ಸಿದ್ದರಾಮಯ್ಯರ ಫೋಟೋ ತೆಗೆದ ಖರ್ಗೆ, ಚಿತ್ರ ಏನು ಹೇಳುತ್ತದೆ?
Recommended Video

'ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ನಾಯಕರು ಗರಂ ಆಗಿದ್ದಾರೆ, ರಾಜ್ಯ ಕಾಂಗ್ರೆಸ್ ಅನ್ನು ಸಿದ್ದರಾಮಯ್ಯ ತಮ್ಮ ಮುಷ್ಠಿಗೆ ತೆಗೆದುಕೊಂಡು ಬಿಟ್ಟಿದ್ದಾರೆ' ಎಂಬೆನೇನೋ ಸುದ್ದಿಗಳು ಕೆಲ ದಿನಗಳ ಹಿಂದೆ ಹರಿದಾಡುತ್ತಿತ್ತು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಜಾಫರ್ ಶರೀಫ್ ಮತ್ತು ಅವರಂತಹಾ ಎಲೆಕ್ಷನ್ ಸಮಯಕ್ಕೆ ಎದ್ದು ನಿಲ್ಲುವ ರಾಜಕಾರಣಿಗಳಿಗೆ ಹೀಗೆ ಅನ್ನಿಸಿರಲಿಕ್ಕೂ ಸಾಕು. ಆದರೆ ಸಿದ್ದರಾಮಯ್ಯ ವಿರುದ್ಧ ಬೇಸರಗೊಂಡ ಹಿರಿಯ ನಾಯಕರ ಪಟ್ಟಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನೂ ಸೇರಿಸಲಾಗಿತ್ತು. ಆದರೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಚಿತ್ರವೊಂದು ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯ ನಡುವೆ ವೈಮನಸ್ಯವೇನೂ ಇಲ್ಲ ಎಂದು ಕಾಂಗ್ರೆಸ್ಸಿಗರು ಸಮಾಧಾನ ಪಟ್ಟುಕೊಳ್ಳುವುದಕ್ಕೆ ಕಾರಣವಾಗಿದೆ.
ಹೌದು, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮೆಟ್ಟಿಲುಗಳ ಮೇಲೆ ಕೂತಿರುವುದನ್ನು ಮಲ್ಲಿಕಾರ್ಜುನ ಖರ್ಗೆ ಮೊಬೈಲ್ ನಲ್ಲಿ ಸೆರೆಹಿಡಿಯುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಿದ್ದರಾಮಯ್ಯ ಅವರು ನಗುತ್ತಾ ಮೊಬೈಲ್ ಹಿಡಿದ ಖರ್ಗೆ ಕಡೆ ನೋಡುತ್ತಿದ್ದಾರೆ. ಖರ್ಗೆ 'ಸ್ಮೈಲ್' ಎನ್ನುತ್ತಾ ಸಿದ್ದರಾಮಯ್ಯರ ಚಿತ್ರ ಸೆರೆಹಿಡಿಯುತ್ತಿದ್ದಾರೆ.

ಈ ಚಿತ್ರ ಹಲವು ವಿಷಯಗಳನ್ನು ಹೇಳುತ್ತಿದೆ. ತನಗಿಂತ ವಯಸ್ಸಿನಲ್ಲಿ, ಅನುಭವದಲ್ಲಿ ಕಿರಿಯರಾದ ಸಿದ್ದರಾಮಯ್ಯ ಅವರೊಂದಿಗೆ ಸ್ನೇಹದಿಂದ ವರ್ತಿಸುತ್ತಿರುವುದು ಚಿತ್ರದಲ್ಲಿ ಕಾಣುತ್ತದೆ. ಇನ್ನು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಳಾದರೂ ಹುಸಿ ಗಾಂಭೀರ್ಯಗಳನ್ನು ಪಕ್ಕಕ್ಕಿಟ್ಟು ಮೆಟ್ಟಿಲುಗಳ ಮೇಲೆ ಕಾರ್ಯಕರ್ತರೊಂದಿಗೆ ಕೂತು ಚಿತ್ರಕ್ಕೆ ಮುಖ ಒಡ್ಡಿರುವುದು ಅವರ ಸರಳತೆಯನ್ನು ತೋರುತ್ತದೆ.
ಚುನಾವಣಾ ಪ್ರಚಾರ ಚಿತ್ರಸಂಪುಟ : ಬಿಜೆಪಿ | ಕಾಂಗ್ರೆಸ್ | ಜೆಡಿಎಸ್
ಇಬ್ಬರು ಹಿರಿಯ ರಾಜಕಾರಣಿಗಳ ನಡುವೆ ರಾಜಕೀಯವನ್ನು ಮೀರಿದ ಸ್ನೇಹವನ್ನೂ ನೋಡುಗರು ಚಿತ್ರದಲ್ಲಿ ಗಮನಿಸಬಹುದಾಗಿದೆ. ಸಿದ್ದರಾಮಯ್ಯ ಅವರು ಅಲ್ಪ ಕಾಲದಲ್ಲೇ ಕಾಂಗ್ರೆಸ್ನ ಕಿರಿಯರ ಜೊತೆಗೆ ಹಿರಿಯರ ನಂಬುಗೆ, ವಿಶ್ವಾಸ ಮತ್ತು ಸ್ನೇಹಕ್ಕೆ ಪಾತ್ರರಾಗಿದ್ದಾರೆ ಎಂಬುದಕ್ಕೆ ಈ ಚಿತ್ರವನ್ನು ಸಾಕ್ಷಿಯಾಗಿಯೂ ಪರಿಗಣಿಸಬಹುದು.
ಈ ಚಿತ್ರವನ್ನು ಮಲ್ಲಿಕಾರ್ಜುನ್ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದು, 'ನಮ್ಮ ತಂದೆ ತಂತ್ರಜ್ಞಾನವನ್ನು ಬಳಸುವುದಕ್ಕೆ ಹಿಂಜರಿಯುವರಲ್ಲ, ಹೊಸ ತಂತ್ರಜ್ಞಾನದ ಬಗ್ಗೆ ಸದಾ ಕುತೂಹಲ ಹೊಂದಿದ್ದಾರೆ' ಎಂದು ಬರೆದಿದ್ದಾರೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications