Get Updates
Get notified of breaking news, exclusive insights, and must-see stories!

ಜಲಸಮಾಧಿ: ಮಂಡ್ಯದ ಏಳು ಜನರಿಗೆ ಪರಿಹಾರ

ಬೆಂಗಳೂರು, ಜೂನ್ 15: ನಿನ್ನೆ ಕರಾಳ ಭಾನುವಾರ ಆಗಿದ್ದ ಮಂಡ್ಯ ಜಿಲ್ಲೆಯಲ್ಲಿ ಅಕಾಲಿಕ ಮರಣ ಹೊಂದಿದ್ದವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರಿಹಾರ ಘೋಷಣೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಜೂನ್ 14 ರಂದು ಜಲಸಮಾಧಿಯಾದ ಏಳು ಮಂದಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒಟ್ಟು 22 ಲಕ್ಷ ರೂ.ಗಳ ಪರಿಹಾರವನ್ನು ಒದಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.

Mandya: CM BS Yeddyurappa announces relief for 7 people who died by drowned in the water

ನಾಗಮಂಗಲ ತಾಲ್ಲೂಕಿನ ಬೀರನಹಳ್ಳಿಯ ಗೀತಾ, ಕು. ಸವಿತಾ ಹಾಗೂ ಕು. ಸೌಮ್ಯ ಅವರಿಗೆ ತಲಾ 5 ಲಕ್ಷ ರೂ. ಗಳು ಹಾಗೂ ಅದೇ ತಾಲೂಕಿನ ಚೋಳಸಂದ್ರ ಗ್ರಾಮದ ಕು. ರಶ್ಮಿ ಮತ್ತು ಕು.ಇಂಚರಾ, ಕೆ.ಆರ್. ಪೇಟೆ ತಾಲ್ಲೂಕಿನ ಹುಳಿಗಂಗನಹಳ್ಳಿಯ ಬಾಲಕ ಅಭಿಷೇಕ್ ಮತ್ತು ಆದಿಹಳ್ಳಿಯ ಕುಮಾರ್ ಅವರುಗಳಿಗೆ ತಲಾ 2 ಲಕ್ಷ ರೂ.ಗಳನ್ನು ಪರಿಹಾರ ನಿಧಿಯಿಂದ ತುರ್ತಾಗಿ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಪರಿಹಾರವನ್ನು ಸಿಎಂ ಘೋಷಣೆ ಮಾಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+