ಭಾನುವಾರ ಮಲೆನಾಡು ಮಿತ್ರವೃಂದದ ಕ್ರೀಡಾಕೂಟ
ಬೆಂಗಳೂರು, ಜ.3 : ಮಲೆನಾಡು ಮಿತ್ರವೃಂದ ಆರನೇ ವರ್ಷದ ಮಲೆನಾಡಿಗರ ಕ್ರೀಡಾಕೂಟವನ್ನು ಭಾನುವಾರ ಬೆಂಗಳೂರಿನಲ್ಲಿ ಹಮ್ಮಿಕೊಂಡಿದೆ. ಜಾಲಹಳ್ಳಿ ಬಳಿಯ ಎಚ್ಎಂಟಿ ಆಟದ ಮೈದಾನದಲ್ಲಿ ಜ.3ರ ಭಾನುವಾರ ಈ ಕ್ರೀಡಾಕೂಟ ನಡೆಯಲಿದೆ.
ಎಚ್ಎಂಟಿ ಆಟದ ಮೈದಾನದಲ್ಲಿ ಭಾನುವಾರ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿವಿಧ ಕ್ರೀಡಾಕೂಟಗಳು ನಡೆಯಲಿವೆ ಎಂದು ಮಲೆನಾಡು ಮಿತ್ರವೃಂದದ ಕಾರ್ಯದರ್ಶಿ ಸಂದೇಶ್ ಗೌಡ ಹೇಳಿದ್ದಾರೆ. 5ರಿಂದ 35 ವರ್ಷದ ತನಕ ವಿವಿಧ ವಯೋಮಾನದವರು ಕ್ರೀಡಾಕೂಟದಲ್ಲಿ ಕುಟುಂಬದವರೊಂದಿಗೆ ಪಾಲ್ಗೊಳ್ಳಬಹುದಾಗಿದೆ.

ಆಯಾ ವಯೋಮಾನದವರಿಗೆ ಅನುಗುಣವಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲರೂ ಬೆಳಗ್ಗೆ 9 ಗಂಟೆಗೆ ಆಟದ ಮೈದಾನದಲ್ಲಿ ಹಾಜರಿಬೇಕೆಂದು ಮನವಿ ಮಾಡಲಾಗಿದೆ. ಮಧ್ಯಾಹ್ನ ಒಂದು ಗಂಟೆಗೆ ಎಲ್ಲರಿಗೂ ಭೋಜನ ವ್ಯವಸ್ಥೆ ಮಾಡಲಾಗಿದೆ.
ಆಟಗಳು : 50 ಮೀಟರ್ ಮತ್ತು 100 ಮೀಟರ್ ಓಟ, ಲೆಮನ್ ಇನ್ ದ ಸ್ಪೂನ್, ಮ್ಯೂಜಿಕಲ್ ಛೇರ್, ಥ್ರೋ ಬಾಲ್, ಮಡಕೆ ಒಡೆಯುವುದು, ಪಾಸಿಂಗ್ ದ ಬಾಲ್, ವಾಲಿಬಾಲ್, ಸ್ಲೋ ಬೈಕ್ ರೇಸ್ ಮುಂತಾದ ಆಟಗಳನ್ನು ಏರ್ಪಡಿಸಲಾಗಿದೆ.
ಬಿಎಂಟಿಸಿ ಬಸ್ಸಿನ ಮಾರ್ಗ : ಎಚ್ಎಂಟಿ ಆಟದ ಮೈದಾನಕ್ಕೆ ಹೋಗಲು ಮೆಜೆಸ್ಟಿಕ್ನಿಂದ 273, ಶಿವಾಜಿನಗರದಿಂದ 270 ಹಾಗೂ ಮಾರ್ಕೆಟ್ನಿಂದ 275ನೇ ಬಸ್ನಲ್ಲಿ ಬಂದು ಎಚ್ಎಂಟಿ ಆಡಿಟೋರಿಯಂ ನಿಲ್ದಾಣದಲ್ಲಿ ಇಳಿಯಬೇಕು. ಹೆಚ್ಚಿನ ವಿವರಗಳಿಗೆ ಕೆ.ಸಿ.ಕರುಣಾಕರ 9900111345 ಅಥವಾ ಸಂದೇಶ್ಗೌಡ 9945211401 ಅವರನ್ನು ಸಂಪರ್ಕಿಸಬಹುದಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications