿವಾಸ್ ಪ್ರಸಾದ್- ಹುಳಿಮಾವು ಠಾಣೆಗೆ ಸೇರಿ 218 ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವೂ 33 ಡಿವೈಎಸ್ಪಿಗಳು ಹಾಗೂ 132 ಇನ್ಸ್ಪೆಕ್ಟರ್ಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಯು.ಡಿ.ಕೃಷ್ಣಕುಮಾರ್-ಡಿವೈಎಸ್ಪಿ, ಬಿಡಿಎ, ಬೆಂಗಳೂರು. ಟಿ.ಎಂ.ಶಿವಕುಮಾರ್-ಎಸಿಪಿ, ಮಡಿವಾಳ ಉಪವಿಭಾಗ. ಹೆಚ್.ಬಿ.ರಮೇಶ್ ಕುಮಾರ್-ACP, ವಿವಿ ಪುರಂ ಉಪವಿಭಾಗ. ಎಂ.ಎನ್.ನಾಗರಾಜ್-ಎಸಿಪಿ, ಸಿಸಿಬಿ ಬೆಂಗಳೂರು. ಅನುಷಾರಾಣಿ-ACP, ಡಿಸಿಆರ್ಇ, ಮೈಸೂರು ಸೇರಿದಂತೆ ಒಟ್ಟು 33 DySPಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಪೊಲೀಸ್ ಇಲಾಖೆಯಲ್ಲಿ ಅನೇಕ ಅಧಿಕಾರಿಗಳ ವರ್ಗಾವಣೆಯಾಗಿದೆ. ಸಂಪಂಗಿರಾಮನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರವಿಕಿರಣ್, ರಾಮನಗರ ಕುಂಬಳಗೋಡು ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ಜಿ ಹೂಗಾರ್. ಕಾಟನ್ಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನರೇಂದ್ರ ಬಾಬು, ಸಿಸಿಬಿ ಬೆಂಗಳೂರು ಇನ್ಸ್ಪೆಕ್ಟರ್ ಕೆ.ಲಕ್ಷ್ಮೀ ನಾರಾಯಣ್, ಹಲಸೂರು ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಂತೋಷ್ ಕೆ, ಜಯನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ದೀಪಕ್ ಆರ್ ಸೇರಿ ಒಟ್ಟು 132 ಇನ್ಸ್ಪೆಕ್ಟರ್ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ











Click it and Unblock the Notifications