Manmul: ಹಾಲಿನ ದರ 1.7 ರೂ.ಕಡಿತ, ರೈತರಿಗೆ ಆತಂಕ
ಮಂಡ್ಯ, ಜುಲೈ 16: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (Manmul) ರೈತರಿಗೆ ಹಾಲಿನ ಕಡಿತ ದರದ ಶಾಕ್ ನೀಡಿದೆ. ಮನ್ಮುಲ್ ತಾನು ಖರೀದಿಸುವ ಹಾಲಿನ ದರದಲ್ಲಿ ಪ್ರತಿ ಲೀಟರ್ಗೆ 1.75 ರೂ. ಮತ್ತೆ ಕಡಿತಗೊಳಿಸಿ ಆದೇಶಿಸಿದೆ. ಈ ನೀರ್ಧಾರಕ್ಕೆ ರೈತರು ಅಸಮಧಾನ ಹೊರ ಹಾಕಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಿಂದ ಆಡಳಿತ ಮಂಡಳಿ ಸಭೆ ನಡೆದಿತ್ತು. ಈ ವೇಳೆ ರೈತರಿಂದ ಖರೀದಿ ಮಾಡುವ ಹಾಲಿನಲ್ಲಿ ಪ್ರತಿ ಲೀಟರ್ ಹಾಲಿನ ದರಕ್ಕೆ 1.75 ರೂಪಾಯಿ ಕಡಿತ ಮಾಡಲು ತೀರ್ಮಾನಿಸಿದೆ. ಈ ಪರಿಷ್ಕೃತ ದರ ಭಾನುವಾರ ಜುಲೈ 16 ರಿಂದಲೇ ಜಾರಿಗೆ ಬರಲಿದೆ.

ಮುಂಗಾರು ಮಳೆ ಉತ್ತಮವಾಗರುವುದರಿಂದ ದರ ಕಡಿತ ಮಾಡಲಾಗಿದೆ. ಹೀಗಾಗಿ ಮುಂದಿನ ಆದೇಶದವರೆಗೂ ಪರಿಷ್ಕೃತ ದರ ಮುಂದುವರಿಯಲಿದೆ ಎಂದು ಮನ್ಮುಲ್ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.
ಈ ಹಿಂದೆ ಪ್ರತಿ ಲೀಟರ್ ಹಾಲಿಗೆ 2 ರೂ. ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುತ್ತಿತ್ತು. ಆದರೆ ಇದೀಗ ಹಾಲಿನ ದರದಲ್ಲಿ ಕಡಿತ ಮಾಡಿದ ಪರಿಣಾಮ ರೈತರಿಗೆ/ಹಾಳುಉತ್ಪಾದಕರಿಗೆ ಪ್ರತಿ ಲೀಟರ್ಗೆ 32.25 ರೂಪಾಯಿ ಬದಲಿಗೆ 30.50 ರೂಪಾಯಿ ಸಿಗಲಿದೆ.
ಈ ಹಿಂದೆ 1 ರೂ. ಕಡಿತ ಮಾಡಿದ್ದ ಮನ್ಮುಲ್
ಹಿಂದಿನ ಜೂನ್ ತಿಂಗಳಲ್ಲಿ ಮನ್ಮೂಲ್ ಪ್ರತಿ ಲೀಟರ್ ಹಾಲಿನ ಖರೀದಿ ದರದಲ್ಲಿ 1 ರೂಪಾಯಿ ಇಳಿಕೆ ಮಾಡಿ ಆದೇಶಿಸಿತ್ತು. ಈ ನಿರ್ಧಾರವನ್ನು ಅಂದು ಮೇ.26ರಂದು ನಡೆದಿದ್ದ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಿತ್ತು. ರಾಜ್ಯ ಸರ್ಕಾರ ಈ ಹಿಂದೆ ಬರಗಾಲ, ಮಳೆ ಕೊರತೆ, ಬೇಸಿಗೆ ಕರಣದಿಂದಾಗಿ ಹಾಲು ಒಕ್ಕೂಟಗಳಿಗೆ ಪ್ರತಿ ಲೀಟರ್ ಖರೀದಿ ದರಕ್ಕೆ 02 ರೂಪಾಯಿ ಪ್ರೋತ್ಸಾಹ ಧನ ನೀಡುವಂತೆ ಸೂಚಿಸಿತ್ತು.

ಅದರಂತೆ ಮನ್ಮುಲ್ 2 ರೂಪಾಯಿ ಹೆಚ್ಚಳ ಮಾಡಿತ್ತು. ಕಾರಣ ಆಗ ಮೇವಿನ ಕೊರತೆ, ಹಸಿರು ಹುಲ್ಲು ದೊರಕದ ಸ್ಥಿತಿ ಇತ್ತು. ಅಲ್ಲದೇ ಧನಕರುಗಳ ಹಿಂಡಿ, ಬೂಸಾ ಆಹಾರ ಪದಾರ್ಥಗಳ ದರ ಹೆಚ್ಚಿದ್ದರಿಂದ ಹಾಲಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ಇದೀಗ ಉತ್ತಮ ಮಳೆ ಆಗಿದ್ದಕ್ಕೆ ದರ ಇಳಿಕೆ ಮಾಡಲಾಗಿದೆ ಎಂದು ಮಂಡ್ಯ ಮನ್ಮುಲ್ ತಿಳಿಸಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು











Click it and Unblock the Notifications