Get Updates
Get notified of breaking news, exclusive insights, and must-see stories!

ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ್‌ ಖರ್ಗೆ: ಪತ್ರದಲ್ಲೇನಿದೆ?

ಬೆಂಗಳೂರು, ಡಿಸೆಂಬರ್‌ 11: ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳ ಸಮಗ್ರ ಬಹುಗ್ರಾಮ ಕುಡಿಯುವ ನೀರು ಒದಗಿಸುವ ಯೋಜನೆಗಾಗಿ ಅನುಮೋದನೆ ಹಾಗೂ ಜಲ್ ಜೀವನ್ ಮೀಷನ್ ಯೋಜನೆಯಡಿಯಲ್ಲಿ 50% ಕೇಂದ್ರ ಸರ್ಕಾರದ ಹೊಂದಾಣಿಕೆ ಅನುದಾನ ಬಿಡುಗಡೆ ಮಾಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ.

ಈ ಕುರಿತು ಡಿಸೆಂಬರ್ 9 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಮಲ್ಲಿಕಾರ್ಜುನ್ ಖರ್ಗೆ ಅವರು‌, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳ ಎಲ್ಲಾ ಗ್ರಾಮೀಣ ಜನವಸತಿಗಳಿಗೆ DBOT ( Design, Build, Operation and Transfer - ಡಿಬಿಒಟಿ- ವಿನ್ಯಾಸ, ನಿರ್ಮಾಣ, ಕಾರ್ಯ ಹಾಗೂ ವರ್ಗಾವಣೆ) ಆಧಾರದ ಮೇಲೆ 7,200.00 ಕೋಟಿ ರೂ. ಅಂದಾಜು ಯೋಜನಾ ವೆಚ್ಚದಲ್ಲಿ ಸಮಗ್ರ ಬಹು-ಗ್ರಾಮ ನೀರು ಸರಬರಾಜು ಯೋಜನೆಯ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

Mallikarjun Kharge wrote a letter to Prime Minister Narendra Modi

ಕಲಬುರಗಿ ಜಿಲ್ಲೆಯ 11 ತಾಲೂಕುಗಳ 859 ಗ್ರಾಮಗಳು, 1,259 ಜನವಸತಿಗಳಲ್ಲಿ ವಾಸಿಸುತ್ತಿರುವ 25,74,434 ಜನರಿಗೆ ಹಾಗೂ ಬೀದರ್ ಜಿಲ್ಲೆಯ 8 ತಾಲೂಕುಗಳ 597 ಗ್ರಾಮಗಳು 17,61,931 ಜನರಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಇದಾಗಿದೆ. ಕಲಬುರಗಿ ಮತ್ತು ಬೀದರ್ ಜಿಲ್ಲೆಗಳು ಕಲ್ಯಾಣ ಕರ್ನಾಟಕ ಪ್ರದೇಶದ ಕರ್ನಾಟಕದ ಉತ್ತರ ಭಾಗದಲ್ಲಿದ್ದು, ಪ್ರಧಾನವಾಗಿ ಎಸ್‌ಸಿ ಜನಸಂಖ್ಯೆ -28.60% ಮತ್ತು ಎಸ್‌ಟಿ ಜನಸಂಖ್ಯೆ -7.90% ಹೊಂದಿವೆ. ಈ ಜಿಲ್ಲೆಗಳು ಪ್ರಸ್ತುತ ತೀವ್ರ ನೀರಿನ ಗುಣಮಟ್ಟದ ಸಮಸ್ಯೆಗಳನ್ನು ಮತ್ತು ಹೆಚ್ಚು ಏರಿಳಿತದ ಅಂತರ್ಜಲ ಮಟ್ಟವನ್ನು ಎದುರಿಸುತ್ತಿವೆ. ಈ ಸವಾಲುಗಳನ್ನು ಎದುರಿಸಲು, ವಿಜಯಪುರ ಜಿಲ್ಲೆಯ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ನಾರಾಯಣಪುರ ಜಲಾಶಯದಿಂದ ದೀರ್ಘಕಾಲಿಕ ಮತ್ತು ಸುಸ್ಥಿರ ನೀರಿನ ಮೂಲವನ್ನು ಗುರುತಿಸಲಾಗಿದೆ.

ಅದರಂತೆ, ಜಲ ಜೀವನ್ ಮಿಷನ್ (ಜೆಜೆಎಂ) ಅಡಿಯಲ್ಲಿ ಭಾರತ ಸರ್ಕಾರದಿಂದ 50% ಬಂಡವಾಳ ವೆಚ್ಚದ ಬೆಂಬಲದ ನಿರೀಕ್ಷೆಯೊಂದಿಗೆ ರಾಜ್ಯ ಸರ್ಕಾರವು PSR ( Project Status Report - ಪಿ ಎಸ್ ಆರ್ - ಯೋಜನಾ ಸ್ಥಿತಿ ವರದಿ) ತಯಾರಿಕೆ ಪ್ರಾರಂಭಿಸಿದೆ. ಐದು ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆ (ಒ & ಎಂ) ಸೇರಿದಂತೆ ಉಳಿದ 50% ರಾಜ್ಯ ಹೊಂದಾಣಿಕೆಯ ಪಾಲನ್ನು ಪೂರೈಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಹಣವನ್ನು ಬಳಸಿಕೊಳ್ಳಲು ರಾಜ್ಯ ಸಚಿವ ಸಂಪುಟವು ಸ್ಪಷ್ಟವಾಗಿ ಅನುಮೋದನೆ ನೀಡಿದೆ.

ಈ ಎರಡು ಜಿಲ್ಲೆಗಳ ಎಲ್ಲಾ ಗ್ರಾಮೀಣ ವಾಸಸ್ಥಳಗಳಿಗೆ ಸುಸ್ಥಿರ ಕುಡಿಯುವ ನೀರಿನ ಪರಿಹಾರವನ್ನು ಒದಗಿಸುವ ಈ ಯೋಜನೆಯು ಬಹಳ ದೀರ್ಘ ಕಾಲದವರೆಗೆ ಅನುಕೂಲವಾಗಲಿದೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ಭಾರತ ಸರ್ಕಾರದಿಂದ 50% ಹೊಂದಾಣಿಕೆಯ ಕೊಡುಗೆಯೊಂದಿಗೆ ಜಲ ಜೀವನ್ ಮಿಷನ್ ಅಡಿಯಲ್ಲಿ ಪ್ರಸ್ತಾವಿತ ಯೋಜನೆಗೆ ಆರಂಭಿಕ ಅನುಮೋದನೆಗಾಗಿ ಮಧ್ಯೆ ಪ್ರವೇಶಿಸುವಂತೆ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಅವರಿಗೆ ಪತ್ರದಲ್ಲಿ ಕೋರಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+