ಮಾಂಸಕ್ಕಾಗಿ 9 ಜಿಂಕೆ, 1 ಕಾಡು ಹಂದಿ ಕೊಂದ ಹಂತಕ ಸೆರೆ: ಸಿಕ್ಕಿಬಿದಿದ್ದೇ ರೋಚಕ
ಬೆಂಗಳೂರು, ಜೂನ್ 30: ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸೂಚನೆಯ ಮೇರೆಗೆ ಬೆಂಗಳೂರು ನಗರ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಬನ್ನೇರುಘಟ್ಟ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿ, ಮಾಂಸಕ್ಕಾಗಿ ಜಿಂಕೆ ಹತ್ಯೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, ಎರಡು ಕಾರು, ಬೈಕ್, 2 ಬಂದೂಕುಗಳನ್ನು ಜಪ್ತಿ ಮಾಡಿದ್ದಾರೆ.
ವನ್ಯಜೀವಿ ಹಂತಕರ ತಂಡವೊಂದು ಕೋಲಾರ, ಬನ್ನೇರುಘಟ್ಟ ಅರಣ್ಯದಲ್ಲಿ ಜಿಂಕೆಗಳನ್ನು ಕೊಂದು ಮಾಂಸ ಮಾರಾಟ ಮಾಡುತ್ತಿದೆ ಎಂದು ಸಚಿವರಿಗೆ ದೊರೆತ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸುವಂತೆ ಅಧಿಕಾರಿ ಮತ್ತು ಸಿಬ್ಬಂದಿಗೆ ಸೂಚನೆ ನೀಡಿದ್ದರು.

ಸಚಿವರ ಸೂಚನೆಯಂತೆ ಕಾರ್ಯಾಚರಣೆ ನಡಸಿದ ಬೆಂಗಳೂರು ನಗರ ಅರಣ್ಯ ವಿಭಾಗದ ಸಿಬ್ಬಂದಿ ಮತ್ತು ಜಾಗೃತದಳದ ಜಂಟಿ ತಂಡ ಬನ್ನೇರುಘಟ್ಟ-ನೈಸ್ ರಸ್ತೆ ಜಂಕ್ಷನ್ ಬಳಿ ಕೆ.ಎ 05 / ಎಜಿ 1302 ಸಂಖ್ಯೆಯ ಕಾರನ್ನು ತಡೆದು ತಪಾಸಣೆ ನಡೆಸಿದಾಗ, ಕಾರಿನಲ್ಲಿ 4 ಸತ್ತ ಚುಕ್ಕೆ ಜಿಂಕೆ ಮತ್ತು ಒಂದು ಮೃತ ಕಾಡು ಹಂದಿ ದೇಹ ಸಾಗಿಸಲಾಗುತ್ತಿದ್ದನ್ನು ಪತ್ತೆ ಮಾಡಿ, ಪ್ರತಾಪ್ (31) ಎಂಬಾತನನ್ನು ಬಂಧಿಸಿದರು.
ವಿಚಾರಣೆ ವೇಳೆ ಸಿ.ಕೆ.ಪಾಳ್ಯದ ಶೆಡ್ ನಲ್ಲಿ ಮತ್ತಷ್ಟು ಜಿಂಕೆಗಳ ಮೃತ ದೇಹ ಮತ್ತು ಮಾಂಸ ಇರುವ ವಿಷಯ ತಿಳಿದು, ಅಲ್ಲಿ ದಾಳಿ ಮಾಡಿ, ಬೈಕ್ ಮತ್ತು ಮತ್ತೊಂದು ಇಂಡಿಕಾ ಕಾರನ್ನೂ ವಶಪಡಿಕೊಂಡು ಒಟ್ಟು 9 ಜಿಂಕೆ ಹಾಗೂ ಒಂದು ಕಾಡು ಹಂದಿಯ ಸುಮಾರು 74 ಕೆಜಿ ಜಿಂಕೆ ಮಾಂಸ, 1 ಡಬಲ್ ಬ್ಯಾರೆಲ್ ಗನ್, 1 ಸಿಂಗಲ್ ಬ್ಯಾರೆಲ್ ಗನ್ ಮತ್ತು 10 ಕಾರ್ಟ್ರಿಡ್ಜ್ ಗಳನ್ನು ವಶಕ್ಕೆ ಪಡೆದರು.
ಜಿಂಕೆ ಮಾಂಸ ಇಟ್ಟಿದ್ದ ಶೆಡ್ ಮಾಲೀಕ ಭೀಮಪ್ಪ ಆರೋಪಿಗಳಾದ ಬಾಲರಾಜು ಹಾಗೂ ರಮೇಶ್ ಎಂಬುವವರು ನಾಪತ್ತೆಯಾಗಿದ್ದು, ಇವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ. ಕಾರ್ಯಾಚರಣೆಯ ನೇತೃತ್ವವನ್ನು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಿವಶಂಕರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಣೇಶ್ ವಹಿಸಿದ್ದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications