ವಂಚನೆ ಪ್ರಕರಣ; ಬಿಜೆಪಿ ಮಾಜಿ ಸಚಿವರಿಗೆ 3 ವರ್ಷ ಜೈಲು ಶಿಕ್ಷೆ
ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಚಿವ ಮಾಲೂರು ಕೃಷ್ಣಯ್ಯ ಶೆಟ್ಟಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಬ್ಯಾಂಕ್ಗೆ ವಂಚನೆ ಪ್ರಕರಣದಲ್ಲಿ ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವರನ್ನು ದೋಷಿಗಳೆಂದು ಕೋರ್ಟ್ ತೀರ್ಪು ನೀಡಿತ್ತು, ಬಳಿಕ ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗಿದ್ದು ಬಿಜೆಪಿ ಮಾಜಿ ಸಚಿವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.
ಕೃಷ್ಣಯ್ಯ ಶೆಟ್ಟಿ ಮತ್ತು ಇತರ ಮೂವರು ನಕಲಿ ದಾಖಲೆಗಳನ್ನು ಬಳಸಿಕೊಂಡು ಖಾಸಗಿ ಬ್ಯಾಂಕ್ಗೆ 7.17 ಕೋಟಿ ರೂಪಾಯಿ ವಂಚಿಸಿರುವುದು ಸಾಬೀತಾಗಿದ್ದು, ಮೂರು ವರ್ಷ ಶಿಕ್ಷೆ ನೀಡಿ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ.

ಬ್ಯಾಂಕ್ ದೂರನ್ನು ದಾಖಲಿಸಿಕೊಂಡಿದ್ದ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸಿತ್ತು. ಕೃಷ್ಣಯ್ಯ ಶೆಟ್ಟಿ ಮತ್ತು ಸಹ ಆರೋಪಿಗಳಾದ ಶ್ರೀನಿವಾಸ್ ಮತ್ತು ಮುನಿರಾಜು ಅವರನ್ನು ಪಿತೂರಿ ಮತ್ತು ವಂಚನೆ ಸೇರಿದಂತೆ ಹಲವು ಅಪರಾಧಗಳಲ್ಲಿ ತಪ್ಪಿತಸ್ಥರು ಎಂದು ನ್ಯಾಯಾಲಯ ಹೇಳಿದೆ.
22 ವರ್ಷಗಳ ಹಿಂದಿನ ಪ್ರಕರಣ
ಈ ಪ್ರಕರಣವು ಬರೋಬ್ಬರಿ 22 ವರ್ಷ ಹಳೆಯದಾಗಿದೆ. 1993ರಲ್ಲಿ ಕೃಷ್ಣಯ್ಯ ಶೆಟ್ಟಿ ತಮ್ಮ ಸಂಸ್ಥೆ ಬಾಲಾಜಿ ಕೃಪಾ ಎಂಟರ್ಪ್ರೈಸಸ್ ಮೂಲಕ ಸಾರ್ವಜನಿಕ ವಲಯದ ಉದ್ಯಮಗಳ ಉದ್ಯೋಗಿಗಳಿಗೆ ಹೌಸಿಂಗ್ ಬೋರ್ಡ್ ಸಾಲದ ಭರವಸೆ ನೀಡಿದ್ದು, ಅವರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸುವ ಮೂಲಕ ಬ್ಯಾಂಕ್ಗಳಲ್ಲಿ ಸಾಲ ಪಡೆದಿದ್ದರು, ಅದರಲ್ಲಿ 3.53 ಕೋಟಿ ರೂಪಾಯಿಯನ್ನು ಇನ್ನೂ ಬ್ಯಾಂಕ್ಗೆ ಪಾವತಿ ಮಾಡಬೇಕಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications