ಅಧ್ಯಯನ ಪ್ರವಾಸ ಹೊರಟ ಮಂಡ್ಯ ನಗರ ಸಭೆ ಸದಸ್ಯರು
ಮಂಡ್ಯ, ಆಗಸ್ಟ್ 18 : ಬರಗಾಲ ಮತ್ತು ರೈತರ ಸರಣಿ ಆತ್ಮಹತ್ಯೆ ನಡುವೆಯೇ ಮಂಡ್ಯ ನಗರ ಸಭೆಯ ಸದಸ್ಯರು ಅಧ್ಯಯನ ಪ್ರವಾಸಕ್ಕಾಗಿ ಗುಜರಾತ್ಗೆ ಭೇಟಿ ನೀಡಲಿದ್ದಾರೆ. ಸುಮಾರು 12 ಲಕ್ಷ ರೂ.ವೆಚ್ಚದಲ್ಲಿ ನಾಲ್ಕು ದಿನದ ಪ್ರವಾವನ್ನು ಕೈಗೊಳ್ಳಲಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಇದುವರೆಗೂ 40ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ ತಾಲೂಕನ್ನು ಬರಪೀಡಿತ ಎಂದು ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಇವುಗಳ ನಡುವೆಯೇ ನಗರಸಭೆ ಸದಸ್ಯರು ಅಧ್ಯಯನ ಪ್ರವಾಸ ಹೊರಟಿದ್ದಾರೆ. [ಕೈಕೊಟ್ಟ ಮುಂಗಾರು, KRSನಲ್ಲಿ ಎಷ್ಟು ನೀರಿದೆ?]

ಕೆಲವು ದಿನಗಳ ಹಿಂದೆ ನಡೆದ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ಯಾವುದೇ ಒಬ್ಬ ಸದಸ್ಯರು ಪ್ರವಾಸ ಬೇಡ ಎಂದು ವಿರೋಧಿಸಿಲ್ಲ. ಸಾಮಾನ್ಯ ಸಭೆಯ ನಿರ್ಣಯಕ್ಕೆ ಸರ್ಕಾರ ಕೂಡ ಒಪ್ಪಿಗೆ ನೀಡಿದ್ದು, 12. 5 ಲಕ್ಷ ರೂ. ಖರ್ಚು ಮಾಡಿ ಪ್ರವಾಸ ಹೋಗಲು ಒಪ್ಪಿಗೆ ನೀಡಿದೆ. [ಬರಪೀಡಿತ ತಾಲೂಕುಗಳ ಪಟ್ಟಿ]
ಸಮಯವನ್ನು ಉಳಿತಾಯ ಮಾಡಲು ವಿಮಾನದ ಮೂಲಕ ಪ್ರಯಾಣಿಸುವಂತೆ ಟ್ರಾವೆಲ್ ಏಜೆಂಟ್ಗಳು ಸದಸ್ಯರಿಗೆ ಸಲಹೆ ನೀಡಿದ್ದಾರೆ. ಒಟ್ಟು ನಾಲ್ಕು ದಿನಗಳ ಪ್ರವಾಸದಲ್ಲಿ ಸದಸ್ಯರು ಎರಡು ದಿನ ಅಧ್ಯಯನ ನಡೆಸಲಿದ್ದು, ಉಳಿದ ಎರಡು ದಿನ ಗುಜರಾತ್ ಸುತ್ತಮುತ್ತಲಿನ ಸ್ಥಳಗಳನ್ನು ವೀಕ್ಷಣೆ ಮಾಡಲಿದ್ದಾರೆ.
ಆ.22ರಂದು ಮಂಡ್ಯ ಬಂದ್ಗೆ ಕರೆ : ರೈತರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿ ಜನಪರ ಕ್ರಿಯಾ ವೇದಿಕೆ ಆ. 22ರಂದು ಮಂಡ್ಯ ನಗರ ಬಂದ್ಗೆ ಕರೆ ನೀಡಿದೆ.
ಈ ಕುರಿತು ಮಾಹಿತಿ ನೀಡಿರುವ ವೇದಿಕೆಯ ಎಂ.ಬಿ. ನಾಗಣ್ಣಗೌಡ ಅವರು, ಮಂಡ್ಯ ಜಿಲ್ಲೆಯಲ್ಲಿ 40ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ನೆರವಿಗೆ ಬರುವಂತಹ ಪರಿಣಾಮಕಾರಿ ಕ್ರಮಗಳನ್ನು ಸರ್ಕಾರಗಳು ಕೈಗೊಂಡಿಲ್ಲ. ಆದ್ದರಿಂದ ಬಂದ್ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications