'ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿಗೆ ನಾಮಕಾವಾಸ್ತೆ ಅಧ್ಯಕ್ಷ'
ಬೆಳಗಾವಿ, ಏಪ್ರಿಲ್ 17: ಮಲ್ಲಿಕಾರ್ಜುನ ಖರ್ಗೆ ರವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ ಅವರಿಗೆ ಕವಡೆ ಕಿಮ್ಮತ್ತು ಇಲ್ಲ. ಯಾವ ಸಭೆ ಸಮಾರಂಭದಲ್ಲೂ ಅವರಿಗೆ ಕವಡೆ ಕಿಮ್ಮತ್ತು ಇಲ್ಲ, ಯಾವುದೇ ಸಭೆ ಸಮಾರಂಭದಲ್ಲಿ ಯಾವುದೇ ಸ್ಥಾನಮಾನ ಇರುವುದಿಲ್ಲ. ಮಲ್ಲಿಕಾರ್ಜುನ್ ಖರ್ಗೆ ಅವರು ನಾಮಕವಾಸ್ತೆ ಅಧ್ಯಕ್ಷ ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ಹೇಳಿದರು.
'ಜನಾಕ್ರೋಶ ಯಾತ್ರೆ' ಸಂಬಂಧ ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿನಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರು ಸರ್ವಾಧಿಕಾರಿಗಳು, ಅವರು ಹೇಳಿದ ಹಾಗೆ ಕಾಂಗ್ರೆಸ್ ಆಡಳಿತ ನಡೆಯುತ್ತಿದೆಯೇ ಹೊರತು ಮಲ್ಲಿಕಾರ್ಜುನ್ ಖರ್ಗೆಯವರದ್ದಲ್ಲ ಎಂದ ಅವರು, ಡಾ. ಬಾಬಾಸಾಹೇಬ ಅಂಬೇಡ್ಕರ್ ರವರು ಕರ್ನಾಟಕ್ಕೆ ಬಂದು 100 ವರ್ಷ ಆಗಿದೆ. ಆದರೆ ಬೆಳಗಾವಿಯಲ್ಲಿ ಮಹಾತ್ಮಗಾಂಧೀಜಿ ಬಂದುಹೋದಕ್ಕೆ ಕಾರ್ಯಕ್ರಮ ಮಾಡಿದರು. ಆದರೆ ಸಹೋದರಿ ಶಶಿಕಲಾ ಜೊಲ್ಲೆ ರವರು ಡಾ. ಬಾಬಾಸಾಹೇಬರು ಬೆಳಗಾವಿಗೆ ಬಂದುಹೋಗಿ 100 ವರ್ಷ ಆಗಿದೆ ಈ ಎರಡೂ ಸೇರಿ ಕಾರ್ಯಕ್ರಮ ಮಾಡಿ ಎಂದು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದರೆ ಯಾರ ಬಾಯಿಯಿಂದ ಶಬ್ದ ಬಂದಿಲ್ಲ ಎಂದು ಟೀಕಿಸಿದರು.

ದಲಿತ ವಿರೋಧಿ ಕಾಂಗ್ರೆಸ್ ಪಕ್ಷವು ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಎರಡು ಬಾರಿ ಲೋಕಸಭೆಯ ಚುನಾವಣೆÉಯಲ್ಲಿ ಸೋಲಿಸಿದೆ ಎಂದು ದೂರಿದರು. ಬೆಲೆ ಏರಿಕೆ ಸಮಸ್ಯೆ, ಕಾಂಗ್ರೆಸಿನ ದುರಾಡಳಿತ ಮತ್ತು ಕೇಂದ್ರದ ವಿರುದ್ಧ ಕಾಂಗ್ರೆಸಿನ ಅಪಪ್ರಚಾರದ ಬಗ್ಗೆ ಜನಜಾಗೃತಿಯ ಹೋರಾಟವನ್ನು ತಾವೆಲ್ಲರೂ ಬೆಂಬಲಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ಮನವಿ ಮಾಡಿದರು
5 ಕೆಜಿ ಅಕ್ಕಿ ಕೊಡುವುದಾಗಿ ಸಿದ್ದರಾಮಯ್ಯ ರವರು ಹೇಳಿದರು. ಆದರೆ 5 ಕಿಲೋ ಅಕ್ಕಿ ಕೊಟ್ಟವರು ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ; ಅಕ್ಕಿಯ ಒಂದು ಚೀಲದ ಮೇಲೆ ಸಿದ್ದರಾಮಯ್ಯ ನವರ ಪೋಟೊ ಹಾಕಿಕೊಂಡಿದ್ದಾರೆ ಎಂದು ಆಕ್ಷೇಪಿಸಿದರು ರಾಜ್ಯದಲ್ಲಿ ಎಲ್ಲ ದಿನಬಳಕೆ ವಸ್ತುಗಳ ದರ ಹೆಚ್ಚಾಗಿದೆ ಎಂದು ಟೀಕಿಸಿದರು. ಕಾಂಗ್ರೆಸ್ಸಿನವರು ದಲಿತರ ಹಣ 38 ಸಾವಿರ ಕೋಟಿ ರೂ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ; ಅವರನ್ನು ಕ್ಷಮಿಸಬಾರದು ಎಂದು ವಿನಂತಿಸಿದರು.
ಸಿಎಂಗೇ ಸವಾಲು ಹಾಕಿದ ಛಲವಾದಿ ನಾರಾಯಣಸ್ವಾಮಿ
ಸಿದ್ದರಾಮಯ್ಯನವರೇ, ಬಾಬಾ ಸಾಹೇಬ ಅಂಬೇಡ್ಕರರನ್ನು ಸಾವರ್ಕರ್ ಸೋಲಿಸಿದ್ದಾಗಿ ಋಜುವಾತು ಪಡಿಸಿದರೆ ನನ್ನ ವಿಪಕ್ಷ ಸ್ಥಾನಕ್ಕೆ ಇವತ್ತೇ ರಾಜೀನಾಮೆ ಕೊಡುತ್ತೇನೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸವಾಲು ಹಾಕಿದರು. ಆ ಸುಳ್ಳನ್ನು ನೀವು ಸಾಬೀತು ಮಾಡದಿದ್ದರೆ ನೀವು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲು ಸಿದ್ಧರಾಗಿ ಎಂದು ಆಗ್ರಹಿಸಿದರು. ನಿಮಗೆ ವಯಸ್ಸೂ ಆಗಿದೆ. ಎಲ್ಲ ಪದವಿ ಅನುಭವಿಸಿದ್ದೀರಿ. ಇದಕ್ಕಿಂತ ಹೆಚ್ಚಿನ ಪದವಿ ನಿಮಗೆ ಕಾಂಗ್ರೆಸ್ಸಿನಲ್ಲಿ ಸಿಗಲಾರದು ಎಂದು ತಿಳಿಸಿದರು.
ನನಗೆ ಮೊದಲು ಆತ್ಮೀಯರಾಗಿದ್ದ ಸಿದ್ದರಾಮಯ್ಯನವರು ಈ ಹಿಂದೆ ಇಷ್ಟು ಸುಳ್ಳು ಹೇಳುತ್ತಿರಲಿಲ್ಲ. ಈಗ ಅವರನ್ನು ಪ್ರಶ್ನಿಸಿದರೆ ಹೇಗಾದರೂ ಮಾಡಿ ಅಧಿಕಾರದಲ್ಲಿ ಇರಬೇಕಲ್ಲಪ್ಪ; ಕಾಂಗ್ರೆಸ್ನವರು ಸುಳ್ಳು ಹೇಳದಿದ್ರೆ ಬಿಡ್ತಾರ ಎನ್ನುತ್ತಾರೆ ಎಂಬಂತೆ ಮಾತನಾಡುತ್ತಿದ್ದಾರೆ. ಬಾಬಾ ಸಾಹೇಬ ಅಂಬೇಡ್ಕರರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಎಂಬುದಾಗಿ ಬಾಬಾ ಸಾಹೇಬರೇ ಬರೆದಿದ್ದಾರೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಇದಕ್ಕಿಂತ ಅಪ್ಪಟ ಸುಳ್ಳು ಬೇರೇನಾದರೂ ಇದೆಯೇ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದರು. ಇದನ್ನು ಅವರಿಗೆ ಚೋಟಾ ಖರ್ಗೆ ಹೇಳಿಕೊಟ್ಟಿದ್ದಾಗಿ ಆರೋಪಿಸಿದರು. ಮೋಟಾ ಖರ್ಗೆ ಮೇಲಿದ್ದಾರೆ ಎಂದರು.
ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಮಾತನಾಡಿ, ಕೇವಲ 50 ಲಕ್ಷ ಹೂಡಿಕೆ ಮಾಡಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ಆ ಟ್ರಸ್ಟಿನ ಹಿಡಿತ ಸಾಧಿಸಿದ್ದರು. ನಂತರ 3 ಕೋಟಿ ಬಂಡವಾಳ ಹಾಕಿ ಒಂದೇ ವರ್ಷದಲ್ಲಿ ಆ ಟ್ರಸ್ಟ್ 150 ಕೋಟಿ ಸಂಪಾದನೆ ಮಾಡಿತ್ತು. 3 ಕೋಟಿ ಬಂಡವಾಳ ಹಾಕಿದ ಆಸ್ತಿಗಳು 150 ಕೋಟಿ ಆಗುತ್ತದೆ. ಇದು ರಾಹುಲ್ ಬಾಬಾ ಅವರ ಅಭಿವೃದ್ಧಿಯ ಮಾಡೆಲ್. ಬಹುಶಃ ಅಂಬಾನಿಯವರಿಗೂ ಇದನ್ನು ಮಾಡಲು ಸಾಧ್ಯವಾಗಿಲ್ಲ ಎಂದು ವಿಜಯೇಂದ್ರ ಅವರು ತಿಳಿಸಿದರು. ಅಂಥ ಸಾಧನೆ, ಸಂಪಾದನೆಯನ್ನು ರಾಹುಲ್ ಗಾಂಧಿ, ಸೋನಿಯಾ ಗಾಂಧಿಯವರು ಯಂಗ್ ಇಂಡಿಯ ಟ್ರಸ್ಟ್ ಮೂಲಕ ಮಾಡಿದ್ದಾರೆ ಎಂದು ವ್ಯಂಗ್ಯವಾಗಿ ತಿಳಿಸಿದರು.
ಇವತ್ತು ಜಾರಿ ನಿರ್ದೇಶನಾಲಯದ (ಇ.ಡಿ) ವಿರುದ್ಧ ಕಾಂಗ್ರೆಸ್ಸಿನವರು ಬೊಬ್ಬೆ ಹೊಡೆಯುತ್ತಾರೆ. ಮೋದಿ ಸರಕಾರ ಬಂದ ಬಳಿಕ ಇ.ಡಿ., ಕಾಂಗ್ರೆಸ್ ಮೇಲೆ ಗೂಂಡಾಗರ್ದಿ ಮಾಡುತ್ತಿದೆ ಎಂದು ಆರೋಪಿಸುತ್ತಾರೆ. ಇ.ಡಿ. ಪಾರದರ್ಶಕ ತನಿಖೆಯ ಪರಿಣಾಮವಾಗಿ ಸ್ವಾತಂತ್ರ್ಯ ಹೋರಾಟಗಾರರು ಪ್ರಾರಂಭಿಸಿದ ಟ್ರಸ್ಟ್, ದೇಶದ ಯುವರಾಜ ಎಂದು ಭಾವಿಸಿದವರ ಕೈಯಲ್ಲಿ ಬಂದ ಮೇಲೆ ಹಗರಣವು ಬೆಳಕಿಗೆ ಬಂತು. ರಾಹಲ್ ಗಾಂಧಿಯವರು ದೇಶದ ಪ್ರಧಾನಿ ಆಗುವ ಕನಸು ಇವತ್ತು ದೂರವಾಗಿದೆ ಎಂದು ತಿಳಿಸಿದರು.
ಬೆಲೆ ಏರಿಕೆ- ಭ್ರಷ್ಟಾಚಾರದ ಕಾಂಗ್ರೆಸ್ ಸರಕಾರದ ವಿರುದ್ಧ ಜನಜಾಗೃತಿ ಮೂಡಿಸಲು ನಾವು ಜನಾಕ್ರೋಶ ಯಾತ್ರೆ ಮೂಲಕ ಹೊರಟಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸಲ್ಮಾನರನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ಸರಕಾರಿ ಕಾಮಗಾರಿಗಳಲ್ಲಿ ಶೇ 4 ರಷ್ಟು ಮೀಸಲಾತಿ ನೀಡಿದ್ದಾರೆ. ಇದು ಹಿಂದೂಗಳಿಗೆ ಅವಮಾನ ಮಾಡುವ ಕ್ರಮ ಎಂದು ಟೀಕಿಸಿದರು. ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಸಾವಿರಾರು ಕೋಟಿ ಹಣವನ್ನು ದುರುಪಯೋಗ ಮಾಡಿಕೊಂಡ ಕ್ರಮವನ್ನು ಆಕ್ಷೇಪಿಸಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಬಿ. ಶ್ರೀರಾಮುಲು, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಮಾಜಿ ಸಚಿವೆ ಮತ್ತು ಶಾಸಕಿ ಶ್ರೀಮತಿ ಶಶಿಕಲಾ ಜೊಲ್ಲೆ, ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಅಭಯ್ ಪಾಟೀಲ್, ದುರ್ಯೋಧನ ಮಹಾಲಿಂಗಪ್ಪ ಐಹೊಳೆ, ವಿಠ್ಠಲ್ ಹಲಗೇಕರ್, ನಿಖಿಲ್ ಕತ್ತಿ, ವಿಧಾನಪರಿಷತ್ ಸದಸ್ಯ ಹನುಮಂತ ನಿರಾಣಿ, ಮೈಸೂರು ಸಂಸದ ಯದುವೀರ್ ಒಡೆಯರ್, ವಿಧಾನಪರಿಷತ್ ಮಾಜಿ ಸದಸ್ಯ ಮಹಂತೇಶ್ ಕವಟಗಿಮಠ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಹಾಗೂ ಮತ್ತಿತರ ಮುಖಂಡರು ಭಾಗವಹಿಸಿದ್ದರು.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ












Click it and Unblock the Notifications