ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

BREAKING: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್!

|
Google Oneindia Kannada News

ಬೆಂಗಳೂರು, ಜು. 17: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಭೇಟಿ ಮಾಡಿ ಚರ್ಚಿಸಿದ್ದಾರೆ. ರಾಜಭವನಕ್ಕೆ ತೆರಳಿದ್ದ ಸಂಸದೆ ಸುಮಲತಾ ಅಂಬರೀಶ್ ಅವರು ಭೇಟಿ ಸಂದರ್ಭದಲ್ಲಿ ರಾಜ್ಯಪಾಲರಿಗೆ ಮನವಿಯೊಂದನ್ನು ಕೊಟ್ಟಿದ್ದಾರೆ.

ಕೆಆರ್‌ಎಸ್‌ ಅಣೆಕಟ್ಟಿನ ಸುತ್ತಲೂ ಅಕ್ರಮ ಗಣಿಗಾರಿಕೆ ಮಾಡಲಾಗುತ್ತಿದೆ ಎಂಬ ಆರೋಪವನ್ನು ಸಂಸದೆ ಸುಮಲತಾ ಅಂಬರೀಶ್ ಮಾಡಿದ್ದರು. ಆ ಆರೋಪದ ಬೆನ್ನಲ್ಲಿಯೇ ರಾಜ್ಯಪಾಲರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯಪಾಲರ ಭೇಟಿಯ ಬಳಿಕ ಮಾತನಾಡಿರುವ ಅವರು, "ರಾಜ್ಯಪಾಲರು ಹೊಸದಾಗಿ ಬಂದಿದ್ದಾರೆ. ಹೀಗಾಗಿ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದ್ದೇನೆ" ಎಂದು ಹೇಳಿದ್ದಾರೆ.

"ಮಂಡ್ಯ ಜಿಲ್ಲೆಯಲ್ಲಿನ ಅಕ್ರಮ ಗಣಿಗಾರಿಕೆ ಬಗ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ವಿವರಿಸಿದ್ದೇನೆ. ಜೊತೆಗೆ ಕೆಆರ್‌ಎಸ್ ಅಣೆಕಟ್ಟು ಸಮೀಪ ಇರುವುದನ್ನೂ ಹೇಳಿದ್ದೇನೆ. ಈ ಬಗ್ಗೆ ಮನವಿಪತ್ರವೊಂದನ್ನು ರಾಜ್ಯಪಾಲರಿಗೆ ಕೊಟ್ಟಿದ್ದೇನೆ. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಹಿತಿ ಕೊಡುವುದಾಗಿ ಅವರು ಭರವಸೆ ಕೊಟ್ಟಿದ್ದಾರೆ" ಎಂದು ಸಂಸದೆ ಸುಮಲತಾ ಹೇಳಿದ್ದಾರೆ.

Mandya MP Sumalatha met Governor Thawar Chand Gehlot in Raj Bhavan

Recommended Video

Yeddyurappa ರಾಜಿನಾಮೆ ಕೊಡುವುದರ ಬಗ್ಗೆ ಕೊನೆಗೂ ಪ್ರತಿಕ್ರಿಯೆ ನೀಡಿದ್ದಾರೆ | Oneindia Kannada

ಇನ್ನು ಚಿತ್ರನಟ ದರ್ಶನ್ ಹಾಗೂ ಉಮಾಪತಿ ಅವರ ನಡುವೆ ಆಸ್ತಿ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಸುಮಲತಾ ಮಾತನಾಡಿ, "ಪ್ರಕರಣದ ಬಗ್ಗೆ ನಾನು ಮಾತಾಡೋಕೆ ಇಷ್ಟ ಪಡುವಿದಿಲ್ಲ. ನಾನು ಅನಾವಶ್ಯಕವಾಗಿ ಹೇಳಿಕೆ ಕೊಡುವುದು ಸರಿಯಲ್ಲ. ಹೊಟೇಲ್‌ನಲ್ಲಿ ನಡೆದಿದೆ ಎನ್ನಲಾದ ಹಲ್ಲೆ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ನಡೆದು ಸತ್ಯಾಂಶ ಹೊರಗೆ ಬರಲಿ. ಹಲ್ಲೆ ಪ್ರಕರಣ ಬಗ್ಗೆ ನನಗೇ ಗೊತ್ತಿಲ್ಲ, ನಾನು ನನ್ನ ಕೆಲಸದ ಕಡೆ ಗಮನ ಕೊಟ್ಟಿದ್ದೇನೆ" ಎಂದಿದ್ದಾರೆ.

English summary
Mandya MP Sumalatha Ambareesh met Governor Thawar Chand Gehlot in Raj Bhavan. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X