ಪಾಂಡವಪುರದಲ್ಲಿ ಮೈದುನನೇ ಅತ್ತಿಗೆಯನ್ನು ಕೊಂದ
ಮಂಡ್ಯ, ಮೇ 29: ಮೈದುನನೇ ಅತ್ತಿಗೆಯನ್ನು ಕೊಲೆಗೈದ ಘಟನೆ ಪಾಂಡವಪುರ ತಾಲೂಕಿನ ಕಣಿವೆಕೊಪ್ಪಲು ಗ್ರಾಮದಲ್ಲಿ ನಡೆದಿದ್ದು, ಘಟನೆಗೆ ಅಕ್ರಮ ಸಂಬಂಧವೇ ಕಾರಣ ಎನ್ನಲಾಗಿದೆ.
ಗ್ರಾಮದ ನಿವಾಸಿ ಟಿಪ್ಪರ್ ಚಾಲಕ ಬಸವರಾಜು ಎಂಬವರ ಪತ್ನಿ ವಿಶಾಲಾಕ್ಷಿ (36) ಎಂಬಾಕೆಯೆ ಮೈದುನನಿಂದ ಕೊಲೆಯಾದ ಮಹಿಳೆ. ಈಕೆಯ ಮೈದುನ ರಾಜು ಹಂತಕನಾಗಿದ್ದು, ಕೃತ್ಯ ನಡೆಸಿದ ಪರಾರಿಯಾಗಿದ್ದಾನೆ. ರಾಜು ಅಣ್ಣನ ಮನೆ ಪಕ್ಕದಲ್ಲೇ ವಾಸವಾಗಿದ್ದನು. ಅಣ್ಣ ಬಸವರಾಜು ಟಿಪ್ಪರ್ ಚಾಲಕನಾಗಿ ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದನು.

ರಾಜು ಮದುವೆಯಾಗಿದ್ದನಾದರೂ ಕಳೆದ ಐದು ವರ್ಷಗಳ ಹಿಂದೆಯೇ ತನ್ನ ಹೆಂಡತಿಯನ್ನು ತೊರೆದಿದ್ದನು. ಈತ ಅತ್ತಿಗೆ ವಿಶಾಲಾಕ್ಷಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನು ಎನ್ನಲಾಗಿದೆ.
ಪತಿ ಬಸವರಾಜು ಕೆಲಸಕ್ಕೆಂದು ಮೈಸೂರಿಗೆ ತೆರಳಿದ್ದು, ಪತ್ನಿ ವಿಶಾಲಾಕ್ಷಿ ಮೈದುನ ರಾಜು ಮನೆಗೆ ತೆರಳಿದ್ದಾಳೆ. ಮಧ್ಯಾಹ್ನದಿಂದಲೇ ಮೈದುನನೊಂದಿಗೆ ಇದ್ದಳು. ಈ ನಡುವೆ ಅವರ ನಡುವೆ ಯಾವುದೋ ವಿಚಾರಕ್ಕೆ ಜಗಳವಾಗಿದೆ. ಅದು ತಾರಕಕ್ಕೇರಿದ್ದು, ಸಿಟ್ಟಿಗೆದ್ದ ರಾಜು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ಬಾಗಿಲು ಹಾಕಿಕೊಂಡು ಅಲ್ಲಿಂದ ಪರಾರಿಯಾಗಿದ್ದಾನೆ.
ಇತ್ತ ಬಸವರಾಜು ತಾಯಿ ಸಿದ್ದಮ್ಮ ಅವರು ಮಧ್ಯಾಹ್ನ ಮನೆಯಿಂದ ಹೊರಹೋದ ಸೊಸೆ ಮರಳಿ ಬಾರದ್ದರಿಂದ ಎಲ್ಲೆಡೆ ಹುಡುಕಾಡಿ ಕೊನೆಗೆ ರಾಜು ಮನೆಗೆ ಹೋಗಿ ನೋಡಿದಾಗ ಅಲ್ಲಿ ಕೊಲೆಯಾಗಿರುವುದು ಗೊತ್ತಾಗಿದೆ. ಕೂಡಲೇ ಪಕ್ಕದವರಿಗೆ ವಿಷಯ ತಿಳಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಪಾಂಡವಪುರ ಪಟ್ಟಣ ಠಾಣೆಯ ಪಿಎಸ್ಐ ಅಯ್ಯನಗೌಡ, ಎಎಸ್ಐ ಜವರೇಗೌಡ, ಶಿವಶಂಕರ್ ಮತ್ತಿತರರು ಸ್ಥಳಕ್ಕಾಗಮಿಸಿ ಮಹಜರು ನಡೆಸಿ, ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ವಾರಸುದಾರರಿಗೆ ನೀಡಲಾಗಿದೆ. ಪರಾರಿಯಾಗಿರುವ ಹಂತಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications