ಮಂಡ್ಯ : ಮೋನಿಕಾಳದ್ದು ಮರ್ಯಾದಾ ಹತ್ಯೆ
ಮಂಡ್ಯ, ಏಪ್ರಿಲ್ 05 : ಮಂಡ್ಯದ ಮೋನಿಕಾ ಹತ್ಯೆ ರಹಸ್ಯ ಬಯಲಾಗಿದೆ. ಇದು ಮರ್ಯಾದಾ ಹತ್ಯೆ ಎಂದು ಪೊಲೀಸರು ಹೇಳಿದ್ದಾರೆ. ಮೋನಿಕಾ ತಂದೆ ಮತ್ತು ಸೋದರ ಮಾವಂದಿರು ಸೇರಿ ಆಕೆಯನ್ನು ಕೊಲೆ ಮಾಡಿ, ನಂತರ ಆತ್ಮಹತ್ಯೆ ಎಂದು ನಂಬಿಸಿ ಶವವನ್ನು ಸುಟ್ಟು ಹಾಕಿದ್ದರು.
ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರು ಮೋನಿಕಾ ಹತ್ಯೆ ಬಗ್ಗೆ ಮಾಹಿತಿ ನೀಡಿದರು. 'ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ತಂದೆ ಎಚ್.ಬಿ.ಮೋಹನ್, ಸೋದರ ಮಾವ ಡಿ.ಸುರೇಶ್ ಅವರನ್ನು ಬಂಧಿಸಲಾಗಿದೆ. ಇನ್ನೊಬ್ಬ ಸೋದರ ಮಾವ ರಾಮಕೃಷ್ಣ ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ' ಎಂದು ಹೇಳಿದರು. [ರಾಮನಗರದಲ್ಲೊಂದು ಮರ್ಯಾದಾ ಹತ್ಯೆ?]

ಮರ್ಯಾದಾ ಹತ್ಯೆ : ಮೋನಿಕಾ ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು. ಈ ಬಗ್ಗೆ ಹಲವು ಬಾರಿ ಆಕೆಗೆ ಬುದ್ಧಿವಾದ ಹೇಳಿದರೂ ಆಕೆ ಕೇಳಿರಲಿಲ್ಲ. ಇದರಿಂದಾಗಿ ಕೋಪಗೊಂಡ ತಂದೆ ಮತ್ತು ಸೋದರ ಮಾವಂದಿರು ಏ.2ರಂದು ಆಕೆಯ ಮೇಲೆ ಹಲ್ಲೆ ಮಾಡಿ, ಕಾಲಿನಿಂದ ಕುತ್ತಿಗೆಯನ್ನು ತುಳಿದು ಕೊಲೆ ಮಾಡಿದ್ದರು. [ಬೆಳಗಾವಿಯಲ್ಲಿ ನಡೆಯಿತಾ ಮರ್ಯಾದಾ ಹತ್ಯೆ]
ನಂತರ ಮನೆ ಬಳಿ ಇರುವ ಮರಕ್ಕೆ ನೇಣು ಹಾಕಿದ್ದರು. ಮೋನಿಕಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಂಬಂಧಿಕರು ಮತ್ತು ಸ್ಥಳೀಯರನ್ನು ನಂಬಿಸಿ, ಅವರ ಸಹಾಯದಿಂದ ಶವವನ್ನು ಸುಟ್ಟು ಹಾಕಿ, ಸಾಕ್ಷ್ಯ ನಾಶ ಮಾಡಿದ್ದರು. [ದುರಾಸೆಗೆ ಮಗಳನ್ನೇ ಬಲಿಕೊಟ್ಟ ದಂಪತಿಗಳು]
ಪತ್ರ ಬರೆಸಿಕೊಂಡಿದ್ದರು : ಮೊದಲು ಮಾರ್ಚ್ 28ರಂದು ಮೋನಿಕಾ ನಾಪತ್ತೆಯಾಗಿದ್ದಳು. ಮಾ.31ರಂದು ಈ ಕುರಿತು ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಏ.1ರಂದು ಪೋಷಕರ ಜೊತೆ ಠಾಣೆಗೆ ಬಂದಿದ್ದ ಮೋನಿಕಾ, ಅವರ ಜೊತೆ ತೆರಳುವುದಾಗಿ ಪತ್ರ ಬರೆದುಕೊಟ್ಟಿದ್ದಳು. [ತಮಿಳುನಾಡು : ಪ್ರೇಮಿಯೊಬ್ಬನ ಮರ್ಯಾದಾ ಹತ್ಯೆ]
ಏ.2ರಂದು ಆಕೆ ಪುನಃ ಮನೆಯಿಂದ ನಾಪತ್ತೆಯಾಗಿದ್ದಳು. ಪೋಷಕರು ಆಕೆಯನ್ನು ಹುಡುಕಿ ಕರೆದುಕೊಂಡು ಬಂದಿದ್ದರು. ಪ್ರೀತಿಸಿದ ಹುಡುಗನೊಂದಿಗೆ ಹೋಗು ನಮ್ಮ ಅಭ್ಯಂತರವಿಲ್ಲ. ಆದರೆ, ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದುಕೊಟ್ಟು ಹೋಗು ಎಂದು ಕುಟುಂಬದವರು ಹೇಳಿದ್ದರು.
ಮೋನಿಕಾ ಪತ್ರ ಬರೆದುಕೊಟ್ಟ ನಂತರ ಆಕೆಯ ಮೇಲೆ ಹಲ್ಲೆ ಮಾಡಿದ ತಂದೆ ಮತ್ತು ಸೋದರ ಮಾವಂದಿರು ಆಕೆಯನ್ನು ಕೊಲೆ ಮಾಡಿದ್ದರು. ಆರೋಪಿಗಳ ಹೇಳಿಕೆಯನ್ನು ದಾಖಲಿಸಿಕೊಂಡ ಪೊಲೀಸರು ಕೊಲೆ ಮತ್ತು ಸಾಕ್ಷ್ಯ ನಾಶ ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ












Click it and Unblock the Notifications