ಸಿಎಂ ಬದಲಾವಣೆ ಬಗ್ಗೆ ಶಾಕಿಂಗ್ ಸುಳಿವು ಕೊಟ್ಟ ಮಲ್ಲಿಕಾರ್ಜುನ್ ಖರ್ಗೆ, ಹೇಳಿದ್ದೇನು?
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕೂಗು ಮೊದಲಿನಿಂದಲೂ ಇದೆ. ಇದೇ ವರ್ಷ ಕಾಂಗ್ರೆಸ್ನಲ್ಲಿ ಸಿಎಂ ಬದಲಾಗ್ತಾರೆ ಎಂದು ಹಲವರು ಭವಿಷ್ಯ ನುಡಿದಿದ್ದರೆ, ಇನ್ನೂ ಕೆಲವರು ಸೆಪ್ಟೆಂಬರ್ನಲ್ಲೇ ಕ್ರಾಂತಿಯಾಗುತ್ತೆ ಎನ್ನುತ್ತಿದ್ದಾರೆ. ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ, ಡಿಕೆ ಶಿವಕುಮಾರ್ ಹೊಸ ಸಿಎಂ ಆಗುತ್ತಾರೆ ಎಂಬ ಚರ್ಚೆಗಳು ಗರಿಗೆದರಿವೆ. ಈ ಬಗ್ಗೆ ಖುದ್ದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಪ್ರತಿಕ್ರಿಯಿಸಿದ್ದು, ಸಿಎಂ ಬದಲಾವಣೆ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸದ್ಯ ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.
ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಾತನಾಡಿರುವ ಖರ್ಗೆ, ಸುರ್ಜೇವಾಲಾ ಅವರು ಸದ್ಯ ರಾಜ್ಯಕ್ಕೆ ಬಂದಿದ್ದಾರೆ. ಶಾಸಕರು ಏನು ಹೇಳುತ್ತಾರೆ? ಹಾಗೂ ಜೊತೆಗೆ ಏನೆಲ್ಲ ನಡೆದಿದೆ? ಎಂದು ಅವರೇ ಕೇಳುತ್ತಾರೆ. ಅದನ್ನು ನೋಡಿಕೊಂಡು ಮುಂದೇನು ಮಾಡಬೇಕು ಎಂದು ತೀರ್ಮಾನಿಸುತ್ತೇವೆ ಎಂದು ಖರ್ಗೆ ಸುಳಿವು ನೀಡಿದ್ದಾರೆ. ಹೈಕಮಾಂಡ್ ತೀರ್ಮಾನ ಏನೂ ಎಂದು ಯಾರಿಗೂ ಗೊತ್ತಿಲ್ಲ. ನಾನು ಎಐಸಿಸಿ ಹಂತದಲ್ಲಿ ಮಾತ್ರ ಉತ್ತರ ಕೊಡುತ್ತೇನೆ ಎಂದೂ ಹೇಳಿದ್ದಾರೆ.

ಹೈಕಮಾಂಡ್ನಲ್ಲಿ ಏನು ನಡೆಯುತ್ತದೆ ಎಂಬುದನ್ನು ಯಾರು ಕೂಡ ಹೇಳಲಾಗುವುದಿಲ್ಲ. ಮುಂದಿನ ಕ್ರಮ ಕೈಗೊಳ್ಳುವ ಹಕ್ಕು ಕೂಡ ಹೈಕಮಾಂಡ್ಗೆ ಇದೆ. ಆದರೆ ಈ ವಿಚಾರವಾಗಿ ಯಾರೂ ಕೂಡ ಅನಗತ್ಯವಾಗಿ ಸಮಸ್ಯೆ ಸೃಷ್ಟಿಸಬೇಡಿ. ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವ ಅಧಿಕಾರ ಕೂಡ ಈಗ ಪಕ್ಷದ ಹೈಕಮಾಂಡ್ ಕೈಯಲ್ಲೇ ಇದೆ ಎಂದು ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಸಚಿವರು ಹಾಗೂ ಶಾಸಕರ ವಿಭಿನ್ನ ಹೇಳಿಕೆಗಳನ್ನು ನೀಡಿದ್ದಾರೆ. ಅವರೆಲ್ಲರ ಹೇಳಿಕೆಗಳಿಗೆ ನಾನು ಉತ್ತರ ಕೊಡುವುದಿಲ್ಲ. ನಾನು ಎಐಸಿಸಿ ಮಟ್ಟದ ವಿಚಾರಗಳಿಗೆ ಮಾತ್ರವೇ ಉತ್ತರಿಸುತ್ತೇನೆ, ರಾಜ್ಯದ ಪ್ರತಿಯೊಂದಕ್ಕೂ ಉತ್ತರ ನೀಡಲು ಹೋದ್ರೆ ಸಾಕಷ್ಟು ವಿಚಾರಗಳಿವೆ ಎಂದೂ ಸ್ವಪಕ್ಷ ನಾಯಕರ ವಿರುದ್ಧ ಗರಂ ಆಗಿದ್ದಾರೆ.
ನಾಯಕತ್ವ ಬದಲಾವಣೆ ಊಹಾಪೋಹ
ಸದ್ಯಕ್ಕೆ ರಾಜ್ಯಕ್ಕೆ ಆಗಮಿಸಿರುವ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಶಾಸಕರಿಂದ ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಪ್ರತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಘಟನೆ ಹೇಗಿದೆ ಎಂದು ವರದಿ ಪಡೆಯಲಾಗುವುದು. ಇಲ್ಲಿನವರ ಕಾರ್ಯವೈಖರಿ ಹೇಗಿದೆ ಎಂದು ಪರಿಶೀಲಿಸಲಾಗುವುದು ಎಂದಿದ್ದಾರೆ. ಇದರಿಂದ ಸಿಎಂ ಹಾಗೂ ಸಚಿವರಿಗೆ ಮಾಹಿತಿ ನೀಡಲು ಅನುಕೂಲವಾಗುತ್ತೆ. ಹಾಗೆಯೇ ಸರ್ಕಾರದಿಂದ ಆಗಬೇಕಾದ ಕೆಲಸಗಳ ಬಗ್ಗೆಯೂ ಎಲ್ಲ ಶಾಸಕರಿಂದ ಮಾಹಿತಿ ಪಡೆಯಲಾಗುವುದು ಎಂದಿದ್ದಾರೆ.
ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ವಿಚಾರಗಳು ಊಹಾಪೋಹ ಅಷ್ಟೇ. ಈ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವುದು ಕಾಲ್ಪನಿಕ ಮಾತ್ರ. ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಹಾಗೂ ಸೋತವರನ್ನು ಕೂಡ ಸಭೆಗೆ ಆಹ್ವಾನಿಸುತ್ತೇವೆ. ನಂತರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆಗೂ ಚರ್ಚೆ ನಡೆಸಲಾಗುವುದು ಎಂದು ಸುರ್ಜೇವಾಲಾ ಹೇಳಿದ್ದಾರೆ.
-
ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: 1 ಲಕ್ಷ ಬಾಂಡ್ಗೆ ಆಗ್ರಹಿಸಿದ ಪೊಲೀಸರ ವಿರುದ್ಧ ಯತ್ನಾಳ್ ಗರಂ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್











Click it and Unblock the Notifications