ARAI: ಮಂಡ್ಯದಲ್ಲಿ 100 ಎಕರೆ ಭೂಮಿ ಲಭ್ಯವಿದ್ದು ಪರಿಶೀಲನೆಗೆ ಬನ್ನಿ: ಎಚ್ಡಿಕೆಗೆ ಎಂಬಿ ಪಾಟೀಲ್ ಪತ್ರ
ಮಂಡ್ಯ: ಜಿಲ್ಲೆಯಲ್ಲಿ ದೇಶದ ಪ್ರಪ್ರಥಮ ನಿರ್ಮಾಣ ಕಾಮಗಾರಿ ಮತ್ತು ಮೂಲಸೌಕರ್ಯ ಸಾಧನ ಪರೀಕ್ಷಾ ಮೂಲಸೌಕರ್ಯ ಸ್ಥಾವರ ನಿರ್ಮಾಣಕ್ಕೆ ಜಾಗ ನೀಡುತ್ತಿಲ್ಲ ಎಂದು ರಾಜ್ಯ ಸರ್ಕಾರದ ಮೇಲೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೆ 100ಕ್ಕೂ ಅಧಿಕ ಎಕರೆ ಭೂಮಿ ಲಭ್ಯವಿದೆ ಎಂದು ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರ ಪತ್ರ ಬರೆದಿದ್ದಾರೆ.
ತಾವು ಮಂಡ್ಯ ಜಿಲ್ಲೆಯಲ್ಲಿ ಅಪೇಕ್ಷಿಸಿದ್ದ 100 ಎಕರೆ ಜಮೀನು ಲಭ್ಯವಿದೆ. ಈ ಸಂಬಂಧ ಭಾರತೀಯ ಆಟೋಮೋಟೀವ್ ಸಂಶೋಧನಾ ಒಕ್ಕೂಟಕ್ಕೆ (ಎ.ಆರ್.ಎ.ಐ) ಸೂಕ್ತ ನಿರ್ದೇಶನ ನೀಡಿ, ಯೋಜನಾ ಪ್ರಸ್ತಾವನೆ ಕಳುಹಿಸಿಕೊಡಲು ಸೂಚಿಸಬೇಕು ಎಂದು ಪತ್ರದಲ್ಲಿ ಎಂಬಿ ಪಾಟೀಲರು ತಿಳಿಸಿದ್ದಾರೆ.

ಕುಮಾರಸ್ವಾಮಿ ಅವರು ಈ ಸಂಬಂಧವಾಗಿ ಜನವರಿ 8 ರಂದು ಬರೆದಿದ್ದ ಪತ್ರಕ್ಕೆ ಸೋಮವಾರ ಉತ್ತರಿಸಿರುವ ಪಾಟೀಲರು, ಮಂಡ್ಯ ತಾಲ್ಲೂಕಿನ ಬಸರಾಳು ಹೋಬಳಿಯ ಮುದ್ದನಘಟ್ಟ ಮತ್ತು ಹೆಗ್ಗಡಿತಿಹಳ್ಳಿ ವ್ಯಾಪ್ತಿಯಲ್ಲಿ 105 ಎಕರೆ ಸರಕಾರಿ ಭೂಮಿ ಲಭ್ಯವಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಈ ಭೂಮಿಯು ಮಂಡ್ಯ-ನಾಗಮಂಗಲ ರಾಜ್ಯ ಹೆದ್ದಾರಿಯಿಂದ ಕೇವಲ 500 ಮೀಟರ್ ದೂರದಲ್ಲಿದೆ ಎಂದರು.
ಜಾಗ ಪರಿಶೀಲನೆ ನಡೆಸಲು ಆಹ್ವಾನ
ಉದ್ದೇಶಿತ ಸ್ಥಾವರ ಸ್ಥಾಪಿಸಲು ನೀವು ಕೇಳಿದ್ದಕ್ಕಿಂತ ಹೆಚ್ಚಿನ ಭೂಮಿ ಇದೆ. ಆದ್ದರಿಂದ ಎ.ಆರ್.ಎ.ಐ. ಪ್ರತಿನಿಧಿಗಳು ಮತ್ತು ನಿಮ್ಮ ಸಚಿವಾಲಯದ ತಂಡ ಎರಡೂ ರಾಜ್ಯಕ್ಕೆ ಭೇಟಿ ನೀಡಬೇಕು. ಈ ಭೂಮಿಯು ತಮಗೆ ಸೂಕ್ತವಾಗಿದೆಯೇ ಎನ್ನುವುದನ್ನು ನಿರ್ಧರಿಸಲು ಜಂಟಿ ಪರಿಶೀಲನೆ ನಡೆಸುವಂತೆ ತ್ವರಿತವಾಗಿ ಸೂಚಿಸಬೇಕು. ಇದು ಸೂಕ್ತವಾಗಿದೆ ಎನಿಸಿದರೆ, ನಂತರ ಇದನ್ನು ಉದ್ದೇಶಿತ ಸ್ಥಾವರ ಸ್ಥಾಪನೆಗೆ ಮಂಜೂರು ಮಾಡಲಾಗುವುದು. ಈ ಸಂಬಂಧವಾಗಿ ಎ.ಆರ್.ಎ.ಐ. ಒಕ್ಕೂಟವು ರಾಜ್ಯ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್ ಅವರೊಂದಿಗೆ ನೇರವಾಗಿ ವ್ಯವಹರಿಸಬಹುದು ಎಂದು ಪಾಟೀಲರು ಮಾಹಿತಿ ನೀಡಿದ್ದಾರೆ.
ಈ ಯೋಜನೆಯ ಪ್ರಮುಖಾಂಶಗಳು
* ಯೋಜನೆ: ಕಾಮಗಾರಿ ಮತ್ತು ಮೂಲಸೌಕರ್ಯ ಸಾಧನ ಪರೀಕ್ಷಾ ಮೂಲಸೌಕರ್ಯ ಸ್ಥಾವರ
* ಸ್ಥಳ: ಮಂಡ್ಯ ಜಿಲ್ಲೆಯ ಬಸರಾಳು ಹೋಬಳಿ (ಮಂಡ್ಯ-ನಾಗಮಂಗಲ ರಾಜ್ಯ ಹೆದ್ದಾರಿಗೆ ಕೇವಲ 500 ಮೀ. ದೂರ).
* ಭೂಮಿ: ಕೇಂದ್ರ ಕೇಳಿದ್ದು 100 ಎಕರೆ, ರಾಜ್ಯ ಸರ್ಕಾರ 105 ಎಕರೆ ಭೂಮಿ ನೀಡಲು ಸಿದ್ಧ
* ಹೂಡಿಕೆ: ₹500 ಕೋಟಿ ವೆಚ್ಚದ ಅತಿ ಆಧುನಿಕ ಟೆಸ್ಟಿಂಗ್, ವ್ಯಾಲಿಡೇಶನ್ ಮತ್ತು ಪ್ರಮಾಣೀಕರಣ ಕೇಂದ್ರ
* ಮಂಡ್ಯ ಜಿಲ್ಲೆಯ ಅಭಿವೃದ್ಧಿಯಲ್ಲಿ ಇದೊಂದು ಮೈಲಿಗಲ್ಲು!
* ವಿಶೇಷತೆ: ನಿರ್ಮಾಣ ಮತ್ತು ಮೂಲಸೌಕರ್ಯ ಉಪಕರಣ ಕ್ಷೇತ್ರಕ್ಕೆ ದೇಶದಲ್ಲೇ ಮೊದಲ ಸಮರ್ಪಿತ ಕೇಂದ್ರ ಇದಾಗಲಿದೆ.
* ಕೇಂದ್ರದ ತಂಡ ಹಾಗೂ ARAI ಪ್ರತಿನಿಧಿಗಳು ತಕ್ಷಣವೇ ಜಂಟಿ ಪರಿಶೀಲನೆ ನಡೆಸಲು ಆಹ್ವಾನ
* ವಿಶ್ವಮಟ್ಟದ ಮೂಲಸೌಕರ್ಯ ಹಾಗೂ ಉತ್ಪಾದನಾ ಶಕ್ತಿಯನ್ನು ಬಲಪಡಿಸಲು ನಮ್ಮ ಸರ್ಕಾರ ಬದ್ಧ
ದೇಶದ ಪ್ರ ಪ್ರಥಮ ARAI ಕೇಂದ್ರ ಸ್ಥಾಪನೆಗೆ ಮಂಡ್ಯ ಜಿಲ್ಲೆಯಲ್ಲಿ ಭೂಮಿ ನೀಡಲು ಸಿದ್ದ
— M B Patil (@MBPatil) February 10, 2026
ಕೇಂದ್ರ ಕೈಗಾರಿಕಾ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಪತ್ರ
ಕೇಂದ್ರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದು, ದೇಶದ ಪ್ರಪ್ರಥಮ ನಿರ್ಮಾಣ ಕಾಮಗಾರಿ ಹಾಗೂ ಮೂಲಸೌಕರ್ಯ ಸಾಧನ ಪರೀಕ್ಷಾ… pic.twitter.com/VUsHW3ibea
-
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ













Click it and Unblock the Notifications