ಮುಡಾ ಹಗರಣ ಆರೋಪಿ ಕೆಬ್ಬಳ್ಳಿ ಆನಂದ್ ಗೆ 'ಡಾನ್' ಬೆದರಿಕೆ?
ಮಂಡ್ಯ, ಜ. 31: ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ಗಳ ಹಣ ದುರುಪಯೋಗದ ಆರೋಪ ಎದುರಿಸುತ್ತಿರುವ ಕೆ. ಆನಂದ್ ಅಲಿಯಾಸ್ ಕೆಬ್ಬಳ್ಳಿ ಆನಂದ್ ಅವರಿಗೆ ಹಣ ನೀಡುವಂತೆ ಡಾನ್ ಕುಮಾರ್ ಎಂಬಾತ ಬೆದರಿಕೆ ಕರೆ ಮಾಡಿರುವ ಸುದ್ದಿ ಬೆಳಕಿಗೆ ಬಂದಿದೆ. ಈ ಬಗ್ಗೆ ಖುದ್ದು ಆನಂದ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿರುವ ಕುಮಾರ್ ಅಲಿಯಾಸ್ ಡಾನ್ ಕುಮಾರ ಪ್ರತ್ಯೇಕ ಮೂರು ಮೊಬೈಲ್ ನಿಂದ ಕರೆ ಮಾಡಿ ಹಣ ನೀಡುವಂತೆ ಬೆದರಿಕೆ ಹಾಕಿರುವ ಬಗ್ಗೆ ಇದೀಗ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಗೆ ಆನಂದ್ ದೂರು ನೀಡಿದ್ದಾರೆ.[ಮಂಡ್ಯ ಮುಡಾ: 5 ಕೋಟಿ ಗೋಲ್ ಮಾಲ್ 3 ಜನ ಬಲೆಗೆ]

ಕೆಬ್ಬಳ್ಳಿ ಆನಂದ್ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ 5 ಕೋಟಿ ರೂ. ಮತ್ತು ರಾಮನಗರ-ಚನ್ನಪಟ್ಟಣ ನಗರಾಭಿವೃದ್ಧಿ(ಆರ್ ಸಿಯುಡಿಎ) ಪ್ರಾಧಿಕಾರದಿಂದ 9.9 ಕೋಟಿ ರೂ.ಗೂ ಹೆಚ್ಚು ಹಣ ದುರುಪಯೋಗ ಪ್ರಕರಣದ ಎದುರಿಸುತ್ತಿದ್ದು, ಬೇಲೇಕೇರಿ ಅದಿರು ಪ್ರಕರಣದಲ್ಲಿಯೂ ಈತನ ನಂಟಿದೆ ಎನ್ನಲಾಗುತ್ತಿದೆ. 2012ರಲ್ಲಿ ನಡೆದ ನಗರಾಭಿವೃದ್ಧಿ ಪ್ರಾಧಿಕಾರಗಳ ಹಣ ದುರುಪಯೋಗ ಪ್ರಕರಣದಲ್ಲಿ ಆನಂದ್ ಸೇರಿದಂತೆ ಎರಡೂ ಪ್ರಾಧಿಕಾರಗಳ ಅಂದಿನ ಆಯುಕ್ತರು ಸೇರಿದಂತೆ ಹಲವರು ಜೈಲ್ ಸೇರಿದ್ದರು.[ಜೆಡಿಎಸ್ ಶಾಸಕರು ಮುಡಾ ಸೈಟು ನುಂಗಿದ ಕಥೆ]
ಈ ನಡುವೆ ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿರುವ ಕುಮಾರ್ ಅಲಿಯಾಸ್ ಡಾನ್ ಕುಮಾರ ಎಂಬಾತ ಕೆಬ್ಬಳ್ಳಿ ಆನಂದ್ ಗೆ ಹಣ ನೀಡುವಂತೆ ಜನವರಿ 26 ರಿಂದ 29ರ ಅವಧಿಯಲ್ಲಿ ಅನೇಕ ಬಾರಿ ಬೆದರಿಕೆ ಕರೆಗಳನ್ನು ಮಾಡಿದ್ದಾನೆ ಎಂದು ಆನಂದ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಐಪಿಸಿ ಸೆಕ್ಷನ್ 384, 506ರ ಅನ್ವಯ ಪ್ರಕರಣ ದಾಖಲಿಸಿಕೊಂಡು ಎಫ್ ಐಆರ್ ಹಾಕಿದ್ದಾರೆ ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಮಂಡ್ಯ ಸಬ್ ಡಿವಿಷನ್ ಡಿಎಸ್ಪಿ ಟಿಜೆ ಉದೇಶ ಅವರು ಹೇಳಿದ್ದಾರೆ. (ಒನ್ಇಂಡಿಯಾ ಸುದ್ದಿ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications