Man-Animal Conflict: ಟಾಸ್ಕ್ಫೋರ್ಸ್ ಆಧುನಿಕರಣಕ್ಕೆ ರೂ.10 ಕೋಟಿ ಬಿಡುಗಡೆ
ಬೆಂಗಳೂರು, ಫೆಬ್ರವರಿ 20: ಕರ್ನಾಟಕದ ಅರಣ್ಯ ಪ್ರದೇಶಗಳ ಭಾಗದಲ್ಲಿ ಉಂಟಾಗುತ್ತಿರುವ ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗೆ ರಾಜ್ಯ ಸರ್ಕಾರ ಕಾರ್ಯಪಡೆಗಳನ್ನು ರಚಿಸಿದೆ. ಈ ಕಾರ್ಯಪಡೆ ಗಳ ಸುಧಾರಣೆಗೆ ಸರ್ಕಾರ ಅನುದಾನ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದೆ.
ಹೌದು, ಮಾನವ-ಪ್ರಾಣಿ ಸಂಘರ್ಷ ತಡೆಗೆ ವಿವಿಧ ಕಾರ್ಯಪಡೆಗಳನ್ನು (ಟಾಸ್ಕ್ಫೋರ್ಸ್) ಸರ್ಕಾರ ರಚಿಸಿದೆ. ಈ ಕಾರ್ಯಪಡೆಗಳನ್ನು ಆಧುನೀಕರಣಗೊಳಿಸಲು, ಹೊಸ ತಂತ್ರಜ್ಞಾನಗಳ ಅಳವಡಿಕೆಗೆ ಸಹಾಯವಾಗಲೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚಿನ ಬಜೆಟ್ನಲ್ಲಿ 10 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದರು.

ಇದಷ್ಟೇ ಅಲ್ಲದೇ ಫೆ. 16ರಂದು ರಾಜ್ಯ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿಗಳು, ಕಲ್ಯಾಣ ಕರ್ನಾಟಕದ ಜಿಲ್ಲೆಯಾದ ಬೀದರ್ನಲ್ಲಿ ಹುಲ್ಲುಗಾವಲು ಪ್ರವಾಸೋದ್ಯಮಕ್ಕೆ ಸರ್ಕಾರ 15 ಕೋಟಿ ರೂಪಾಯಿ ಒದಗಿಸಲಿದೆ ಎಂದು ತಿಳಿಸಿರುವುದಾಗಿ TNIE ಮಾಹಿತಿ ನೀಡಿದ್ದಾರೆ.
78 ಕಿ.ಮೀ ರೈಲ್ವೆ ಮಾರ್ಗಕ್ಕೆ ಬ್ಯಾರಿಕೇಡ್
ಕಾಡಾನೆಗಳು ಜನವಸತಿ ಪ್ರದೇಶಕ್ಕೆ ನುಗ್ಗದಂತೆ ತಡೆಯಲು ಈವರೆಗೆ ಒಟ್ಟು 100 ಕೋಟಿ ರೂ.ವೆಚ್ಚದಲ್ಲಿ 78 ಕಿ.ಮೀ ಉದ್ದದ ರೈಲು ಮಾರ್ಗಕ್ಕೆ ಬ್ಯಾರಿಕೇಡ್ ಅಳವಡಿಸಲಾಗಿದೆ. ಇದರ ಅಳವಡಿಕೆ ಮುಂದುವರಿಯಲಿದೆ. ರಾಜ್ಯದಲ್ಲಿ ಇದುವರೆಗೆ 40 ಕೋಟಿ ರೂಪಾಯಿ ವೆಚ್ಚದಲ್ಲಿ ಏಳು ಆನೆ ಕಾರ್ಯಪಡೆ ಮತ್ತು ಎರಡು ಚಿರತೆ ಕಾರ್ಯಪಡೆಗಳನ್ನು ರಚಿಸಲಾಗಿದೆ.
ಕಾರ್ಯಪಡೆ ಬಲಪಡಿಸಲು ಅನುದಾನ ಹಂಚಿಕೆ
ಈ ವರ್ಷ ಬಂಡೀಪುರದಲ್ಲಿ ಮತ್ತೊಂದು ಕಾರ್ಯಪಡೆಯನ್ನು ರಚಿಸಲಾಗುವುದು. ಮನುಷ್ಯ ಶಕ್ತಿ ಮತ್ತು ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಈ ಟಾಸ್ಕ್ಫೋರ್ಸ್ ಬಲಪಡಿಸುವ ಸದುದ್ದೇಶದಿಂದ 10 ಕೋಟಿ ರೂ. ಹಣ ನೀಡಲಾಗುತ್ತಿದೆ. ಮಾನವ-ಪ್ರಾಣಿ ಸಂಘರ್ಷ ತಗ್ಗಿಸಲು 201 ಕೋಟಿ ರೂ. ವೆಚ್ಚದಲ್ಲಿ ಅರಣ್ಯದ ಪರಿಧಿಯಲ್ಲಿನ ಜನರು, ಬೆಳೆಗಳು ಮತ್ತು ಜೀವನವನ್ನು ರಕ್ಷಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದ್ದರು.

ಕರ್ನಾಟಕದಲ್ಲಿ ಹಸಿರು ಹೆಚ್ಚಿಸಲು 50,225 ಹೆಕ್ಟೇರ್ ಪ್ರದೇಶದಲ್ಲಿ 2.74 ಲಕ್ಷ ಸಸಿಗಳನ್ನು ನೆಟ್ಟು ಪೋಷಿಸಲಾಗುತ್ತಿದೆ. ಇಷ್ಟು ಸಸಿಗಳು ರಸ್ತೆ ವಿಭಜಕಗಳು ಮತ್ತು ಮೀಡಿಯಾನ್ಗಳು, ಟ್ರೀ ಪಾರ್ಕ್ಗಳು ಮತ್ತು ತೋಪುಗಳಲ್ಲಿ ನೆಡಲಾಗುತ್ತಿದೆ.
ನೀರಿನ ಪರೀಕ್ಷೆಗೆ ಪ್ರಯೋಗಾಲಯ
ಹೊನ್ನಿಕೇರಿ ಮೀಸಲು ಪ್ರದೇಶದಲ್ಲಿನ ಹುಲ್ಲುಗಾವಲುಗಳಲ್ಲಿ ಪರಿಸರ ಪ್ರವಾಸೋದ್ಯಮವನ್ನು ಪ್ರಾರಂಭಿಸಲಾಗುವುದು. ರಾಜ್ಯದಲ್ಲಿ ಕೃಷ್ಣಮೃಗಗಳು ಮತ್ತು ಚಿಂಕಾರಗಳಿಗೆ ಹೆಸರುವಾಸಿಯಾದ ಜೈವಿಕ ವೈವಿಧ್ಯತೆಯ ತಾಣವಾಗಿ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದರು. ಇನ್ನೂ ಕರ್ನಾಟಕದಲ್ಲಿ 17 ನದಿಗಳ ನೀರಿನ ಗುಣಮಟ್ಟವನ್ನು ಪರೀಕ್ಷಿಸಲು ಎರಡು ಪ್ರಯೋಗಾಲಯಗಳು ಮತ್ತು ಏಳು ತನಿಖಾ ಕೇಂದ್ರಗಳನ್ನು ಸ್ಥಾಪಿಸುವುದಾಗಿ ಬಜೆಟ್ ವೇಳೆ ಅವರು ಹೇಳಿದ್ದಾರೆ.
ಇದರೊಂದಿಗೆ ಬೆಂಗಳೂರಿನಂತಹ ಅಪಾರ್ಟ್ಮೆಂಟ್ಗಳಲ್ಲಿ ಕಟ್ಟಡಗಳಲ್ಲಿನ ನೀರಿನ ಮರುಬಳಕೆ ಮತ್ತು ಮರುಬಳಕೆಗೆ ವಿಧಾನಗಳ ಅಳವಡಿಕೆಗೆ ಪ್ರೋತ್ಸಾಹಿಸಲಾಗುವುದು ಎಂದು ಅವರು ತಿಳಿಸಿದರು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Samarth Shamanur: ದಾವಣಗೆರೆ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಫೈಟ್ ಅಂತ್ಯ: ಶಾಮನೂರು ಕುಟುಂಬದ ಕುಡಿ ಸಮರ್ಥ್ ಕಣಕ್ಕೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ











Click it and Unblock the Notifications