Soldier Janardhan Gowda: ಮಂಡ್ಯ ಯೋಧ ಛತ್ತೀಸ್‌ಗಢದಲ್ಲಿ ಸಾವು, ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ

ಮಂಡ್ಯ, ಜೂನ್ 23: ಭೂಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಕರ್ನಾಟಕದ ಯೋಧರೊಬ್ಬರು ಚಿಕಿತ್ಸೆಗೆ ಫಲಿಸದೇ ಮೃತಪಟ್ಟ ಘಟನೆ ನಡೆದಿದೆ.

ಭೂಸೇನೆಯಲ್ಲಿ ಯೋಧನಾಗಿದ್ದ ಜನಾರ್ಧನ ಗೌಡ ಮೃತಪಟ್ಟಿದ್ದಾರೆ. ಮೃತ ಯೋಧ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದವರು ಎಂದು ತಿಳಿದು ಬಂದಿದೆ. ಅವರು ಕೆಲವು ರ್ಷಗಳಿಂದ ಛತ್ತೀಸ್‌ಗಢದಲ್ಲಿ ನಿಯೋಜನೆಗೊಂಡಿದ್ದರು.

Mandya District Soldier Janardhan Gowda Death Due To Ill Health In Chhattisgarh

ಎಂದಿನಂತೆ ತಮ್ಮ ಕೆಲಸದಲ್ಲಿ ನಿರತಾಗಿದ್ದ ಯೋಧ ಜನಾರ್ಧನ ಗೌಡ ಅವರಿಗೆ ಕಳೆದೊಂದು ವಾರದಿಂದ ಆರೋಗ್ಯದಲ್ಲಿ ಏರು ಪೇರಾಗಿತ್ತು. ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರಿಂದ ಅವರನ್ನು ಛತ್ತೀಸ್‌ಗಢದ ಆಸ್ಪತ್ರೆಗೆಗೆ ದಾಖಲಾಗಿತ್ತು. ಚಿಕಿತ್ಸೆ ನೀಡುವ ಹಂತದಲ್ಲಿಯೇ ಅವರು ಉಸಿರು ಚೆಲ್ಲಿದ್ದಾರೆ.

ಸದ್ಯ ಮೃತ ಯೋಧನ ಪಾರ್ಥಿವ ಶರೀರವನ್ನು ಜೂನ್ 24ರಂದು ಶನಿವಾರ ಮಧ್ಯಾಹ್ನ ಮಂಡ್ಯ ಜಿಲ್ಲೆಯ ಸ್ವಗ್ರಾಮಕ್ಕೆ ಛತ್ತೀಸ್‌ಗಢದಿಂದ ಬರಲಿದೆ. ಅಂದು ಸಂಜೆ ಕಿಕ್ಕೇರಿ ಗ್ರಾಮದಲ್ಲಿ ಸಕಲ ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ ಜರುಗಲಿದೆ ಎಂದು ಮೂಲಗಳು ತಿಳಿಸಿವೆ.

ಮೃತ ಯೋಧ ಜನಾರ್ದನ ಗೌಡ ಅವರು ಕಳೆದ ಸುಮಾರು 11 ವರ್ಷಗಳಿಂದ ಭೂಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಐದು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದ ಜನಾರ್ದನ ಗೌಡ ದಂಪತಿಗೆ 4 ವರ್ಷದ ಪುತ್ರಿ ಇದ್ದಾಳೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+