Video: ಪ್ರಮಾಣವಚನ ಸ್ವೀಕರಿಸಲು ಎತ್ತಿನ ಗಾಡಿಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ ಮಂಡ್ಯ ಶಾಸಕ ರವಿ ಗಾಣಿಗ
ಬೆಂಗಳೂರು, ಮೇ 22: 2023ರ ನೂತನ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭೆ ಮೊದಲ ಅಧಿವೇಶನ ಆರಂಭಗೊಂಡಿದ್ದು, ನೂತನ ಶಾಸಕರೊಬ್ಬರು ಎತ್ತಿನ ಗಾಡಿಯಲ್ಲಿ ಆಗಮಿಸಿ ಎಲ್ಲರನ್ನು ಆಶ್ಚರ್ಯಚಕಿತಗೊಳಿಸಿದರು.
ಸೋಮವಾರ ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಶಾಸಕ ರವಿ ಗಾಣಿಗ ಸೋಮವಾರ ಎತ್ತಿನ ಬಂಡಿಯಲ್ಲಿ ಬೆಂಗಳೂರಿನ ವಿಧಾನಸೌಧಕ್ಕೆ ಆಗಮಿಸಿದರು. ಟಿಟ್ಟರ್ನಲ್ಲಿ ಪೋಸ್ಟ್ ಮಾಡಲಾದ ವೀಡಿಯೊದಲ್ಲಿ ಶಾಸಕರು ಸ್ವತಃ ಎತ್ತಿನ ಗಾಡಿಯಲ್ಲಿ ಸವಾರಿ ಮಾಡುತ್ತಿರುವುದನ್ನು ಕಾಣಬಹುದಾಗಿದೆ.

ಇತ್ತೀಚೆಗಷ್ಟೇ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಭದ್ರಕೋಟೆ ಎನಿಸಿದ್ದ ಮಂಡ್ಯ ವಿಧಾನಸಭಾ ಕ್ಷೇತ್ರವನ್ನು 2,019 ಮತಗಳ ಅಂತರದಿಂದ ರವಿ ಗಾಣಿಗ ಗೆದ್ದಿದ್ದರು. ಅವರು 61,411 ಮತಗಳನ್ನು ಪಡೆದಿದ್ದರು. ಅವರ ಪ್ರತಿಸ್ಪರ್ಧಿ ಜೆಡಿ (ಎಸ್) ಬಿ ಆರ್ ರಾಮಚಂದ್ರ ಅವರು 59,392 ಮತಗಳನ್ನು ಪಡೆದಿದ್ದರು.
#WATCH | Bengaluru, Karnataka: Ravi Ganiga, Congress MLA of Mandya constituency arrives at Vidhana Soudha in a bullock cart pic.twitter.com/yv3xQqaEr3
— ANI (@ANI) May 22, 2023
ಸೋಮವಾರದಿಂದ ಮೂರು ದಿನಗಳ ಕಾಲ ವಿಧಾನಸಭಾ ಅಧಿವೇಶನ ನಡೆಯುತ್ತದೆ. ಈ ವೇಳೆ ನೂತನವಾಗಿ ಆಯ್ಕೆಯಾದ ಶಾಸಕರು ಪ್ರಮಾಣ ವಚನ ಸ್ವೀಕರಿಸುತ್ತಾರೆ. ಇಂದು ಕಾಂಗ್ರೆಸ್ ಶಾಸಕ ರವಿ ಗಾಣಿಗ ವಿಧಾನಸೌಧದ ಕೆಂಗಲ್ ಗೇಟ್ ದ್ವಾರದ ಮುಖ್ಯ ಗೇಟ್ ಮೂಲಕ ಪಶ್ಚಿಮ ದ್ವಾರಕ್ಕೆ ಎತ್ತಿನ ಗಾಡಿಯಲ್ಲಿ ಆಗಮಿಸಿ ಗಮನಸೆಳೆದರು. ಎತ್ತಿಗಾಡಿಯ ಎರಡೂ ಬದಿಯಲ್ಲಿ ಕಬ್ಬುಗಳನ್ನು ಕಟ್ಟಿ ಸಿಂಗರಿಸಿದ್ದರು. ಶಾಸಕ ರವಿ ಗಾಣಿಗ ಹೆಗಲಿಗೆ ಹಸಿರು ಶಾಲು ಹೊದ್ದು ವಿಧಾನಸಭೆಗೆ ಆಗಮಿಸಿದರು.

ಬಳಿಕ ಮಾತನಾಡಿದ ಅವರು ಎತ್ತನಿಗಾಡಿ ಮಂಡ್ಯ ಜಿಲ್ಲೆಯ ಪ್ರತೀಕವಾಗಿದೆ. ಹೀಗಾಗಿ ಎತ್ತಿನಗಾಡಿ ಓಡಿಸುತ್ತಾ ವಿಧಾನಸೌಧಕ್ಕೆ ಆಗಮಿಸಿದ್ದೇನೆ. ನಮ್ಮ ಮಂಡ್ಯದ ಜನರ ಜೀವನಾಡಿ ಕಾವೇರಿ ಮತ್ತು ಕಬ್ಬಿಣ ಕಾರ್ಖಾನೆ. ಜಿಲ್ಲೆಯ ರೈತರ ಪರವಾಗಿ ಕಲಾಪದಲ್ಲಿ ಧ್ವನಿ ಎತ್ತುತ್ತೇನೆ ಎಂದು ರವಿಕುಮಾರ್ ಗೌಡ ಗಾಣಿಗ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು.
ಚನ್ನಗಿರಿ ಶಾಸಕ ಶಾಸಕ ಬಸವರಾಜ್ ಶಿವಗಂಗಾ ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಿನ ಮೇಲೆ ಪ್ರಮಾಣ ಸ್ವೀಕಾರ ಮಾಡಿದ್ದರು. ಇದಕ್ಕೆ ಸದನದಲ್ಲಿ ಇತರೆ ಸದನದ ಸದಸ್ಯರಿಂದ ಆಕ್ಷೇಪ ವ್ಯಕ್ತವಾಯಿತು. ಕೂಡಲೆ ಗೊಂದಲ ಬಗೆಹರಿಸಿದ ಸ್ಪೀಕರ್, ವ್ಯಕ್ತಿ ಹೆಸರಿನ ಮೇಲೆ ಪ್ರಮಾಣ ಮಾಡಿಸದಂತೆ ವಿಧಾನಸಭೆ ಕಾರ್ಯದರ್ಶಿಗೆ ಸೂಚನೆ ನೀಡಿದರು.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications