ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವಾಗಿದ್ದು ನಿಜಾಮರಿಂದ : ಖರ್ಗೆ
ಬೆಂಗಳೂರು, ಜುಲೈ 30: ಕಲ್ಯಾಣ ಕರ್ನಾಟಕ(ಹೈದರಾಬಾದ್-ಕರ್ನಾಟಕ) ಭಾಗಕ್ಕೆ ನಿಜವಾಗಿಯೂ ಅನ್ಯಾಯವಾಗಿರುವುದು ನಿಜಾಮರಿಂದ ಮಾತ್ರ. ಕರ್ನಾಟಕದ ಏಕೀಕರಣ, ಹೈದರಾಬಾದ್ ಕರ್ನಾಟಕದ ವಿಮೋಚನೆಗೆ ಶ್ರಮಿಸಿದವರಿಗೆ ಬೆಲೆ ಕೊಡಬೇಕಿದೆ, ರಾಜ್ಯದ ಆಖಂಡವಾಗಿರಬೇಕು, ಪ್ರತ್ಯೇಕ ರಾಜ್ಯ ಅನಗತ್ಯ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಈ ಕುರಿತಂತೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ, ಅಭಿವೃದ್ಧಿಪರ ಕಾರ್ಯಗಳಿಗೆ ಚಾಲನೆ ನೀಡಲು ಮುಂದಾಗಬೇಕು, ಅದರ ಬದಲು, ಪ್ರತ್ಯೇಕ ರಾಜ್ಯ ಮಾಡಲು ಹೊರಟರೆ, ಅಭಿವೃದ್ಧಿ ಎಂದಿಗೂ ಸಾಧ್ಯವಿಲ್ಲ ಎಂದರು.
ಅಭಿವೃದ್ಧಿ ವಿಷಯದಲ್ಲಿ ಹೈದರಾಬಾದ್ ಕರ್ನಾಟಕ ಭಾಗವು 'ಸಿ' ಗ್ರೇಡ್ ಸ್ಥಾನದಲ್ಲಿದ್ದು, ಹಳೆ ಮೈಸೂರು ಹಾಗೂ ಮುಂಬೈ ಕರ್ನಾಟಕ ಭಾಗವು ಕ್ರಮವಾಗಿ ಎ ಮತ್ತು ಬಿ ಗ್ರೇಡ್ ಹೊಂದಿವೆ ಎಂಬುದನ್ನು ಖರ್ಗೆ ಒಪ್ಪಿಕೊಂಡರು.

ಹೈದರಾಬಾದ್ -ಕರ್ನಾಟಕ ಭಾಗದ ಏಳಿಗೆಗಾಗಿ ಕಾಂಗ್ರೆಸ್ ಸಾಕಷ್ಟು ಶ್ರಮಿಸಿದೆ. ಸ್ವಾತಂತ್ರ್ಯ ನಂತರವೂ ಈ ಭಾಗದಲ್ಲಿ ಆಳ್ವಿಕೆ ನಡೆಸಿದ್ದ ನಿಜಾಮರು, ರಜಾಕರ ನಿರ್ಲಕ್ಷ್ಯದಿಂದ ಈ ಭಾಗ ಹಿಂದುಳಿದ ಪ್ರದೇಶವಾಗಿ ಉಳಿದಿದೆ. ಈ ಭಾಗದ ಏಳಿಗೆಗಾಗಿ ಕಾಂಗ್ರೆಸ್ ಸಾಕಷ್ಟು ಶ್ರಮಿಸಿದೆ ಎಂದು ಹೇಳಿದರು.












Click it and Unblock the Notifications