ಮಂಡ್ಯ ಕಾಂಗೈ ಭಿನ್ನಮತ: ಅಭಿಮಾನಿ ಕಾಲು ಮುರಿತ
ಮಂಡ್ಯ, ಏ.5: ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಮತ್ತೆ ಭುಗಿಲೆದ್ದಿದೆ. ಜಿಲ್ಲೆಯಲ್ಲಿ ಎಲ್ಲವೂ ಸರಿಯಿದೆ ಎಂದು ಹೇಳುವ ಕಾಂಗ್ರೆಸ್ನಲ್ಲಿ ಏನೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಜಗಜ್ಜಾಹೀರಾಗಿದೆ. ಅದೂ ಅಭ್ಯರ್ಥಿ ರಮ್ಯಾ ಅವರೆದುರೇ ಈ ಎಡವಟ್ಟುಗಳು ನಡೆದಿವೆ. ಈ ಮಧ್ಯೆ, ಅಂಬರೀಷ್ ಅಂಕಲ್ ಪ್ರಚಾರಕ್ಕೆ ಬರುವುದು ಗ್ಯಾರಂಟಿ ಎಂದು ರಮ್ಯಾ ಸ್ಪಷ್ಟಪಡಿಸಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಂಸದೆ ರಮ್ಯಾ ಅವರು ಇಂದು ಮಂಡ್ಯ ತಾಲೂಕಿನ ಬೇಲೂರು ಗ್ರಾಮದಲ್ಲಿ ಪ್ರಚಾರದಲ್ಲಿ ತೊಡಗಿದ್ದರು. ತೆರೆದ ವಾಹನದಲ್ಲಿ ರೋಡ್ ಶೋ ಮೂಲಕ ಪ್ರಚಾರ ನಡೆಸುತ್ತಿದ್ದರು.

ರವೀಂದ್ರ ಶ್ರೀಕಂಠಯ್ಯ ವರ್ಸಸ್ ಲಿಂಗರಾಜು
ಆ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ರವೀಂದ್ರ ಶ್ರೀಕಂಠಯ್ಯ ಅವರು ರಮ್ಯಾ ಅವರಿಗೆ ಪ್ರಚಾರದಲ್ಲಿ ಸಾಥ್ ನೀಡಿದ್ದರು. ಆದರೆ ಅದೇ ವೇಳೆ ಸ್ಥಳಕ್ಕೆ ಆಗಮಿಸಿದ ಶ್ರೀರಂಗಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್ ಎಲ್ ಲಿಂಗರಾಜು ಅವರೂ ಪ್ರಚಾರದ ವಾಹನವನ್ನು ಹತ್ತಲು ಪ್ರಯತ್ನಿಸಿದರು.

ಲಿಂಗರಾಜುರನ್ನು ಕೆಳಕ್ಕೆ ತಳ್ಳಿದ ಶ್ರೀಕಂಠಯ್ಯ
ತಕ್ಷಣ ರವೀಂದ್ರ ಶ್ರೀಕಂಠಯ್ಯ ಅವರು ಯಾರೂ ವಾಹನವನ್ನು ಹತ್ತ ಬಾರದು ಎಂದು ಲಿಂಗರಾಜು ಅವರನ್ನು ಕೆಳಕ್ಕೆ ತಳ್ಳಿದ್ದಾರೆ. ಈ ಸಂದರ್ಭ ಎರಡೂ ಬಣಗಳ ನಡುವೆ ಮಾತಿನ ಚಕಮಕಿ ನಡೆದು ತಳ್ಳಾಟ, ನೂಕಾಟ ಪ್ರಾರಂಭವಾಗಿದೆ.

ಲಿಂಗರಾಜುಗೆ ಪಕ್ಕದಲ್ಲೇ ನಿಂತುಕೊಳ್ಳುವಂತೆ ಸೂಚಿಸಿದ ರಮ್ಯಾ
ಸುಮಾರು 20 ನಿಮಿಷಗಳು ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಇನ್ನೇನು ಪರಿಸ್ಥಿತಿ ಕೈಮೀರುತ್ತಿದೆ ಅನ್ನುವಾಗ ಮಧ್ಯೆ ಪ್ರವೇಶಿಸಿದ ಹಿರಿಯ ಮುಖಂಡರು ಹಾಗೂ ಜಿಲ್ಲಾಧ್ಯಕ್ಷ ಎಂಎಸ್ ಆತ್ಮಾನಂದ ಅವರು ಇಬ್ಬರನ್ನೂ ಸಮಾಧಾನಪಡಿಸಿದರು. ಇದರಿಂದ ತೀವ್ರ ಮುಜುಗರಕ್ಕೀಡಾದ ರಮ್ಯಾ ಸಹ ಲಿಂಗರಾಜು ಅವರನ್ನು ಸಮಧಾನಪಡಿಸಿ, ತಮ್ಮ ಪಕ್ಕದಲ್ಲೇ ನಿಂತುಕೊಳ್ಳುವಂತೆ ಸೂಚಿಸಿದರು.

ಪ್ರಚಾರದ ವಾಹನ ಡಿಕ್ಕಿಯಾಗಿ ಅವಾಂತರ
ಬಳಿಕ, ಪ್ರಚಾರ ಶಾಂತಿಯುತವಾಗಿ ಮುಂದುವರಿಯತೊಡಗಿತು. ಆಗಲೇ, ರಸ್ತೆ ಬದಿ ನಿಂತಿದ್ದ ಗ್ರಾಮದ ಶ್ರೀನಿವಾಸ್ ಎಂಬುವವರಿಗೆ ಪ್ರಚಾರದ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗಳಾಗಿವೆ. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯ್ತು. ರಮ್ಯಾ ಸಹ ಗಾಯಾಳುವನ್ನು ವಿಚಾರಿಸಿಕೊಂಡರು.

ಗಿರೀಶ್ ಕಾರ್ನಾಡ್, ಮರುಳಸಿದ್ದಯ್ಯ ಪ್ರಚಾರಕ್ಕೆ -ರಮ್ಯಾ
ಮತ್ತೆ ಪ್ರಚಾರ ಪ್ರಾರಂಭವಾಯಿತು. ಮಧ್ಯೆ, ಮಾಧ್ಯಮದವರ ಜತೆ ಮಾತನಾಡಿದ ಸಂಸದೆ ರಮ್ಯಾ ಅವರು ಇಂದು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಗಿರೀಶ್ ಕಾರ್ನಾಡ್, ಮರುಳಸಿದ್ದಯ್ಯ ಸೇರಿದಂತೆ ಹಲವಾರು ಹಿರಿಯ ಸಾಹಿತಿಗಳು ಪ್ರಚಾರಕ್ಕೆ ಬರುತ್ತಾರೆ ಎಂದು ತಿಳಿಸಿದರು.

ಅಂಬರೀಷ್ ಅಂಕಲ್ ಪ್ರಚಾರಕ್ಕೆ ಬರ್ತಾರೆ- ರಮ್ಯಾ
ತಮ್ಮ ಪರವಾಗಿ ಅಂಬರೀಷ್ ಅಂಕಲ್ ಅವರು ಪ್ರಚಾರ ಕಾರ್ಯಕ್ಕೆ ಬರುತ್ತಿದ್ದು, ಏಪ್ರಿಲ್ 14ರ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ನಟಿ/ ಸಂಸದೆ ರಮ್ಯಾ ಸ್ಪಷ್ಟಪಡಿಸಿದರು.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications