ಬೆಂಗಳೂರಲ್ಲಿ ಕರ್ನಾಟಕದ ಮೊದಲ ಮಂಗಳ ಮುಖಿಯರ 'ಮಂಗಳ' ಗ್ರಾಮ
ಬೆಂಗಳೂರು, ಜೂ. 15: ಮಂಗಳಮುಖಿಯರಿಗೆ ಪ್ರತ್ಯೇಕ ನಗರ ನಿರ್ಮಾಣ ಮಾಡುವ ಮೂಲಕ ಕರ್ನಾಟಕ ವಸತಿ ಇಲಾಖೆ ಇತಿಹಾಸ ಸೃಷ್ಟಿಸಲಿದೆ. ಬೆಂಗಳೂರಿನ ಹೊರ ವಲಯದಲ್ಲಿರುವ ದೊಡ್ಡ ಆಲದ ಮರದ ಬಳಿ ಮಂಗಳಮುಖಿಯರಿಗೆ ಪ್ರತ್ಯೇಕ ನಗರ ನಿರ್ಮಾಣ ಮಾಡಿಕೊಡಲಾಗುತ್ತಿದೆ. ಸುಮಾರು 2.2 ಎಕರೆ ಜಾಗದಲ್ಲಿ ಮಂಗಳಮಖಿಯರಿಗೆ ಮನೆ ನಿರ್ಮಿಸಿ ಕೊಡಲು ವಸತಿ ಇಲಾಖೆ ಮುಂದಾಗಿದೆ. ವಸತಿ ಸಚಿವ ವಿ. ಸೋಮಣ್ಣ ಅವರು ಮಂಗಳಮುಖಿಯರ ನಗರ ನಿರ್ಮಾಣಕ್ಕೆ ಅಡಿಗಲ್ಲು ಹಾಕಿ ಪೂಜೆ ನೆರವೇರಿಸಿದ್ದಾರೆ.
ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ಮಂಗಳಮುಖಿಯರಿಗೆ ಪ್ರತ್ಯೇಕ ವಸತಿ ಸಮುಚ್ಚಯ ನಿರ್ಮಾಣ ಮಾಡಿಕೊಡುತ್ತಿದೆ. ಕೆಂಗೇರಿ ಸಮೀಪದ ಮುಕ್ತಿನಾಗ ದೇವಸ್ಥಾನದ ಬಳಿ ಮಂಗಳಮುಖಿಯರ ವಸತಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.
''ಎರಡು ಎಕರೆ ಜಾಗದಲ್ಲಿ ಒಟ್ಟು 306 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಎರಡು ಹಂತಸ್ತಿನ ಈ ವಸತಿ ಸಮುಚ್ಚಯದಲ್ಲಿ ಸಿಂಗಲ್ ಬೆಡ್ ರೂಮ್ ಮನೆಗಳು ನಿರ್ಮಾಣವಾಗಲಿವೆ ಎಂದು ಕೊಳಚೆ ನಿರ್ಮೂಲನಾ ಮಂಡಳಿಯ ಇಂಜಿನಿಯರ್ ಸ್ಪಷ್ಟಪಡಿಸಿದ್ದಾರೆ. ಇನ್ನು ಕೆಲವು ವರ್ಷ ಮುಗಿದರೆ ಈ ಪ್ರದೇಶವೂ ಸಹ ಬೆಂಗಳೂರಿನ ಭಾಗವಾಗಲಿದೆ. ಈಗಲೂ ಸಹ ಭೂಮಿ ಪಡೆಯುವುದು ತುಂಬಾ ಕಷ್ಟವಾಗಿದೆ. ಮಂಗಳಮುಖಿಯರ ಸಮುದಾಯಕ್ಕೆ ಸೂರು ಕಲ್ಪಿಸುತ್ತಿರುವ ಈ ಯೋಜನೆಯಿಂದಾಗಿ ನನ್ನ ಬಹುದಿನಗಳ ಕನಸು ಈಡೇರಿದಂತಾಗಿದೆ'' ಎಂದು ವಸತಿ ಸಚಿವ ವಿ. ಸೋಮಣ್ಣ ಸಂತಸ ತೋಡಿಕೊಂಡಿದ್ದಾರೆ.

ಬೋರ್ವೆಲ್ನಲ್ಲಿ ನೀರು
ಬೋರ್ವೆಲ್ನಲ್ಲಿ ನೀರು: ಮಂಗಳಮುಖಿಯರ ನಗರದಲ್ಲಿ ಈಗಾಗಲೇ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಬೋರ್ ವೆಲ್ ಕೊರೆಯಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಭೂಮಿಯನ್ನು ಬೋರ್ಡ್ಗೆ ಹಸ್ತಾಂತರಿಸಿದ್ದಾರೆ. ಮುಂದಿನ ಅರು ತಿಂಗಳಲ್ಲಿ ಈ ವಸತಿ ಸಮುಚ್ಚಯಕ್ಕೆ ಬೇಕಾಗಿರುವ ಮೂಲ ಸೌಕರ್ಯಗಳನ್ನು ಪೂರ್ಣಗೊಳಿಸುವಂತೆ ಇಂಜಿನಿಯರ್ಗಳಿಗೆ ಸೂಚಿಸಿದ್ದೇನೆ ಎಂದು ಸೋಮಣ್ಣ ಅವರು ತಿಳಿಸಿದ್ದಾರೆ.

ಮಂಗಳಮುಖಿಯರಿಗೆ ಸೂರು
ಮಂಗಳಮುಖಿಯರಿಗೆ ಸೂರು ಕಲ್ಪಿಸುವ ಈ ಸದುದ್ದೇಶಕ್ಕೆ ಸಮತಾ ಸೈನಿಕ ದಳದ ವೆಂಕಟಸ್ವಾಮಿ ತುಂಬಾ ಬೆಂಬಲ ಕೊಟ್ಟಿದ್ದಾರೆ ಎಂದು ಸಚಿವರು ಸ್ಮರಿಸಿದರು. ಕಳೆದ ಹದಿನೈದು ವರ್ಷಗಳಿಂದ ಮಂಗಳಮುಖಿಯರಿಗೆ ಸೂರು ಕಲ್ಪಸುವ ವಿಚಾರದಲ್ಲಿ ಹೋರಾಟ ನಡೆಸುತ್ತಿದ್ದೇವೆ. ಕೊನೆಗೂ ಅದಕ್ಕೆ ತಾರ್ಕಿಕ ಅಂತ್ಯ ಸಿಕ್ಕಿದೆ. ವಸತಿ ಸಚಿವರ ವೈಯಕ್ತಿಕ ಕಾಳಜಿ ವಹಿಸಿದ ಪರಿಣಾಮ ಮಂಗಳಮುಖಿಯರಿಗೆ ಸೂರು ಪಡೆಯುವ ಕನಸು ನನಸಾಗಿದೆ ಎಂದು ಸಮತಾ ಸೈನಿಕ ದಳದ ಮುಖ್ಯಸ್ಥ ವೆಂಕಟಸ್ವಾಮಿ ತಿಳಿಸಿದರು.

ಮಂಗಳಮುಖಿಯರ ಸಂಘದ ಅಧ್ಯಕ್ಷೆ ಗಾಯಿತ್ರಿ
ಅಖಿಲ ಕರ್ನಾಟಕ ಮಂಗಳಮುಖಿಯರ ಸಂಘದ ಅಧ್ಯಕ್ಷೆ ಗಾಯಿತ್ರಿ ಮಾತನಾಡಿ, ಬೆಂಗಳೂರಿನಲ್ಲಿ ನಮ್ಮ ಸಮುದಾಯ ಮನೆ ಬಾಡಿಗೆ ಪಡೆಯುವುದು ತುಂಬಾ ಕಷ್ಟ. ನಮಗೆ ಮನೆ ಕೊಟ್ಟರೂ ಮಾಲೀಕರು ಹೆಚ್ಚು ಬಾಡಿಗೆ ಪೀಕುತ್ತಾರೆ. ಅಲ್ಲದೇ ನಾನಾ ಷರತ್ತುಗಳನ್ನು ವಿಧಿಸುತ್ತಾರೆ. ನಮಗೆ ನಾನಾ ರೂಪದಲ್ಲಿ ಹಿಂಸೆ ಕೊಡುತ್ತಾರೆ. ನಮ್ಮ ಸಮುದಾಯಕ್ಕೆ ಪ್ರತ್ಯೇಕ ಗ್ರಾಮ ನಿರ್ಮಾಣ ಮಾಡುತ್ತಿರುವ ಈ ಯೋಜನೆಯಿಂದ ತುಂಬಾ ಸಂತಸವಾಗಿದೆ.

ನಮ್ಮ ಸಮುದಾಯವೇ ನಿರ್ವಹಣೆ ಮಾಡಲಿದೆ
ವಾಣಿಜ್ಯ ಕಟ್ಟಡ, ಶಾಲೆ, ಆಸ್ಪತ್ರೆ ಸೇರಿದಂತೆ ಎಲ್ಲಾ ಮೂಲ ಸೌಕರ್ಯಗಳು ಇಲ್ಲಿ ಇರಲಿವೆ. ಇವನ್ನು ನಮ್ಮ ಸಮುದಾಯವೇ ನಿರ್ವಹಣೆ ಮಾಡಲಿದೆ. ಈಗಾಗಲೇ 220 ಮಂಗಳ ಮುಖಿಯರನ್ನು ಗುರುತಿಸಿದ್ದೇವೆ. ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣದಿಂದ ಬರುವ ಮಂಗಳ ಮುಖಿಯರಿಗೆ ಇಲ್ಲಿ ವಸತಿ ಸೌಲಭ್ಯ ಕೊಡಲಾಗುವುದಿಲ್ಲ. ಕೇವಲ ಕರ್ನಾಟಕದಲ್ಲಿರುವ ಮಂಗಳಮುಖಿಯರಿಗೆ ಮಾತ್ರ ವಸತಿಗಳನ್ನು ಮೀಸಲಿಡಲಾಗಿದೆ ಎಂದು ಸ್ಪಷ್ಟಪಡಿಸಿದರು.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications