'ಪರಿಷತ್ ಚುನಾವಣೆಗೆ ರಮ್ಯಾಗೆ ಟಿಕೆಟ್ ಕೊಡಬೇಡಿ'
ಮಂಡ್ಯ, ನವೆಂಬರ್ 26 : 'ವಿಧಾನಪರಿಷತ್ ಚುನಾವಣೆಯಲ್ಲಿ ಮಾಜಿ ಸಂಸದೆ ರಮ್ಯಾ ಅವರಿಗೆ ಟಿಕೆಟ್ ನೀಡಬಾರದು. ಪಕ್ಷದ ಕಾರ್ಯಕರ್ತರು ಕೇವಲ ಬ್ಯಾನರ್ ಕಟ್ಟಿಕೊಂಡು ಇರುವುದಲ್ಲ ಅವರಿಗೂ ಅಧಿಕಾರ ಸಿಗಬೇಕು' ಎಂದು ಕಾಂಗ್ರೆಸ್ ಮುಖಂಡ ಭಾಸ್ಕರ್ ಅಂಬರೀಶ್ ಹೇಳಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಶ್ರೀರಂಗಪಟ್ಟಣದ ಕಾಂಗ್ರೆಸ್ ಮುಖಂಡ ಭಾಸ್ಕರ್ ಅಂಬರೀಶ್ ಅವರು,'ರಮ್ಯಾ ಅವರಿಗೆ ಈಗಾಗಲೇ ಲೋಕಸಭೆ ಚುನಾವಣೆಯಲ್ಲಿ 2 ಬಾರಿ ಟಿಕೆಟ್ ನೀಡಲಾಗಿದೆ. ಆದ್ದರಿಂದ ಈ ಬಾರಿ ಪರಿಷತ್ ಚುನಾವಣೆಯಲ್ಲಿ ಅವರ ಬದಲು ನನಗೆ ಟಿಕೆಟ್ ನೀಡಬೇಕು' ಎಂದು ಒತ್ತಾಯಿಸಿದರು. [ಎಂಎಲ್ಸಿ ಚುನಾವಣೆ ಲಾಬಿ, ರಮ್ಯಾ ಹೆಸರು ಐತೇನ್ರಿ!]

'ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಪಕ್ಷದಲ್ಲಿ ಒಬ್ಬರಿಗೆ ಒಂದು ಬಾರಿ ಅಧಿಕಾರ ಕೊಟ್ಟ ನಂತರ ಮತ್ತೆ ಅವರಿಗೆ ಟಿಕೆಟ್ ಕೊಡುವುದಿಲ್ಲ ಎನ್ನುವ ನಿಯಮವಿದೆ. ಎರಡು ಬಾರಿ ಚುನಾವಣೆಯಲ್ಲಿ ನಾನು ರಮ್ಯ ಅವರ ಪರವಾಗಿ ಕೆಲಸ ಮಾಡಿದ್ದೇನೆ. ಮತ್ತೆ ಅವರಿಗೆ ಅವಕಾಶ ನೀಡುವುದು ಬೇಡ' ಎಂದು ಭಾಸ್ಕರ್ ಹೇಳಿದ್ದಾರೆ. [ಪರಿಷತ್ ಚುನಾವಣೆ ವೇಳಾಪಟ್ಟಿ ಪ್ರಕಟ]
'ಪಕ್ಷದ ಕಾರ್ಯಕರ್ತರು ಕೇವಲ ಬ್ಯಾನರ್ ಕಟ್ಟಲು ಸೀಮಿತಗೊಳ್ಳಬಾರದು. ಅವರಿಗೂ ಅಧಿಕಾರ ಸಿಗಬೇಕು, ನಾಯಕರು ಕಾರ್ಯಕರ್ತರಿಗೆ ಅವಕಾಶ ನೀಡಬೇಕು. ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆತ್ಮಾನಂದ ಅಥವ ತಮಗೆ ಎಂಎಲ್ಸಿ ಟಿಕೆಟ್ ನೀಡಬೇಕು' ಎಂದು ಭಾಸ್ಕರ್ ತಿಳಿಸಿದ್ದಾರೆ. [ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮ]
ಅಂದಹಾಗೆ ಶಿಕ್ಷಕರ, ಪದವೀಧರರ ಕ್ಷೇತ್ರಗಳು ಹಾಗೂ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯರ ಆಯ್ಕೆಗೆ ನಡೆಯುವ ಚುನಾವಣೆಯ ವೇಳಾಪಟ್ಟಿ ಪ್ರಕಟಗೊಂಡಿದೆ. ಡಿಸೆಂಬರ್ 27ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
'ವಿಧಾನಪರಿಷತ್ ಟಿಕೆಟ್ ಹಂಚಿಕೆ ಮಾಡುವಾಗ ತಮಗೂ ಪ್ರಾತಿನಿಧ್ಯ ನೀಡಬಹುದು' ಎಂದು ಮಾಜಿ ಸಂಸದೆ ರಮ್ಯಾ ಅವರು ಕೆಲವು ದಿನಗಳ ಹಿಂದೆ ಹೇಳಿದ್ದರು. ಆದ್ದರಿಂದ ಮಂಡ್ಯ ಕಾಂಗ್ರೆಸ್ನಲ್ಲಿ ಅಸಮಾಧಾನದ ಹೊಗೆ ಎದ್ದಿದ್ದು, ರಮ್ಯಾ ಅವರಿಗೆ ಟಿಕೆಟ್ ನೀಡಬೇಡಿ ಎಂಬ ಕೂಗು ಎದ್ದಿದೆ.
-
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ












Click it and Unblock the Notifications