ಲಿಖಿತ ಪರೀಕ್ಷೆ ನಕಲು ಯತ್ನ; ಬಿಜೆಪಿ ಸರ್ಕಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು
ಬೆಂಗಳೂರು, ಅಕ್ಟೋಬರ್ 29: ಕರ್ನಾಟಕದಲ್ಲಿ ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆ ಅಕ್ರಮದ ಕುರಿತು ಇನ್ನೂ ಚರ್ಚೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಕೆಇಎ ನಡೆಸಿದ ನಿಗಮ-ಮಂಡಳಿ ಲಿಖಿತ ಪರೀಕ್ಷೆಯಲ್ಲಿ ನಕಲು ಮಾಡುವ ಪ್ರಯತ್ನ ನಡೆದಿದೆ. ಈ ಪ್ರಕರಣದ ಸಂಬಂಧ 10 ಜನರನ್ನು ಬಂಧಿಸಲಾಗಿದೆ.
ಭಾನುವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಈ ಕುರಿತು ಟ್ವೀಟ್ವೊಂದನ್ನು ಮಾಡಿದ್ದಾರೆ. 'ಹಿಂದಿನ ಸರ್ಕಾರದಲ್ಲಿ ಆದಂತಹ ನೇಮಕಾತಿ ಪರೀಕ್ಷೆಗಳ ಅಕ್ರಮಗಳು ಪುನರಾವರ್ತನೆ ಆಗದಂತೆ ತಡೆಯಲು ನಮ್ಮ ಸರ್ಕಾರ ಆದ್ಯತೆ ಮೇರೆಗೆ ಮುಂಜಾಗೃತಾ ಕ್ರಮಗಳನ್ನು ವಹಿಸಿದೆ' ಎಂದು ಹೇಳಿದ್ದಾರೆ.

ಸಚಿವರ ಟ್ವೀಟ್ ವಿವರ; ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ನಲ್ಲಿ 28 ಅಕ್ಟೋಬರ್ ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುತ್ತಿದ್ದ ವಿವಿಧ ನಿಗಮ ಮಂಡಳಿಗಳ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮಕ್ಕೆ ಅವಕಾಶವಾಗದ ರೀತಿಯಲ್ಲಿ ಕಲಬುರ್ಗಿ ಜಿಲ್ಲೆಯ ಎಲ್ಲಾ 17 ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಳ್ಳಲಾದ ಕ್ರಮಗಳ ಕುರಿತು ಮಾಹಿತಿ ನೀಡಿದ್ದಾರೆ.
* ಪರೀಕ್ಷಾ ಕೇಂದ್ರಗಳ ಸುತ್ತಾ ಜನರ ಓಡಾಟಕ್ಕೆ ನಿರ್ಬಂಧ
* ಜೊತೆಗೆ ಪರೀಕ್ಷಾ ಕೇಂದ್ರಗಳ ಹತ್ತಿರದಲ್ಲಿರುವ ಎಲ್ಲಾ ಲಾಡ್ಜ್ ಗಳ ಪೂರ್ವಭಾವಿ ತಪಾಸಣೆ
* ಪರೀಕ್ಷೆ ನಡೆಯುವ ವೇಳೆ ಕೇಂದ್ರಗಳ ಸುತ್ತಮುತ್ತಲೂ ಸಂಶಯಾಸ್ಪದ ವಾಹನ ತಪಾಸಣೆ
* ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಲಿನ ಎಲ್ಲಾ ಝೆರಾಕ್ಸ್ ಹಾಗೂ ಇತರೆ ಅಂಗಡಿ ಬಂದ್
* ಪರೀಕ್ಷೆಗೆ ಹಾಜರಾಗುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿ/ ವಿದ್ಯಾರ್ಥಿನಿಯರುಗಳಿಗೆ HHMD (ಹ್ಯಾಂಡ್ ಹೆಲ್ಡ್ ಮೆಟಲ್ ಡಿಟೆಕ್ಟರ್) ಮೂಲಕ ಪೊಲೀಸ್ ಸಿಬ್ಬಂದಿಗಳಿಂದ ತಪಾಸಣೆ ನಡೆಸಿದ ಕೇಂದ್ರದ ಒಳಗೆ ಹೋಗಲು ಅನುಮತಿ.
ಈ ರೀತಿ ಹಲವಾರು ಮುಂಜಾಗೃತಾ ಕ್ರಮಗಳನ್ನು ವಹಿಸಿದ ಪರಿಣಾಮ ಅಫಜ್ಲಪುರ್ ಪಟ್ಟಣದಲ್ಲಿರುವ ಮಹಾಂತೇಶ್ವರ ವಿದ್ಯಾವರ್ಧಕ ಸಂಘ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕೇಂದ್ರ ಪ್ರವೇಶಿಸುವ ಮುನ್ನವೇ ಅಕ್ರಮ ಎಸಗಲು ತಯಾರಿ ನಡೆಸಿ ಬಂದಿದ್ದ 3 ಅಭ್ಯರ್ಥಿಗಳನ್ನು ಬಂಧಿಸಲಾಗಿದೆ.
ಜೊತೆಗೆ ಕಲಬುರ್ಗಿ ನಗರದಲ್ಲಿ ಶರಣಬಸವೇಶ್ವರ ಯುನಿವರ್ಸಿಟಿ ಹಾಗೂ ಕಲಬುರ್ಗಿ ಯುನಿವರ್ಸಿಟಿ ಕಾಮರ್ಸ್ ವಿಭಾಗ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳ ನಿರ್ದೇಶಕರ ದೂರಿನ ಮೇರೆಗೆ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಅಭ್ಯರ್ಥಿಗಳನ್ನು ಬಂಧಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
28 ಅಕ್ಟೋಬರ್ ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುತ್ತಿದ್ದ ವಿವಿಧ ನಿಗಮ ಮಂಡಳಿಗಳ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮಕ್ಕೆ ಅವಕಾಶವಾಗದ ರೀತಿಯಲ್ಲಿ ಕಲಬುರ್ಗಿ ಜಿಲ್ಲೆಯ ಎಲ್ಲಾ 17 ಪರೀಕ್ಷಾ ಕೇಂದ್ರಗಳಲ್ಲಿ
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 29, 2023
- ಪರೀಕ್ಷಾ ಕೇಂದ್ರಗಳ ಸುತ್ತಾ ಜನರ ಓಡಾಟಕ್ಕೆ ನಿರ್ಬಂಧ
- ಜೊತೆಗೆ ಪರೀಕ್ಷಾ ಕೇಂದ್ರಗಳ ಹತ್ತಿರದಲ್ಲಿರುವ ಎಲ್ಲಾ…
ಇಷ್ಟೇ ಅಲ್ಲದೇ ಈ ಅಕ್ರಮಕ್ಕೆ ಕುಮ್ಮಕ್ಕು, ಸಹಾಯ ಹಾಗೂ ತಯಾರಿ ನೀಡಿದ್ದ ಆರೋಪಿಗಳ ವಿರುದ್ಧವೂ FIR ದಾಖಲಿಸಿ ಕಾನೂನು ಪ್ರಕಾರ ಕ್ರಮ ವಹಿಸಲಾಗಿದೆ. ನಮ್ಮ ಸರ್ಕಾರ ತನ್ನ ಮುಂಜಾಗೃತಾ ಕ್ರಮ ವಹಿಸಿದ್ದರಿಂದಲೇ ಈ ಪ್ರಕರಣಗಳು ಬೆಳಕಿಗೆ ಬಂದಿದ್ದು, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲೂ ಪರೀಕ್ಷಾ ಅಕ್ರಮಕ್ಕೆ ಯತ್ನಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ನೇಮಕಾತಿ ಪರೀಕ್ಷೆಗಳ ಪವಿತ್ರತೆ ಕಾಪಾಡಲು ಹಾಗೂ ನಮ್ಮ ಯುವಕರ ಉಜ್ವಲ ಭವಿಷ್ಯಕ್ಕೆ ಯಾವುದೇ ತೊಂದರೆಯಾಗದಂತೆ ಸಕಲ ಕ್ರಮವಹಿಸಿ ಸರ್ಕಾರ ತನ್ನ ಬದ್ಧತೆ ಪ್ರದರ್ಶಿಸಿದೆ ಎಂದು ಸಚಿವರು ವಿವರಿಸಿದ್ದಾರೆ.
10 ಜನರ ಬಂಧನ; ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಲಿಖಿತ ಪರೀಕ್ಷೆಗಳಲ್ಲಿ ಬ್ಲೂಟೂತ್ ಬಳಕೆ ಮಾಡಿ ಪರೀಕ್ಷೆ ಬರೆಯಲು ಮುಂದಾಗಿದ್ದ ಹಾಗೂ ಅದಕ್ಕೆ ಸಹಕಾರ ನೀಡಿದ್ದ 10 ಜನರನ್ನು ಶನಿವಾರ ಬಂಧಿಸಲಾಗಿದೆ. ಕಲಬುರಗಿಯ ಅಶೋಕ ನಗರ ಠಾಣೆ ಪೊಲೀಸರು ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.
ಅಫಜಲಪುರದಲ್ಲಿ ಮೂವರು ಅಭ್ಯರ್ಥಿಗಳು ಮತ್ತು ಅಕ್ರಮಕ್ಕೆ ಸಹಕರಿಸಿದ ನಾಲ್ವರು ಸೇರಿದಂತೆ 7 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇನ್ನೂ ಒಬ್ಬ ಪರಾರಿಯಾಗಿದ್ದು, ಹುಡುಕಾಟ ನಡೆದಿದೆ. ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆ ಹಗರಣದಲ್ಲಿ ಬ್ಲೂಟೂತ್ ಮೂಲಕ ಉತ್ತರ ಹೇಳಿಸಿದ ಆರೋಪದಲ್ಲಿ ಬಂಧಿತನಾಗಿದ್ದ ಕಲಬುರಗಿ ಜಿಲ್ಲೆ ಅಫಜಲಪುರದ ಆರ್. ಡಿ. ಪಾಟೀಲ ಕೈವಾಡ ಇದರದಲ್ಲಿ ಇದೆ ಎಂದು ಅಭ್ಯರ್ಥಿಯೊಬ್ಬರು ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications