ಲಿಖಿತ ಪರೀಕ್ಷೆ ನಕಲು ಯತ್ನ; ಬಿಜೆಪಿ ಸರ್ಕಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು
ಬೆಂಗಳೂರು, ಅಕ್ಟೋಬರ್ 29: ಕರ್ನಾಟಕದಲ್ಲಿ ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆ ಅಕ್ರಮದ ಕುರಿತು ಇನ್ನೂ ಚರ್ಚೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಕೆಇಎ ನಡೆಸಿದ ನಿಗಮ-ಮಂಡಳಿ ಲಿಖಿತ ಪರೀಕ್ಷೆಯಲ್ಲಿ ನಕಲು ಮಾಡುವ ಪ್ರಯತ್ನ ನಡೆದಿದೆ. ಈ ಪ್ರಕರಣದ ಸಂಬಂಧ 10 ಜನರನ್ನು ಬಂಧಿಸಲಾಗಿದೆ.
ಭಾನುವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಈ ಕುರಿತು ಟ್ವೀಟ್ವೊಂದನ್ನು ಮಾಡಿದ್ದಾರೆ. 'ಹಿಂದಿನ ಸರ್ಕಾರದಲ್ಲಿ ಆದಂತಹ ನೇಮಕಾತಿ ಪರೀಕ್ಷೆಗಳ ಅಕ್ರಮಗಳು ಪುನರಾವರ್ತನೆ ಆಗದಂತೆ ತಡೆಯಲು ನಮ್ಮ ಸರ್ಕಾರ ಆದ್ಯತೆ ಮೇರೆಗೆ ಮುಂಜಾಗೃತಾ ಕ್ರಮಗಳನ್ನು ವಹಿಸಿದೆ' ಎಂದು ಹೇಳಿದ್ದಾರೆ.

ಸಚಿವರ ಟ್ವೀಟ್ ವಿವರ; ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ನಲ್ಲಿ 28 ಅಕ್ಟೋಬರ್ ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುತ್ತಿದ್ದ ವಿವಿಧ ನಿಗಮ ಮಂಡಳಿಗಳ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮಕ್ಕೆ ಅವಕಾಶವಾಗದ ರೀತಿಯಲ್ಲಿ ಕಲಬುರ್ಗಿ ಜಿಲ್ಲೆಯ ಎಲ್ಲಾ 17 ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಳ್ಳಲಾದ ಕ್ರಮಗಳ ಕುರಿತು ಮಾಹಿತಿ ನೀಡಿದ್ದಾರೆ.
* ಪರೀಕ್ಷಾ ಕೇಂದ್ರಗಳ ಸುತ್ತಾ ಜನರ ಓಡಾಟಕ್ಕೆ ನಿರ್ಬಂಧ
* ಜೊತೆಗೆ ಪರೀಕ್ಷಾ ಕೇಂದ್ರಗಳ ಹತ್ತಿರದಲ್ಲಿರುವ ಎಲ್ಲಾ ಲಾಡ್ಜ್ ಗಳ ಪೂರ್ವಭಾವಿ ತಪಾಸಣೆ
* ಪರೀಕ್ಷೆ ನಡೆಯುವ ವೇಳೆ ಕೇಂದ್ರಗಳ ಸುತ್ತಮುತ್ತಲೂ ಸಂಶಯಾಸ್ಪದ ವಾಹನ ತಪಾಸಣೆ
* ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಲಿನ ಎಲ್ಲಾ ಝೆರಾಕ್ಸ್ ಹಾಗೂ ಇತರೆ ಅಂಗಡಿ ಬಂದ್
* ಪರೀಕ್ಷೆಗೆ ಹಾಜರಾಗುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿ/ ವಿದ್ಯಾರ್ಥಿನಿಯರುಗಳಿಗೆ HHMD (ಹ್ಯಾಂಡ್ ಹೆಲ್ಡ್ ಮೆಟಲ್ ಡಿಟೆಕ್ಟರ್) ಮೂಲಕ ಪೊಲೀಸ್ ಸಿಬ್ಬಂದಿಗಳಿಂದ ತಪಾಸಣೆ ನಡೆಸಿದ ಕೇಂದ್ರದ ಒಳಗೆ ಹೋಗಲು ಅನುಮತಿ.
ಈ ರೀತಿ ಹಲವಾರು ಮುಂಜಾಗೃತಾ ಕ್ರಮಗಳನ್ನು ವಹಿಸಿದ ಪರಿಣಾಮ ಅಫಜ್ಲಪುರ್ ಪಟ್ಟಣದಲ್ಲಿರುವ ಮಹಾಂತೇಶ್ವರ ವಿದ್ಯಾವರ್ಧಕ ಸಂಘ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕೇಂದ್ರ ಪ್ರವೇಶಿಸುವ ಮುನ್ನವೇ ಅಕ್ರಮ ಎಸಗಲು ತಯಾರಿ ನಡೆಸಿ ಬಂದಿದ್ದ 3 ಅಭ್ಯರ್ಥಿಗಳನ್ನು ಬಂಧಿಸಲಾಗಿದೆ.
ಜೊತೆಗೆ ಕಲಬುರ್ಗಿ ನಗರದಲ್ಲಿ ಶರಣಬಸವೇಶ್ವರ ಯುನಿವರ್ಸಿಟಿ ಹಾಗೂ ಕಲಬುರ್ಗಿ ಯುನಿವರ್ಸಿಟಿ ಕಾಮರ್ಸ್ ವಿಭಾಗ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳ ನಿರ್ದೇಶಕರ ದೂರಿನ ಮೇರೆಗೆ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಅಭ್ಯರ್ಥಿಗಳನ್ನು ಬಂಧಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
28 ಅಕ್ಟೋಬರ್ ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುತ್ತಿದ್ದ ವಿವಿಧ ನಿಗಮ ಮಂಡಳಿಗಳ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮಕ್ಕೆ ಅವಕಾಶವಾಗದ ರೀತಿಯಲ್ಲಿ ಕಲಬುರ್ಗಿ ಜಿಲ್ಲೆಯ ಎಲ್ಲಾ 17 ಪರೀಕ್ಷಾ ಕೇಂದ್ರಗಳಲ್ಲಿ
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 29, 2023
- ಪರೀಕ್ಷಾ ಕೇಂದ್ರಗಳ ಸುತ್ತಾ ಜನರ ಓಡಾಟಕ್ಕೆ ನಿರ್ಬಂಧ
- ಜೊತೆಗೆ ಪರೀಕ್ಷಾ ಕೇಂದ್ರಗಳ ಹತ್ತಿರದಲ್ಲಿರುವ ಎಲ್ಲಾ…
ಇಷ್ಟೇ ಅಲ್ಲದೇ ಈ ಅಕ್ರಮಕ್ಕೆ ಕುಮ್ಮಕ್ಕು, ಸಹಾಯ ಹಾಗೂ ತಯಾರಿ ನೀಡಿದ್ದ ಆರೋಪಿಗಳ ವಿರುದ್ಧವೂ FIR ದಾಖಲಿಸಿ ಕಾನೂನು ಪ್ರಕಾರ ಕ್ರಮ ವಹಿಸಲಾಗಿದೆ. ನಮ್ಮ ಸರ್ಕಾರ ತನ್ನ ಮುಂಜಾಗೃತಾ ಕ್ರಮ ವಹಿಸಿದ್ದರಿಂದಲೇ ಈ ಪ್ರಕರಣಗಳು ಬೆಳಕಿಗೆ ಬಂದಿದ್ದು, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲೂ ಪರೀಕ್ಷಾ ಅಕ್ರಮಕ್ಕೆ ಯತ್ನಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ನೇಮಕಾತಿ ಪರೀಕ್ಷೆಗಳ ಪವಿತ್ರತೆ ಕಾಪಾಡಲು ಹಾಗೂ ನಮ್ಮ ಯುವಕರ ಉಜ್ವಲ ಭವಿಷ್ಯಕ್ಕೆ ಯಾವುದೇ ತೊಂದರೆಯಾಗದಂತೆ ಸಕಲ ಕ್ರಮವಹಿಸಿ ಸರ್ಕಾರ ತನ್ನ ಬದ್ಧತೆ ಪ್ರದರ್ಶಿಸಿದೆ ಎಂದು ಸಚಿವರು ವಿವರಿಸಿದ್ದಾರೆ.
10 ಜನರ ಬಂಧನ; ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಲಿಖಿತ ಪರೀಕ್ಷೆಗಳಲ್ಲಿ ಬ್ಲೂಟೂತ್ ಬಳಕೆ ಮಾಡಿ ಪರೀಕ್ಷೆ ಬರೆಯಲು ಮುಂದಾಗಿದ್ದ ಹಾಗೂ ಅದಕ್ಕೆ ಸಹಕಾರ ನೀಡಿದ್ದ 10 ಜನರನ್ನು ಶನಿವಾರ ಬಂಧಿಸಲಾಗಿದೆ. ಕಲಬುರಗಿಯ ಅಶೋಕ ನಗರ ಠಾಣೆ ಪೊಲೀಸರು ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.
ಅಫಜಲಪುರದಲ್ಲಿ ಮೂವರು ಅಭ್ಯರ್ಥಿಗಳು ಮತ್ತು ಅಕ್ರಮಕ್ಕೆ ಸಹಕರಿಸಿದ ನಾಲ್ವರು ಸೇರಿದಂತೆ 7 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇನ್ನೂ ಒಬ್ಬ ಪರಾರಿಯಾಗಿದ್ದು, ಹುಡುಕಾಟ ನಡೆದಿದೆ. ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆ ಹಗರಣದಲ್ಲಿ ಬ್ಲೂಟೂತ್ ಮೂಲಕ ಉತ್ತರ ಹೇಳಿಸಿದ ಆರೋಪದಲ್ಲಿ ಬಂಧಿತನಾಗಿದ್ದ ಕಲಬುರಗಿ ಜಿಲ್ಲೆ ಅಫಜಲಪುರದ ಆರ್. ಡಿ. ಪಾಟೀಲ ಕೈವಾಡ ಇದರದಲ್ಲಿ ಇದೆ ಎಂದು ಅಭ್ಯರ್ಥಿಯೊಬ್ಬರು ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
-
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications