ಮಂಡ್ಯ: ಬ್ಲೂಫಿಲಂ ಪ್ರದರ್ಶಿಸುತ್ತಿದ್ದ ಚಿತ್ರಮಂದಿರಕ್ಕೆ ಬೀಗ
ಮಂಡ್ಯ, ಡಿಸೆಂಬರ್, 04: ಚಿತ್ರಮಂದಿರಗಳತ್ತ ಪ್ರೇಕ್ಷಕರು ಬರುತ್ತಿಲ್ಲ ಎಂಬ ಆರೋಪ ಎಲ್ಲೆಡೆಯೂ ಕೇಳಿ ಬರುತ್ತಿದೆ. ಆದರೆ ನಗರದ ಚಿತ್ರಮಂದಿರವೊಂದರಲ್ಲಿ ಅಶ್ಲೀಲ ಚಲನಚಿತ್ರಗಳನ್ನು ಪ್ರದರ್ಶಿಸುತ್ತಾ ಪ್ರೇಕ್ಷಕರನ್ನು ಸೆಳೆದು ಹಣ ಮಾಡುತ್ತಿದ್ದ ಕೃತ್ಯ ಇದೀಗ ಬಯಲಾಗಿದೆ.
ಬ್ಲೂ ಫಿಲಂ ಪ್ರದರ್ಶಿಸುತ್ತಿದ್ದ ನಗರದ ವಿಶ್ವೇಶ್ವರಯ್ಯ ರಸ್ತೆಯ ಮನೋರಂಜನ್ ವೀಡಿಯೋ ಚಿತ್ರಮಂದಿರ ಮೇಲೆ ಡಿಸೆಂಬರ್ 2ರ ಬುಧವಾರ ರಾತ್ರಿ ದಾಳಿ ಮಾಡಿದ ಪೊಲೀಸರು ಚಿತ್ರಮಂದಿರದ ಮಾಲೀಕ ಶಿವಕುಮಾರ್ (30)ನನ್ನು ಬಂಧಿಸಿದ್ದಾರೆ.[ಸರ್ಕಾರಿ ಕಂಪ್ಯೂಟರ್ ಗಳಲ್ಲಿ ಡರ್ಟಿ ಪಿಕ್ಚರ್ಸ್ ಇನ್ನಿಲ್ಲ]

ನಗರದ ಕೆಲವು ಚಿತ್ರಮಂದಿರಗಳಿಗೆ ಪ್ರೇಕ್ಷಕರ ಕೊರತೆಯಿದ್ದರೂ ನಗರದ ವಿಶ್ವೇಶ್ವರಯ್ಯ ರಸ್ತೆಯಲ್ಲಿದ್ದ ಮನೋರಂಜನ್ ವೀಡಿಯೋ ಚಿತ್ರಮಂದಿರದಲ್ಲಿ ಮಾತ್ರ ಪ್ರೇಕ್ಷಕರ ಕೊರತೆ ಕಂಡು ಬರುತ್ತಿರಲಿಲ್ಲ. ಸದಾ ಪಡ್ಡೆ ಹುಡುಗರು ಕಿಕ್ಕಿರಿದು ತುಂಬಿರುತ್ತಿದ್ದರು. ಆದರೆ ಜನಕ್ಕೆ ಇದರ ಹಿಂದಿನ ಮರ್ಮ ಮಾತ್ರ ಗೊತ್ತಾಗಿರಲಿಲ್ಲ.
ಬಹುತೇಕ ಜನರಿಗೆ ಅಲ್ಲಿ ಬಹು ಭಾಷೆಯ ಅಶ್ಲೀಲ ಚಿತ್ರಗಳ ಪ್ರದರ್ಶನ ನಡೆಯುತ್ತಿದೆ ಎಂಬ ಮಾಹಿತಿ ಇದ್ದರೂ ಸುಮ್ಮನಾಗಿದ್ದರು. ಹಾಗೆ ನೋಡಿದರೆ ಈ ವೀಡಿಯೋ ಚಿತ್ರ ಮಂದಿರದ ಮೇಲೆ 2004ರಲ್ಲಿ ದಾಳಿ ಮಾಡಲಾಗಿತ್ತು.[ಕರ್ನಾಟಕ: ಸಾಮಾಜಿಕ ಜಾಲ ತಾಣಗಳಿಗೂ ಈಗ ಕೊಕ್ಕೆ]
ನಂತರ ಒಂದೆರಡು ಬಾರಿ ದಾಳಿ ಮಾಡಿದ್ದರೂ ಅಧಿಕಾರಿಗಳು ಲಂಚ ಪಡೆದು ಸುಮ್ಮನಾಗುತ್ತಿದ್ದುದರಿಂದ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಹೀಗಾಗಿ ರಾಜಾರೋಷವಾಗಿ ಅಶ್ಲೀಲ ಚಿತ್ರಗಳ ಪ್ರದರ್ಶನ ನಡೆಯುತ್ತಿತ್ತು.
ಈ ಬಗ್ಗೆ ದೂರುಗಳು ಬಂದ ಹಿನ್ನಲೆಯಲ್ಲಿ ಖಚಿತ ಮಾಹಿತಿ ಪಡೆದ ಉಪ ವಿಭಾಗಾಧಿಕಾರಿ ಅರುಳ್ ಕುಮಾರ್ ನೇತೃತ್ವದ ತಂಡ ಡಿಸೆಂಬರ್ ೨ರ ಬುಧವಾರ ರಾತ್ರಿ ಮನೋರಂಜನ್ ಚಿತ್ರಮಂದಿರದ ಮೇಲೆ ದಾಳಿ ನಡೆಸಿ ವಿವಿಧ ಭಾಷೆಗಳ ಅಶ್ಲೀಲ ಸಿಡಿ, ಪ್ರೊಜೆಕ್ಟರ್ ವಶಪಡಿಸಿಕೊಂಡಿದ್ದು, ಚಿತ್ರಮಂದಿರಕ್ಕೆ ಬೀಗ ಜಡಿದು ಸೀಲ್ ಮಾಡಿದ್ದಾರೆ. ನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications