ARAI: ಮಂಡ್ಯದಲ್ಲಿ 100 ಎಕರೆ ಭೂಮಿ ಲಭ್ಯವಿದ್ದು ಪರಿಶೀಲನೆಗೆ ಬನ್ನಿ: ಎಚ್ಡಿಕೆಗೆ ಎಂಬಿ ಪಾಟೀಲ್ ಪತ್ರ
ಮಂಡ್ಯ: ಜಿಲ್ಲೆಯಲ್ಲಿ ದೇಶದ ಪ್ರಪ್ರಥಮ ನಿರ್ಮಾಣ ಕಾಮಗಾರಿ ಮತ್ತು ಮೂಲಸೌಕರ್ಯ ಸಾಧನ ಪರೀಕ್ಷಾ ಮೂಲಸೌಕರ್ಯ ಸ್ಥಾವರ ನಿರ್ಮಾಣಕ್ಕೆ ಜಾಗ ನೀಡುತ್ತಿಲ್ಲ ಎಂದು ರಾಜ್ಯ ಸರ್ಕಾರದ ಮೇಲೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೆ 100ಕ್ಕೂ ಅಧಿಕ ಎಕರೆ ಭೂಮಿ ಲಭ್ಯವಿದೆ ಎಂದು ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರ ಪತ್ರ ಬರೆದಿದ್ದಾರೆ.
ತಾವು ಮಂಡ್ಯ ಜಿಲ್ಲೆಯಲ್ಲಿ ಅಪೇಕ್ಷಿಸಿದ್ದ 100 ಎಕರೆ ಜಮೀನು ಲಭ್ಯವಿದೆ. ಈ ಸಂಬಂಧ ಭಾರತೀಯ ಆಟೋಮೋಟೀವ್ ಸಂಶೋಧನಾ ಒಕ್ಕೂಟಕ್ಕೆ (ಎ.ಆರ್.ಎ.ಐ) ಸೂಕ್ತ ನಿರ್ದೇಶನ ನೀಡಿ, ಯೋಜನಾ ಪ್ರಸ್ತಾವನೆ ಕಳುಹಿಸಿಕೊಡಲು ಸೂಚಿಸಬೇಕು ಎಂದು ಪತ್ರದಲ್ಲಿ ಎಂಬಿ ಪಾಟೀಲರು ತಿಳಿಸಿದ್ದಾರೆ.

ಕುಮಾರಸ್ವಾಮಿ ಅವರು ಈ ಸಂಬಂಧವಾಗಿ ಜನವರಿ 8 ರಂದು ಬರೆದಿದ್ದ ಪತ್ರಕ್ಕೆ ಸೋಮವಾರ ಉತ್ತರಿಸಿರುವ ಪಾಟೀಲರು, ಮಂಡ್ಯ ತಾಲ್ಲೂಕಿನ ಬಸರಾಳು ಹೋಬಳಿಯ ಮುದ್ದನಘಟ್ಟ ಮತ್ತು ಹೆಗ್ಗಡಿತಿಹಳ್ಳಿ ವ್ಯಾಪ್ತಿಯಲ್ಲಿ 105 ಎಕರೆ ಸರಕಾರಿ ಭೂಮಿ ಲಭ್ಯವಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಈ ಭೂಮಿಯು ಮಂಡ್ಯ-ನಾಗಮಂಗಲ ರಾಜ್ಯ ಹೆದ್ದಾರಿಯಿಂದ ಕೇವಲ 500 ಮೀಟರ್ ದೂರದಲ್ಲಿದೆ ಎಂದರು.
ಜಾಗ ಪರಿಶೀಲನೆ ನಡೆಸಲು ಆಹ್ವಾನ
ಉದ್ದೇಶಿತ ಸ್ಥಾವರ ಸ್ಥಾಪಿಸಲು ನೀವು ಕೇಳಿದ್ದಕ್ಕಿಂತ ಹೆಚ್ಚಿನ ಭೂಮಿ ಇದೆ. ಆದ್ದರಿಂದ ಎ.ಆರ್.ಎ.ಐ. ಪ್ರತಿನಿಧಿಗಳು ಮತ್ತು ನಿಮ್ಮ ಸಚಿವಾಲಯದ ತಂಡ ಎರಡೂ ರಾಜ್ಯಕ್ಕೆ ಭೇಟಿ ನೀಡಬೇಕು. ಈ ಭೂಮಿಯು ತಮಗೆ ಸೂಕ್ತವಾಗಿದೆಯೇ ಎನ್ನುವುದನ್ನು ನಿರ್ಧರಿಸಲು ಜಂಟಿ ಪರಿಶೀಲನೆ ನಡೆಸುವಂತೆ ತ್ವರಿತವಾಗಿ ಸೂಚಿಸಬೇಕು. ಇದು ಸೂಕ್ತವಾಗಿದೆ ಎನಿಸಿದರೆ, ನಂತರ ಇದನ್ನು ಉದ್ದೇಶಿತ ಸ್ಥಾವರ ಸ್ಥಾಪನೆಗೆ ಮಂಜೂರು ಮಾಡಲಾಗುವುದು. ಈ ಸಂಬಂಧವಾಗಿ ಎ.ಆರ್.ಎ.ಐ. ಒಕ್ಕೂಟವು ರಾಜ್ಯ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್ ಅವರೊಂದಿಗೆ ನೇರವಾಗಿ ವ್ಯವಹರಿಸಬಹುದು ಎಂದು ಪಾಟೀಲರು ಮಾಹಿತಿ ನೀಡಿದ್ದಾರೆ.
ಈ ಯೋಜನೆಯ ಪ್ರಮುಖಾಂಶಗಳು
* ಯೋಜನೆ: ಕಾಮಗಾರಿ ಮತ್ತು ಮೂಲಸೌಕರ್ಯ ಸಾಧನ ಪರೀಕ್ಷಾ ಮೂಲಸೌಕರ್ಯ ಸ್ಥಾವರ
* ಸ್ಥಳ: ಮಂಡ್ಯ ಜಿಲ್ಲೆಯ ಬಸರಾಳು ಹೋಬಳಿ (ಮಂಡ್ಯ-ನಾಗಮಂಗಲ ರಾಜ್ಯ ಹೆದ್ದಾರಿಗೆ ಕೇವಲ 500 ಮೀ. ದೂರ).
* ಭೂಮಿ: ಕೇಂದ್ರ ಕೇಳಿದ್ದು 100 ಎಕರೆ, ರಾಜ್ಯ ಸರ್ಕಾರ 105 ಎಕರೆ ಭೂಮಿ ನೀಡಲು ಸಿದ್ಧ
* ಹೂಡಿಕೆ: ₹500 ಕೋಟಿ ವೆಚ್ಚದ ಅತಿ ಆಧುನಿಕ ಟೆಸ್ಟಿಂಗ್, ವ್ಯಾಲಿಡೇಶನ್ ಮತ್ತು ಪ್ರಮಾಣೀಕರಣ ಕೇಂದ್ರ
* ಮಂಡ್ಯ ಜಿಲ್ಲೆಯ ಅಭಿವೃದ್ಧಿಯಲ್ಲಿ ಇದೊಂದು ಮೈಲಿಗಲ್ಲು!
* ವಿಶೇಷತೆ: ನಿರ್ಮಾಣ ಮತ್ತು ಮೂಲಸೌಕರ್ಯ ಉಪಕರಣ ಕ್ಷೇತ್ರಕ್ಕೆ ದೇಶದಲ್ಲೇ ಮೊದಲ ಸಮರ್ಪಿತ ಕೇಂದ್ರ ಇದಾಗಲಿದೆ.
* ಕೇಂದ್ರದ ತಂಡ ಹಾಗೂ ARAI ಪ್ರತಿನಿಧಿಗಳು ತಕ್ಷಣವೇ ಜಂಟಿ ಪರಿಶೀಲನೆ ನಡೆಸಲು ಆಹ್ವಾನ
* ವಿಶ್ವಮಟ್ಟದ ಮೂಲಸೌಕರ್ಯ ಹಾಗೂ ಉತ್ಪಾದನಾ ಶಕ್ತಿಯನ್ನು ಬಲಪಡಿಸಲು ನಮ್ಮ ಸರ್ಕಾರ ಬದ್ಧ
ದೇಶದ ಪ್ರ ಪ್ರಥಮ ARAI ಕೇಂದ್ರ ಸ್ಥಾಪನೆಗೆ ಮಂಡ್ಯ ಜಿಲ್ಲೆಯಲ್ಲಿ ಭೂಮಿ ನೀಡಲು ಸಿದ್ದ
— M B Patil (@MBPatil) February 10, 2026
ಕೇಂದ್ರ ಕೈಗಾರಿಕಾ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಪತ್ರ
ಕೇಂದ್ರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದು, ದೇಶದ ಪ್ರಪ್ರಥಮ ನಿರ್ಮಾಣ ಕಾಮಗಾರಿ ಹಾಗೂ ಮೂಲಸೌಕರ್ಯ ಸಾಧನ ಪರೀಕ್ಷಾ… pic.twitter.com/VUsHW3ibea
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್













Click it and Unblock the Notifications