ಎಸ್ಸೆಂ ಕೃಷ್ಣ ಬಿಜೆಪಿ ಸೇರಲಿ: ಒನ್ಇಂಡಿಯಾ ಓದುಗರ ಬಹುಮತ

ಮಾಜಿ ಮುಖ್ಯಮಂತ್ರಿ ಕೃಷ್ಣ ಅವರು ಮುಂದೇನು ಮಾಡಬೇಕಂತೀರಿ ಎಂದು ಕೇಳಿದ್ದಕ್ಕೆ ಆನ್ ಲೈನ್ ಮತದಾನದ ಮೂಲಕ ವ್ಯಕ್ತವಾದ ಒನ್ ಇಂಡಿಯಾ ಕನ್ನಡ ಓದುಗರ ಸ್ಪಷ್ಟ ದನಿ

ಬೆಂಗಳೂರು, ಜನವರಿ 31: ಮಾಜಿ ಮುಖ್ಯಮಂತ್ರಿ ಎಸ್ಸೆಂ ಕೃಷ್ಣ ಅವರು ಮುಂದೆ ಯಾವ ಹಾದಿಯಲ್ಲಿ ಸಾಗಬೇಕೆಂದು ಒನ್ಇಂಡಿಯಾ ಕನ್ನಡ ಆಯೋಜಿಸಿದ್ದ ಆನ್ ಲೈನ್ ಮತದಾನದಲ್ಲಿ ಹೆಚ್ಚಿನ ಸಂಖ್ಯೆಯ ಓದುಗರು ಅವರು ಬಿಜೆಪಿ ಸೇರಬೇಕೆಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಸಖ್ಯ ತೊರೆದಿರುವ ಕೃಷ್ಣ ಅವರನ್ನು ಸ್ವಾಗತಿಸಲು ಬಿಜೆಪಿ, ಜೆಡಿಎಸ್ ಎರಡೂ ಸಿದ್ಧವಾಗಿವೆ. ಹಾಗಾಗಿ, ಕೃಷ್ಣ ಅವರ ಮುಂದಿನ ನಡೆ ಕುತೂಹಲ ಹುಟ್ಟಿಸಿದೆ. ಏತನ್ಮಧ್ಯೆ, ಕೃಷ್ಣ ಅವರ ಮುಂದಿನ ನಡೆ ಹೇಗಿರಬೇಕು ಎಂಬ ಪ್ರಶ್ನೆಯನ್ನು ಒನ್ಇಂಡಿಯಾ ಕನ್ನಡದ ಓದುಗರ ಮುಂದಿಟ್ಟಾಗ, ಆನ್ ಲೈನ್ ಮೂಲಕ ಮತದಾನದ ಮೂಲಕ ತಮ್ಮ ಅಭಿಪ್ರಾಯ ಸಲ್ಲಿಸಿರುವ ಹೆಚ್ಚಿನ ಓದುಗರು ಕೃಷ್ಣ ಅವರು ಬಿಜೆಪಿಗೆ ಸೇರ್ಪಡೆಗೊಳ್ಳಬೇಕು ಎಂದು ಹೇಳಿದ್ದಾರೆ.[ಕೃಷ್ಣ ಅವರೇ, ನಿಮ್ಮ ಉತ್ಸಾಹ ಮೆಚ್ಚತಕ್ಕದ್ದು, ಆದರೆ ಇನ್ನು ಸಾಕು!]

Majority of One India Kannada readers want SM Krishna to join BJP

'ಕಾಂಗ್ರೆಸ್ ಗೆ ಗುಡ್ ಬೈ ಹೇಳಿರುವ ಕೃಷ್ಣ ಅವರ ಮುಂದೇನು ಮಾಡಬೇಕಂತೀರಿ?' ಎಂಬ ಪ್ರಶ್ನೆ ಕೇಳಲಾಗಿತ್ತು.
ಈ ಪ್ರಶ್ನೆಗೆ - 1. ರಾಜಕೀಯ ಸನ್ಯಾಸ ತೆಗೆದುಕೊಳ್ಳಲಿ., 2. ಬಿಜೆಪಿ ಸೇರಿ ಚುನಾವಣೆಗೆ ಸ್ಪರ್ಧಿಸಲಿ., 3. ಕಾಂಗ್ರೆಸ್ ನಲ್ಲೇ ಉಳಿದುಕೊಳ್ಳಲಿ ಎಂಬ ಮೂರು ಆಯ್ಕೆಗಳನ್ನು ಕೊಡಲಾಗಿತ್ತು.

ಇದಕ್ಕೆ ಸ್ಪಂದಿಸಿರುವ ಓದುಗರಲ್ಲಿ ಹೆಚ್ಚಿನವರು, ಕೃಷ್ಣ ಅವರು ಬಿಜೆಪಿ ಸೇರಲಿ ಎಂದಿದ್ದಾರೆ ಇವರ ಸಂಖ್ಯೆ ಶೇ. 53.12ರಷ್ಟಿದೆ. ಇನ್ನು, ಶೇ. 40. 01ರಷ್ಟು ಓದುಗರು ಅವರು ಯಾವ ಪಕ್ಷವನ್ನೂ ಸೇರುವುದು ಬೇಡ, ರಾಜಕೀಯ ಸನ್ಯಾಸತ್ವ ತೆಗೆದುಕೊಳ್ಳಲಿ ಎಂದಿದ್ದಾರೆ. ಇನ್ನು, ಶೇ. 6. 87ರಷ್ಟು ಓದುಗರು ಕೃಷ್ಣ ಅವರು ಕಾಂಗ್ರೆಸ್ಸಿನಲ್ಲೇ ಉಳಿಯಬೇಕೆಂಬ ಇರಾದೆ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+