ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ಚಾಲನೆ
ಮಂಡ್ಯ, ಮಾರ್ಚ್ 13: ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ಐತಿಹಾಸಿಕ ಚೆಲುವನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ವೈರಮುಡಿ ಬ್ರಹ್ಮೋತ್ಸವಕ್ಕೆ ಭರದ ಸಿದ್ಧತೆ ನಡೆದಿದೆ. ನೆರೆಯ ಮೈಸೂರಿನಲ್ಲಿ ನಡೆಯುವ ದಸರಾ ಉತ್ಸವದ ನಂತರ ಹೆಚ್ಚು ಜನಮನ್ನಣೆ ಗಳಿಸಿರುವ, ಭಕ್ತಿಭಾವದ ಬ್ರಹ್ಮೋತ್ಸವ ಇದಾಗಿದೆ. ಕಾವೇರಿ ತಟದಲ್ಲಿರುವ ತಿರುನಾರಾಯಣಪುರಂ ಬಳಿ ಯದುಗಿರಿ, ಯಾದವಗಿರಿ, ಯದುಶೈಲದ್ವೀಪ ಬೆಟ್ಟದ ಮೇಲೆ ನೆಲೆಸಿರುವ ಈ ದೇವಸ್ಥಾನವಿದೆ.
ಮೇಲುಕೋಟೆಯಲ್ಲಿ ನಡೆಯುವ ವೈರಮುಡಿ ಬ್ರಹ್ಮೋತ್ಸವದ ಅಂಗವಾಗಿ ಇಂದು ಗುರುವಾರ ಮಂಡ್ಯದ ಜಿಲ್ಲಾ ಖಜಾನೆಯಿಂದ ವೈರಮುಡಿ ಮತ್ತು ರಾಜಮುಡಿಯನ್ನು ಮೇಲುಕೋಟೆಗೆ ಕೊಂಡೊಯ್ಯಲಾಯಿತು. ಇಂದು ಬೆಳಗ್ಗೆ 7.30ರಲ್ಲಿ ಜಿಲ್ಲಾ ಖಜಾನೆಯಿಂದ ನೂತನ ಜಿಲ್ಲಾಧಿಕಾರಿ ಡಾ. ಎಂಎನ್ ಅಜಯ್ ನಾಗಭೂಷಣ್ ಅವರ ಸಮ್ಮುಖದಲ್ಲಿ ರಾಜಮುಡಿ ಮತ್ತು ವೈರಮುಡಿಯನ್ನು ಹೊರ ತೆಗೆಯಲಾಯ್ತು.
ಸುಪ್ರಸಿದ್ದ ಮೇಲುಕೋಟೆ ಚಲುವನಾರಾಯಣ ಸ್ವಾಮಿಯ ವೈರಮುಡಿ ಬ್ರಹ್ಮೋತ್ಸವ ಇಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಖಜಾನೆಯಲ್ಲಿರಿಸಲಾಗಿದ್ದ ರಾಜಮುಡಿ ಮತ್ತು ವೈರಮುಡಿಯನ್ನು ಇಂದು ಮೇಲುಕೋಟೆಗೆ ತರಲಾಗಿದೆ.

ನೂತನ ಜಿಲ್ಲಾಧಿಕಾರಿ ಸಮಕ್ಷಮದಲ್ಲಿ ಪ್ರಥಮ ಪೂಜೆ
ಜಿಲ್ಲಾಧಿಕಾರಿಗಳ ಸಮಕ್ಷಮದಲ್ಲಿ ಜಿಲ್ಲಾ ಖಜಾನೆಯಲ್ಲಿ ರಾಜಮುಡಿ ಮತ್ತು ವೈರಮುಡಿಗೆ ಪ್ರಥಮ ಪೂಜೆ ಸಲ್ಲಿಸಿ ಕೆಲ ಕಾಲ ಸಾರ್ವಜನಿಕರ ದರ್ಶನಕ್ಕಿಡಲಾಯ್ತು. ನಂತರ ಪರಕಾಲ ಮಠದ ವಾಹನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಶ್ರೀ ಲಕ್ಷ್ಮಿ ಜನಾರ್ಧನಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪಾಂಡವಪುರ ಮಾರ್ಗವಾಗಿ ಮೇಲುಕೋಟೆಗೆ ಕೊಂಡೊಯ್ಯಲಾಯಿತು.

ವೈರಮುಡಿ ಬ್ರಹ್ಮೋತ್ಸವಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್
ಮೇಲುಕೋಟೆಗೆ ಹೋಗುವ ಮಾರ್ಗಮಧ್ಯೆ ಸಿಗುವ ಪ್ರತಿಯೊಂದು ಗ್ರಾಮದಲ್ಲೂ ಗ್ರಾಮಸ್ಥರು ರಾಜಮುಡಿ ಮತ್ತು ವೈರಮುಡಿಗೆ ಪೂಜೆ ಸಲ್ಲಿಸಲಿದ್ದಾರೆ. ವೈರಮುಡಿ ಬ್ರಹ್ಮೋತ್ಸವಕ್ಕೆ ರಾಜ್ಯವಲ್ಲದೆ ಹೊರ ರಾಜ್ಯಗಳಿಂದಲೂ ಲಕ್ಷಾಂತರ ಮಂದಿ ಭಕ್ತರು ಆಗಮಿಸುವುದರಿಂದ ಯಾವುದೇ ತೊಂದರೆಯಾಗದಂತೆ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಅಲ್ಲದೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ ಬೊರಸೆ ತಿಳಿಸಿದ್ದಾರೆ.

ಇಂದು ಗುರುವಾರ ಸಂಜೆ ಮೇಲುಕೋಟೆಗೆ
ಇಂದು ಗುರುವಾರ ಸಂಜೆ 5.30ರ ವೇಳೆಗೆ ಮೇಲುಕೋಟೆ ತಲುಪಲಿರುವ ರಾಜಮುಡಿ ಮತ್ತು ವೈರಮುಡಿಯನ್ನು ಅಧಿಕಾರಿಗಳು, ಗಣ್ಯರುಗಳ ಎದುರು ಶಂಕ, ಚಕ್ರ, ಗಧಾ, ಪದ್ಮ, ಗಂಡಭೇರುಂಡ ಸೇರಿದಂತೆ 12 ಪ್ರಮುಖ ವಜ್ರ ಖಚಿತ ಆಭರಣಗಳನ್ನು ಪರಿಶೀಲನೆ (ಪರ್ಕಾವಣೆ) ಮಾಡಲಾಗುವುದು.

ಕಿರೀಟ ಧಾರಣೆ ಮಾಡಿ ರಾತ್ರಿ 8.30ರ ವೇಳೆಗೆ
ನಂತರ ಶ್ರೀದೇವಿ, ಭೂದೇವಿ ಜೊತೆಯಲ್ಲಿರುವಂತಹ ಶ್ರೀ ಚಲುವನಾರಾಯಣಸ್ವಾಮಿಗೆ ಕಿರೀಟ ಧಾರಣೆ ಮಾಡಿ ರಾತ್ರಿ 8.30ರ ವೇಳೆಗೆ ವೈರಮುಡಿ ಬ್ರಹ್ಮೋತ್ಸವ ಆರಂಭಗೊಳ್ಳಲಿದೆ. ಈ ಬ್ರಹ್ಮೋತ್ಸವವನ್ನು ವೀಕ್ಷಿಸಲು ಲಕ್ಷಾಂತರ ಮಂದಿ ಭಕ್ತರು ಕಾತರದಿಂದ ಕಾಯುತ್ತಿದ್ದಾರೆ.

12ನೆಯ ಶತಮಾನದ ಐತಿಹಾಸಿಕ ತಿರುನಾರಾಯಣಪುರಂನಲ್ಲಿ
ಕಾವೇರಿ ತಟದಲ್ಲಿರುವ 12ನೆಯ ಶತಮಾನದ ಐತಿಹಾಸಿಕ ತಿರುನಾರಾಯಣಪುರಂನಲ್ಲಿ ಯೋಗನರಸಿಂಹ ದೇವಸ್ಥಾನ ನಿರ್ಮಾಣವಾಗಿದೆ. ಯದುಗಿರಿ, ಯಾದವಗಿರಿ ಮತ್ತು ಯದುಶೈಲದ್ವೀಪವೆಂಬ ಬೆಟ್ಟದ ಮೇಲೆ ಇದು ನೆಲೆಗೊಂಡಿದೆ. ಮೇಲುಕೋಟೆಯು ಬೆಂಗಳೂರಿನಿಂದ 133 ಕಿಮೀ ದೂರದಲ್ಲಿ, ಮೈಸೂರಿನಿಂದ 51 ಕಿಮೀ ದೂರದಲ್ಲಿದೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications