INDIA PM Candidate: ದೇಶದಲ್ಲಿ ದಲಿತರು ಪ್ರಧಾನಿ ಆಗಬಾರದಾ?: ಕಾಂಗ್ರೆಸ್ ಶಾಸಕ ಹೀಗಂದಿದ್ಯಾಕೆ?
ಕೋಲಾರ, ಡಿಸೆಂಬರ್ 20: ಇಂಡಿಯಾ ಮೈತ್ರಿ ಕೂಟದಲ್ಲಿ ಲೋಕಸಭಾ ಚುನಾವಣೆಯ ತಯಾರಿ ನಡೆದಿದೆ. ಈ ಮಧ್ಯೆ ಮೈತ್ರಿಯಿಂದ ಪ್ರಧಾನಿ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಸೂಕ್ತ ವಿಚಾರ ಬಹಿರಂಗವಾಗಿದೆ. ಮೈತ್ರಿಕೂಟದ ಈ ನಿರ್ಧಾರ ಸರಿಯಾಗಿದೆ. ಯಾಕೆ ದೇಶದಲ್ಲಿ ದಲಿತರು ಪ್ರಧಾನಿ ಆಗಬಾರದಾ ಎಂದು ಶಾಸಕರೊಬ್ಬರು ಕೇಳಿದ್ದಾರೆ.
ಕೋಲಾರದಲ್ಲಿ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಅವರು ಇಂಡಿಯಾ ಮೈತ್ರಿಯ ನಿರ್ಧಾರ ಸ್ವಾಗತಿಸಿದ್ದಾರೆ. ಅಲ್ಲದೇ ಅವರು ದಲಿತರು ಪ್ರಧಾನಿ ಆಗಬಾರದಾ? ಎಂದು ಕೇಳುವ ಮೂಲಕ ಬಿಜೆಪಿ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸ್ವಾತಂತ್ರಕ್ಕೆ ಹೋರಾಟ ಮಾಡಿರುವ ಇತಿಹಾಸವಿದೆ. ಇಲ್ಲಿ ದಲಿತರಿಗೂ ಉನ್ನತ ಸ್ಥಾನ ಇದೆ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ಹರಿಹಾಯ್ದರು.

ಕಾಂಗ್ರೆಸ್ನಲ್ಲಿ ರಾಜೀವ್ ಗಾಂಧಿ ಆಕಸ್ಮಿಕವಾಗಿ ನಿಧನದ ಬಳಿಕ ನರಸಿಂಹರಾವ್ ಅವರನ್ನು ಪ್ರಧಾನಿ ಮಾಡಿದ್ದರು. ಅಧಿಕಾರಕ್ಕೆ ಆಸೆ ಪಟ್ಟಿದ್ರೆ ಸೋನಿಯಾ ಗಾಂಧಿ ಅವತ್ತೇ ಪ್ರಧಾನಿ ಆಗಬಹುದಿತ್ತು. 10 ವರ್ಷಗಳ ಕಾಲ ಮನಮೋಹನ್ ಸಿಂಗ್ ಅವರನ್ನು ಪ್ರಧಾನ ಮಂತ್ರಿ ಮಾಡಿದರು.
ಪ್ರಧಾನಿ ಅಭ್ಯರ್ಥಿ ವಿಚಾರ ಸಂತಸ ತಂದಿದೆ
ರಾಹುಲ್ ಗಾಂಧಿ ಸಹ ಚಿಕ್ಕ ವಯಸ್ಸಿಗೆ ಪ್ರಧಾನಿ ಅಗಬಹುದಿತ್ತು. ಗಾಂಧಿ ಕುಟುಂಬ ಅಧಿಕಾರಕ್ಕೆ ಆಸೆ ಪಟ್ಟಿಲ್ಲ. ಮಲ್ಲಿಕಾರ್ಜುನ ಖರ್ಗೆ ಈಗ ರಾಷ್ಟ್ರೀಯ ನಾಯಕರಾಗಿ ಬೆಳೆದಿದ್ದಾರೆ. INDIA ಒಕ್ಕೂಟದಿಂದ ಪ್ರಧಾನಿ ಮಂತ್ರಿ ಅಭ್ಯರ್ಥಿ ಆಯ್ಕೆ ವಿಚಾರ ಸಂತಸ ತಂದಿದೆ ಎಂದು ಅವರು ವಿವರಿಸಿದರು.

ಕಾಂಗ್ರೆಸ್ ಪಕ್ಷದಿಂದ ಮಾತ್ರ ದಲಿತರಿಗೆ ಸ್ಥಾನಮಾನ ಸಿಗುತ್ತೆ. ಕಾಂಗ್ರೆಸ್ ಪಕ್ಷದಲ್ಲಿ ಜಾತಿ ಭೇದ ಇಲ್ಲ, ಖರ್ಗೆ ಆಯ್ಕೆ ಯಾರು ವಿರೋಧ ಮಾಡುವುದಿಲ್ಲ. ಈ ಎಲ್ಲ ಲೆಕ್ಕಚಾರದಲ್ಲಿ ಪರಿಗಣಿಸಿ ಇಂಡಿಯಾ ಒಕ್ಕೂಟದಿಂದ ಆಯ್ಕೆ ಮಾಡಲಾಗಿದೆ. ಮೊನ್ನೆ ನಡೆದ ಮೂರು ವಿಧಾನಸಭಾ ಚುನಾವಣೆಯಲ್ಲಿ ಒಂದು ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಗೆದ್ದಿದೆ.
ಆದರೆ ಪಂಚರಾಜ್ಯ ಚುನಾವಣೆಯಲ್ಲಿ ಮತಗಳ ಅಂಕಿ ಅಂಶದಲ್ಲಿ ಶೇಖಡಾವಾರು ಕಾಂಗ್ರೆಸ್ ಮುಂದಿದೆ. ಇಂಡಿಯಾ ಮೈತ್ರಿಕೂಟದ ನಿರ್ಧಾರಕ್ಕೆ ಸ್ವಾಗತ ಮಾಡುವುದಾಗಿ ಅವರು ಪುನರುಚ್ಚರಿಸಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications